ಉತ್ತರಕನ್ನಡ : ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನಲ್ಲಿ ಗರ್ಭ ಧರಿಸಿದಂತಹ ಹಸುವಿನ ತಲೆಕೆಡಿದು ಮಾಂಸ ಕದ್ದು ದುರುಳರು ವಿಕೃತಿ ಮೆರಿದಿದ್ದರು. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ನಿನ್ನೆ ಓರ್ವ ಆರೋಪಿಯನ್ನು ಬಂಧಿಸಿದ್ದರು. ಇದೀಗ ಇಂದು ಇನ್ನೊರ್ವ ಆರೋಪಿಯ ಮೇಲೆ ಪೊಲೀಸರು ಫೈರಿಂಗ್ ನಡೆಸಿದ್ದಾರೆ.
ಹೌದು, ಹೊನ್ನಾವರದಲ್ಲಿ ಗರ್ಭ ಧರಿಸಿದ್ದ ಹಸುವನ್ನು ಕೊಯ್ದು ರುಂಡ ಬೇರ್ಪಡಿಸಿ ಕೇವಲ ಮಾಂಸವನ್ನು ಮಾತ್ರ ಕದ್ದು ಒಯ್ದಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಿನ್ನೆ ಪೊಲೀಸರು ತೌಫಿಕ್ (41) ಎನ್ನುವ ಆರೋಪಿಯನ್ನು ಅರೆಸ್ಟ್ ಮಾಡಿದ್ದರು. ಬಳಿಕ ಈ ಒಂದು ಪ್ರಕರಣಕ್ಕೆ ಇದೀಗ ಪೊಲೀಸರು ಇನ್ನೊರ್ವ ಆರೋಪಿಯನ್ನು ಬಂಧಿಸುವ ಸಂದರ್ಭದಲ್ಲಿ ಆತನ ಮೇಲೆ ಫೈರಿಂಗ್ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಸಾಲ್ಕೊಡು ಗ್ರಾಮದಲ್ಲಿ ಕಳೆದ ಜನವರಿ 19ರಂದು ಗರ್ಭ ಧರಿಸಿದ್ದ ಹಸುವನ್ನು ಕೊಯ್ದು ಆರೋಪಿಗಳು ಮದುವೆ ಸಮಾರಂಭಕ್ಕೆ ಹಸುವಿನ ಮಾಂಸ ಬಳಸಿದ್ದರು. ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ನಿನ್ನೆ ತೌಫಿಕ್ ಎನ್ನುವ ಆರೋಪಿಯನ್ನು ಅರೆಸ್ಟ್ ಮಾಡಿದರು. ಇಂದು ಇನ್ನೊರ್ವ ಆರೋಪಿಯಾದ ಫೈಝಲ್ ನನ್ನು ಪೊಲೀಸರು ಅರೆಸ್ಟ್ ಮಾಡಲು ತೆರಳಿದ್ದಾರೆ.
ಈ ವೇಳೆ ಫೈಝಲ್ ಪೊಲೀಸರ ಮೇಲೆ ದಾಳಿ ಮಾಡಿ ಯತ್ನಿಸಿದ್ದಾನೆ. ಈ ವೇಳೆ ಆತ್ಮ ರಕ್ಷಣೆಗಾಗಿ ಪೊಲೀಸರು ಆರೋಪಿ ಫೈಝಲ್ ಮೇಲೆ ಶೂಟ್ ಮಾಡಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಕಾಸರಕೋಡಿನಲ್ಲಿ ಈ ಒಂದು ಘಟನೆ ನಡೆದಿದೆ.ಸದ್ಯ ಫೈಸಲ್ಗೆ ಹೊನ್ನಾವರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆ ಹಿನ್ನೆಲೆ?
ಜನವರಿ 19ರಂದು ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಸಾಲ್ಕೋಡ ಗ್ರಾಮದಲ್ಲಿ ಹಸುವಿನ ತಲೆ ಕಡೆದು ದುಷ್ಕರ್ಮಿಗಳು ಮಾಂಸವನ್ನು ಕದ್ದು ಒಯ್ದಿದ್ದರು. ಕೃಷ್ಣ ಆಚಾರಿ ಎಂಬುವವರ ಹಸುವನ್ನು ಮೇಯಲು ಕಾಡಿಗೆ ಬಿಟ್ಟಿದ್ದರು. ಸಂಜೆಯಾದರೂ ಮನೆಗೆ ಬಂದಿರಲಿಲ್ಲ. ಹುಡಕಾಡಿದರೂ ಪತ್ತೆ ಆಗಿಲಿಲ್ಲ. ಆದರೆ ಮರುದಿನ ಬೆಳಗ್ಗೆ ಮಾಲೀಕರಿಗೆ ಆಘಾತ ಕಾದಿತ್ತು.
ಮನೆಯಿಂದ ಅನತಿ ದೂರದಲ್ಲೇ ಹಸುವಿನ ತಲೆ ಕತ್ತರಿಸಿ ಬಿದ್ದಿತ್ತು. ಹಸುವಿನ ಕಾಲು ಕಾಣಸಿತ್ತು. ದುಷ್ಟರು ಹಸುವಿನ ಮುಂಡ, ಹಸುವಿನ ಹೊಟ್ಟೆಯಲ್ಲಿದ್ದ ಕರುವಿನ ಮಾಂಸವನ್ನ ಹೊತ್ತೊಯ್ದಿದ್ದಾರೆ ಅಂತಾ ಹಸುವಿನ ಮಾಲೀಕರು ಕಣ್ಣೀರು ಹಾಕಿದ್ದರು. ಈ ಘಟನೆಯಿಂದ ರಾಜ್ಯದಲ್ಲಿ ಸಾಕಷ್ಟು ಆಕ್ರೋಶ ವ್ಯಕ್ತವಾಗಿತ್ತು.