ತಿರುಪತಿ : ದೇಶಾದ್ಯಂತ ವಿಮಾನಗಳಿಗೆ ಬಾಂಬ್ ಬೆದರಿಕೆಯ ನಡುವೆ ಇದೀಗ ಆಂಧ್ರಪ್ರದೇಶದ ತಿರುಪತಿಯ ಎರಡು ಪ್ರಮುಖ ಹೋಟೆಲ್ ಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆಗಳು ಬಂದಿವೆ.
ಮಾದಕವಸ್ತು ನಿಯಂತ್ರಣ ಬ್ಯೂರೋ ಮತ್ತು ಜಾರಿ ನಿರ್ದೇಶನಾಲಯದಿಂದ ಬಂಧಿಸಲ್ಪಟ್ಟ ಮಾದಕವಸ್ತು ಕಳ್ಳಸಾಗಣೆ ಜಾಲದ ಕಿಂಗ್ಪಿನ್ ಜಾಫರ್ ಸಾದಿಕ್ ಅವರನ್ನು ಬೆದರಿಕೆಯಲ್ಲಿ ಉಲ್ಲೇಖಿಸಲಾಗಿದೆ. ತಮಿಳುನಾಡಿನ ಉನ್ನತ ಪೊಲೀಸ್ ಅಧಿಕಾರಿ ಶಂಕರ್ ಜಿವಾಲ್ ಮತ್ತು ತಮಿಳುನಾಡು ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಅವರ ಪತ್ನಿ ಕಿರುತಿಗಾ ಉದಯನಿಧಿ ಅವರ ಹೆಸರನ್ನು ಇ-ಮೇಲ್ ನಲ್ಲಿ ಉಲ್ಲೇಖಿಸಲಾಗಿದೆ.