ರಾಯಚೂರು : ದೇವರಿಗೆ ಎಂದು ಮಾಡಿದ ಮಾಂಸದೂಟವನ್ನು ಸೇವಿಸಿ ಸುಮಾರು 20ಕ್ಕೂ ಹೆಚ್ಚು ಜನರು ಅಸ್ವಸ್ಥ ರಾಗಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಪರಾಂಪುರ ತಾಂಡಾದಲ್ಲಿ ಈ ಒಂದು ಘಟನೆ ನಡೆದಿದೆ.
ಹೌದು ಮಾಂಸದೂಟ ಸೇವಿಸಿ ಸುಮಾರು 20ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿದ್ದು, ಲಿಂಗಸೂಗೂರು ತಾಲೂಕಿನ ಪರಾಂಪುರ ತಾಂಡಾದಲ್ಲಿ ಈ ಒಂದು ಘಟನೆ ನಡೆದಿದೆ. ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಪರಾಂಪುರ ತಾಂಡಾದ ಜನರು ದೇವರ ಕಾರ್ಯಕ್ಕಾಗಿ ನಿವಾಸಿಗಳು ಮಾಂಸದ ಊಟ ಮಾಡಿಸಿದ್ದರು.
ಎಲ್ಲ ದೇವರ ಕಾರ್ಯ ಮುಗಿದ ಬಳಿಕ ಮಧ್ಯಾಹ್ನ ತಾಂಡದ ನಿವಾಸಿಗಳು ಮಾಂಸದ ಊಟ ಸೇವಿಸಿದ್ದಾರೆ. ಈ ವೇಳೆ ತಾಂಡಾದ ನಿವಾಸಿಗಳಿಗೆ ವಾಂತಿಭೇದಿ ಶುರುವಾಗಿದೆ. ತಕ್ಷಣ ಅವರನ್ನು ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಉಳಿದ ಅಸ್ವಸ್ಥಗೊಂಡ 10 ಜನರಿಗೆ ಲಿಂಗಸುಗೂರು ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಗ್ರಾಮಕ್ಕೆ ಲಿಂಗಸುಗೂರು ತಾಲೂಕು ಆರೋಗ್ಯ ಅಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.