ಮುಂಬೈ : ತಮ್ಮದೇ ಪಿಸ್ತೂಲ್ನಿಂದ ಬಾಲಿವುಡ್ ನಟ ಗೋವಿಂದ್ ಗುಂಡು ಹಾರಿಸಿಕೊಂಡಿದ್ದರಿಂದ, ಆಕಸ್ಮಿಕವಾಗಿ ಫೈರ್ ಆಗಿದ್ದರಿಂದ ಅವರ ಕಾಲಿಗೆ ತೀವ್ರ ಗಾಯ ಆಗಿತ್ತು. ನಂತರ ಅವರನ್ನು ಮುಂಬೈನ ಅಂಧೇರಿಯ ಕೃತಿ ಕೇರ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ಇದೀಗ ಅವರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಹೌದು ಕಳೆದ ಅಕ್ಟೊಬರ್ 1 ರಂದು ನಸುಕಿನ ಜಾವ ತಮ್ಮದೇ ಪಿಸ್ತುಲ್ ನಿಂದ ಗುಂಡು ಹಾರಿಸಿಕೊಂಡಿದ್ದರು. ಘಟನೆ ನಡೆದ ಬಳಿಕ ತಕ್ಷಣ ಅವರನ್ನು ಮುಂಬೈನ ಅಂಧೇರಿಯ ಕೃತಿ ಕೇರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ಪಡೆದುಕೊಂಡ ನಂತರ ಗುಣಮುಖರಾಗಿ ನಟಗೋವಿಂದ ಅಂಧೇರಿಯ ಕೃತಿ ಕೇರ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ತಿಳಿದುಬಂದಿದೆ.