ರಾಯಚೂರು : ರಾಯಚೂರಿನಲ್ಲಿ ಘೋರವಾದ ದುರಂತ ಒಂದು ಸಂಭವಿಸಿದ್ದು, ಮಂತ್ರಾಲಯಕ್ಕೆ ಭೇಟಿ ನೀಡಿದ್ದ ಮೂವರು ಯುವಕರು ತುಂಗಭದ್ರಾ ನದಿಯಲ್ಲಿ ಈಜಲು ತೆರಳಿದಾಗ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಮೃತ ಯುವಕರನ್ನು ಹಾಸನ ಗೆಳೆಯ ಅರಸೀಕೆರೆ ತಾಲೂಕಿನ ಜಾಗವಲ್ ಗ್ರಾಮದ ಅಜಿತ್ (20), ಸಚಿನ್ (20) ಹಾಗೂ ಪ್ರಮೋದ್ (19) ಎಂದು ಗುರುತಿಸಲಾಗಿದೆ.
ಭಾರಿ ಮಳೆಯಿಂದಾಗಿ ತುಂಗಭದ್ರಾ ನದಿ ಅಪಾಯದ ಮಟ್ಟದಲ್ಲಿ ಹರಿಯುತ್ತಿದ್ದು, ನದಿತೀರಕ್ಕೆ ಹೋಗದಂತೆ ನಿರ್ಬಂಧ ವಿಧಿಸಿದ್ದರೂ ನಿರ್ಲಕ್ಷ ಮಾಡಿ ನಡಿಯಲ್ಲಿ ಈಜಲು ಹೋಗಿದ್ದ ಮೂವರು ನಿನ್ನೆ ತುಂಗಭದ್ರಾ ನದಿಯಲ್ಲಿ ಕೊಚ್ಚಿ ಹೋಗಿದ್ದರು. ತೀವ್ರ ಶೋಧಕಾರ್ಯಾಚರಣೆ ಬಳಿಕ ಇಂದು ಮೂವರ ಮೃತದೇಹ ಪತ್ತೆಯಾಗಿದೆ.
ನಿನ್ನೆ ಸ್ನೇಹಿತರ ತಂಡ ಮಂತ್ರಾಲಯಕ್ಕೆ ಬಂದಿದ್ದರು ಇವರೆಲ್ಲರೂ ಡಿಗ್ರಿ ಓದುತ್ತಿದ್ದರು ತುಂಗಭದ್ರಾ ನದಿಯ ಬಳಿ ಐವರು ಸ್ಥಾನ ಮಾಡುವ ವೇಳೆ ಈ ಒಂದು ಅವಘಡ ಸಂಭವಿಸಿದೆ. ನೀರಿನ ರಭಸಕ್ಕೆ ಮೂವರು ವಿದ್ಯಾರ್ಥಿಗಳು ನದಿಯಲ್ಲಿ ಕೊಚ್ಚಿ ಹೋಗಿದ್ದರು. ನದಿಗೆ ಹೆಚ್ಚಿನ ನೀರು ಹರಿಬಿಟ್ಟಿರುವುದ್ದರಿಂದ, ನೀರಿನ ಸೆಳೆತಕ್ಕೆ ಸಿಲುಕಿ ಕೊಚ್ಚಿಕೊಂಡು ಹೋಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಮಂತ್ರಾಲಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದೆ.