ಗದಗ : ಐತಿಹಾಸಿಕ ಲಕ್ಕುಂಡಿಯಲ್ಲಿ ಉತ್ಖನನದ ವೇಳೆ ಮೂಳೆಗಳು ಪತ್ತೆಯಾಗಿವೆ. ಕೋಟೆ ವೀರಭದ್ರ ದೇವಸ್ಥಾನದ ಆವರಣದಲ್ಲಿ ಉತ್ಖನನ ಕಾರ್ಯ ನಡೆಯುತ್ತಿದೆ.
ಲಕ್ಕುಂಡಿಯಲ್ಲಿ ನಡೆಯುತ್ತಿರುವ ಉತ್ಖನದ ವೇಳೆ 6 ದಿನ ಮೂಳೆ ಚೂರುಗಳು ಪತ್ತೆಯಾಗಿವೆ. ಸದ್ಯ ತೀವ್ರ ಕುತೂಹಲ ಮೂಡಿಸಿವೆ ಮೂಳೆಗಳ ಚೂರುಗಳು. ಹೀಗಾಗಿ ಮೂಳೆಗಳ ಚೂರುಗಳನ್ನು ಸೂಕ್ಷ್ಮವಾಗಿ ಸಿಬ್ಬಂದಿಗಳು ಸಂಗ್ರಹಿಸಿದ್ದಾರೆ.
ಲಕ್ಕುಂಡಿಯಲ್ಲಿ ಉತ್ಖನನ ವೇಳೆ ಮನೆಯೊಳಗೆ ಈಶ್ವರ ದೇವಸ್ಥಾನ ಪತ್ತೆ!
ಲಕ್ಕುಂಡಿ ಗ್ರಾಮದಲ್ಲಿ ಉತ್ಖನನ ವೇಳೆ ಮನೆಯೊಂದರಲ್ಲಿ ಪುರಾತನ ಈಶ್ವರ ದೇವಸ್ಥಾನ ಪತ್ತೆಯಾಗಿದೆ. ಗದಗ ತಾಲೂಕಿನ ಲಕ್ಕುಂಡಿ ಗ್ರಾಮದ ಶಿವಯ್ಯ ಹಾಗೂ ಶೇಖರಯ್ಯ ಚೌಕಿಮಠ ಎಂಬವರ ಕುಟುಂಬ ದೇವಸ್ಥಾನದೊಳಗೆ ಮನೆ ನಿರ್ಮಾಣ ಮಾಡಿಕೊಂಡು ವಾಸಿಸುತ್ತಿದೆ. ಈ ಮನೆಯಲ್ಲಿ ಸುಮಾರು 5-6 ಮಂದಿ ವಾಸ ಮಾಡುತ್ತಿದ್ದಾರೆ. ದೇವಸ್ಥಾನದ ಹೊರಭಾಗದಲ್ಲಿ ಮನೆಯಿದೆ.
ಅದರೊಳಗೆ ಈ ಐತಿಹಾಸಿಕ ದೇವಾಲಯವಿದೆ. ಈ ದೇವಾಲಯದೊಳಗೆ ನಾಲ್ಕನೇ ಶತಮಾತನದ ಶಿವನ ಮೂರ್ತಿಯಿದೆ. ಈ ಮೂರ್ತಿಯನ್ನೇ ಕುಟುಂಬದವರು ಆರಾಧಿಸುತ್ತಾ ಬಂದಿದ್ದಾರೆ. ಸುಮಾರು 5 ತಲೆಮಾರಿನಿಂದ ಈ ಕುಟುಂಬ ಇಲ್ಲಿ ವಾಸಿಸುತ್ತಿದೆ.








