ಬೆಂಗಳೂರು : ಮಹಿಳೆಯ ಬೆತ್ತಲೆ ವಿಡಿಯೋ ಮಾಡಿ ಬ್ಲ್ಯಾಕ್ ಮೇಲ್ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಕೇರಳದ ಪೆರಿಂಗೊಟ್ಟುಕರ ದೇವಸ್ಥಾನದ ಅರ್ಚಕ ಅರುಣ್ ನನ್ನು ಇದೀಗ ಅರೆಸ್ಟ್ ಮಾಡಲಾಗಿದೆ. ಬೆಂಗಳೂರಿನ ಬೆಳ್ಳಂದೂರು ಪೊಲೀಸರು ಅರ್ಚಕ ಅರುಣನ್ನು ಬಂಧಿಸಿದ್ದಾರೆ. ಮುಖ್ಯ ಅರ್ಚಕ ಉನ್ನಿ ದಾಮೋದರನ್ ಪರಾರಿಯಾಗಿದ್ದು ಪೊಲೀಸರು ಆತನಿಗಾಗಿ ಹುಡುಕಾಟ ನಡೆಸಿದ್ದಾರೆ.
ಮಾಟ ಮಂತ್ರ ಮಾಡಿಸಿದ್ದಾರೆ ಎಂದು ಮಹಿಳೆ ಪೂಜೆಗಾಗಿ ದೇಗುಲಕ್ಕೆ ತೆರಳಿದ್ದರು. 24 ಸಾವಿರ ಹಣ ಕೊಟ್ಟರೆ ಪೂಜೆ ಮಾಡುವುದಾಗಿ ಅರ್ಚಕ ಅರುಣ್ ಹೇಳಿದ್ದ. ಬಳಿಕ ಮಹಿಳೆ ಮೊಬೈಲ್ ನಂಬರ್ ಪಡೆದು ಹೇಳಿದ ದಿನ ಬರಲು ಸೂಚನೆ ನೀಡಿದ್ದಾನೆ. ಮಹಿಳೆಗೆ ತಡರಾತ್ರಿಯಲ್ಲಿ ನಿರಂತರ ವಾಟ್ಸಾಪ್ ಕರೆ ಮಾಡುತ್ತಿದ್ದ. ಅಲ್ಲದೇ ಬೆತ್ತಲೆಯಾಗಿ ಮಹಿಳೆಗೆ ವಿಡಿಯೋ ಕರೆ ಮಾಡುತ್ತಿದ್ದ ಎನ್ನುವ ಆರೋಪ ಕೂಡ ಕೇಳಿ ಬಂದಿದೆ.
ಮಾಟ ಮಂತ್ರ ಹೋಗಬೇಕು ಅಂದರೆ ಬೆತ್ತಲಾಗಬೇಕು ಅಂತ ಅರ್ಚಕ ಹೇಳಿದ್ದ ಮಹಿಳೆ ಒಪ್ಪದಿದ್ದಕ್ಕೆ ಮಕ್ಕಳು ಸಾಯುವ ಹಾಗೆ ಪೂಜೆ ಮಾಡುವ ಬೆದರಿಕೆ ಹಾಕಿದ್ದಾನೆ. ಅರ್ಚಕ ಅರುಣ್ ಬೆದರಿಕೆಯಿಂದ ಮಹಿಳೆ ಬೆತ್ತಲೆಯಾಗಿದ್ದಾಳೆ. ಬಳಿಕ ಬೆತ್ತಲೆ ವಿಡಿಯೋವನ್ನು ಅರ್ಚಕರು ರೆಕಾರ್ಡ್ ಮಾಡಿಕೊಂಡಿದ್ದಾನೆ. ಅದೇ ವಿಡಿಯೋ ಇಟ್ಟುಕೊಂಡು ಕರೆದಾಗ ಕೇರಳಕ್ಕೆ ಬರಲು ಒತ್ತಾಯಿಸಿದ್ದಾನೆ. ನೀನು ಬರುವಾಗ ಹೇಳು ರೂಮ್ ಬುಕ್ ಮಾಡುತ್ತೇನೆ ಎಂದು ಮಹಿಳೆಗೆ ಅರ್ಚಕ ಅರುಣ ಕಿರುಕುಳ ನೀಡಿದ್ದಾನೆ.
ಅರ್ಚಕನ ಹಿಂಸೆ ತಾಳಲಾರದೆ ಸಂತ್ರಸ್ತ ಮಹಿಳೆ ಕೇರಳಕ್ಕೆ ತೆರಳಿದ್ದಾಳೆ. ಈ ವೇಳೆ ಅರ್ಚಕ ಮುಖ್ಯ ಅರ್ಚಕ ನಿಂದ ಅಸಭ್ಯ ವರ್ತನೆ ತೋರಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾಳೆ. ಅಲ್ಲದೇ ಮಹಿಳೆಯನ್ನು ಕಾರಿನಲ್ಲಿ ಕರೆದು ಇದು ಅತ್ಯಾಚಾರಕ್ಕೆ ಯತ್ನಿಸಿರುವ ಆರೋಪ ಕೇಳಿ ಬಂದಿದೆ. ಕಿರುಕುಳಕ್ಕೆ ಬೇಸತ್ತು ಮಹಿಳೆ ಬೆಳ್ಳಂದೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ. ಅರ್ಚಕ ಅರುಣ್ ನನ್ನು ಇದೀಗ ಪೊಲೀಸರು ಬಂದಿಸಿದ್ದು ಮುಖ್ಯ ಅರ್ಚಕ ಉನ್ನಿ ದಾಮೋದರನ್ ಪರಾರಿಯಾಗಿದ್ದಾನೆ.