ಬೆಂಗಳೂರು : ಬೆಂಗಳೂರಿನಲ್ಲಿ ಘೋರ ಘಟನೆಯೊಂದು ನಡೆದಿದ್ದು, ಆನ್ ಲೈನ್ ನಲ್ಲಿ ಫ್ರೀ ಫೈರ್ ಗೇಮ್ ಚಟಕ್ಕೆ ಬಿದ್ದಿದ್ದ ಬಾಲಕನನ್ನು ಸ್ವಂತ ಸೋದರ ಮಾವನೇ ಬರ್ಬರವಾಗಿ ಹತ್ಯೆ ಮಾಡಿ ಪೊಲೀಸ್ ಠಾಣೆಗೆ ಶರಣಾಗಿದ್ದಾನೆ.
14 ವರ್ಷದ ಬಾಲಕ ಅಮೋಘ ಕೀರ್ತಿ ಹತ್ಯೆಯಾದ ಬಾಲಕನಾಗಿದ್ದು, ಬಾಲಕನ ಕೊಲೆ ಮಾಡಿ ಮಾವ ನಾಗಪ್ರಸಾದ್ ಸೋಲದೇವನಹಳ್ಳಿ ಠಾಣೆಗೆ ಶರಣಾಗಿದ್ದಾನೆ. ಆನ್ಲೈನ್ ಗೇಮ್ ಚಟಕ್ಕೆ ಬಿದ್ದಿದ್ದ ಬಾಲಕ ಪದೇ ಪದೇ ಹಣ ಕೇಳುತ್ತಿದ್ದ ಎನ್ನಲಾಗಿದ್ದು, ಕೋಪದ ಭರದಲ್ಲಿ ಮಾವನೇ ಕೊಲೆ ಮಾಡಿದ್ದಾನೆ.
ಕಳೆದ 8 ತಿಂಗಳಿನಿಂದ ಮಾವ ನಾಗಪ್ರಸಾದ್ ಜೊತೆಗೆ ವಾಸವಾಗಿದ್ದ ಬಾಲಕ ವಾಸವಾಗಿದ್ದ. ಫ್ರೀ ಫೈರ್ ಗೇಮ್ ಚಟಕ್ಕೆ ಬಿದ್ದಿದ್ದ. ಮಾವನಿಗೆ ಪದೇ ಪದೇ ಹಣ ಕೇಳುತ್ತಿದ್ದ. ಇದರಿಂದ ಕೋಪಗೊಂಡ ನಾಗಪ್ರಸಾದ್ ಸೋಮವಾರ ರಾತ್ರಿ ತಂಗಿ ಮಗನ ಕತ್ತು ಸೀಳಿ ಕೊಲೆ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ನಂತರ ಮೆಜೆಸ್ಟಿಕ್ ನಲ್ಲಿ 3 ದಿನ ಕಾಲ ಕಳೆದಿದ್ದಾನೆ. ಬಳಿಕ ಪೊಲೀಸರಿಗೆ ಶರಣಾಗಿದ್ದಾನೆ ಎನ್ನಲಾಗಿದೆ. ಬೆಂಗಳೂರಿನ ವಾಯುವ್ಯ ವಿಭಾಗದ ಸೋಲದೇವನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.