ಅಯೋಧ್ಯೆ : ಇತ್ತೀಚಿಗೆ ದೇಶದಲ್ಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಗಳಿಗೆ, ವಿಮಾನಗಳಿಗೆ ಬಾಂಬ್ ಬೆದರಿಕೆ ಸಂದೇಶ ಹಾಗೂ ಕರೆಗಳು ಬರುತ್ತಿವೆ ಇದೀಗ ಬೆಂಗಳೂರು ಅಯೋಧ್ಯೆ ನಡುವೆ ಸಂಚರಿಸುವ ವಿಮಾನಕ್ಕೆ ಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ಅಯೋಧ್ಯೆ ವಾಲ್ಮೀಕಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಸ್ಪರ್ಶ ಮಾಡಲಾಗಿದೆ.
ಹೌದು ವಿಮಾನದಲ್ಲಿ ಬಾಂಬ್ ಬೆದರಿಕೆ ಕರೆ ಬಂದ ಬಳಿಕ ಪರಿಶೀಲನೆ ನಡೆಸಿದ ಸಿಬ್ಬಂದಿ ಯಾವುದೇ ಬಾಂಬ್ ಪತ್ತೆಯಾಗದ ಹಿನ್ನೆಲೆ ಹುಸಿಬಾಂಬ್ ಎಂದು ಅಯೋಧ್ಯೆ ಏರ್ಪೋರ್ಟ್ ಸಿಬ್ಬಂದಿಗಳು ಸ್ಪಷ್ಟಪಡಿಸಿದ್ದಾರೆ. ಬೆಂಗಳೂರು ಟು ಅಯೋಧ್ಯೆಗೆ 173 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಆಕಾಶ ಏರ್ಲೈನ್ಸ್ಗೆ ಹುಸಿಬಾಂಬ್ ಬೆದರಿಕೆ ಬಂದಿದೆ. ತಕ್ಷಣ ತುರ್ತು ಭೂಸ್ಪರ್ಶ ಮಾಡಿ ಒಟ್ಟು ಪ್ರಯಾಣಿಕರನ್ನು ಪ್ರಾಣಾಪಾಯದಿಂದ ಪಾರು ಮಾಡಲಾಗಿದೆ.