ಬೀದರ್ : ಬೀದರ್ ನಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಬೈಕ್ ಸವಾರನ ಬಚಾವ್ ಮಾಡಲು ಹೋಗಿ ಡಿವೈಡರ್ ಗೆ ಕಾರು ಡಿಕ್ಕಿಯಾಗಿ ಪಲ್ಟಿಯಾಗಿದೆ. ಪರಿಣಾಮ ಇಬ್ಬರು ಪ್ರಾಣಾಪಾಯದಿಂದ ಪರಾಗಿರುವ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಕೌಡಿಯಾಳ್ ಬಳಿ ನಡೆದಿದೆ.
ರಾಷ್ಟಿಯ ಹೆದ್ದಾರಿಯಲ್ಲಿ ವೇಗವಾಗಿ ಕಾರು ಬರುತ್ತಿತ್ತು. ಈ ವೇಳೆ ಏಕಾಏಕಿ ಬೈಕ್ ಸವಾರ ಅಡ್ಡ ಬಂದಿದ್ದಾನೆ. ಆಗ ಬೈಕ್ ಸವಾರನ ಬಚಾವ್ ಮಾಡಲು ಹೋಗಿ ಡಿವೈಡರ್ ಗೆ ಕಾರು ಡಿಕ್ಕಿಯಾಗಿ ಪಲ್ಟಿಯಾಗಿದೆ. ಈ ಒಂದು ಅಪಘಾತದ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಬಸವಕಲ್ಯಾಣ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








