ಮಂಡ್ಯ : ಮಂಡ್ಯದಲ್ಲಿ ಮತ್ತೊಂದು ಅಪಘಡ ಸಂಭವಿಸಿದ್ದು, ವಿಸಿ ನಾಲೆಗೆ ಕಾರು ಬಿದ್ದಿದ್ದು, ಅದೃಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮಂಡ್ಯ ತಾಲೂಕಿನ ಬಿ.ಯರಹಳ್ಳಿ ಬಳಿ ವಿಸಿ ನಾಲೆಯಲ್ಲಿ ಬೆಳಗಿನ ಜಾವ 4:30ರ ಸಮಯದಲ್ಲಿ ಈ ಘಟನೆ ನಡೆದಿದೆ. ಮಂಡ್ಯದ ಕಲ್ಲಹಳ್ಳಿ ನಿವಾಸಿ ಕೃಷ್ಣ ಎಂಬುವರು ಕಾರು ಚಲಾಯಿಸುತ್ತಿದ್ದರು. ಕಿರಿದಾದ ರಸ್ತೆ, ತಡೆಗೋಡೆ ಇಲ್ಲದ ಕಾರಣ ಅವಘಡ ಸಂಭವಿಸಿದೆ.
ಕಾರು ನಾಲೆಗೆ ಬೀಳುತ್ತಿದ್ದಂತೆ ಚಾಲಕ ಕೃಷ್ಣ ಕಾರಿನಿಂದ ಹೊರಬಂದಿದ್ದಾರೆ. ಸಮಯಪ್ರಜ್ಞೆಯಿಂದ ಚಾಲಕ ಜೀವ ಉಳಿಸಿಕೊಂಡಿದ್ದಾರೆ. ನಾಲೆಯಲ್ಲಿ ಮುಳುಗಿದ್ದ ಕಾರನ್ನು ಅಗ್ನಿಶಾಮಕ ಸಿಬ್ಬಂದಿ ಮೇಲೆತ್ತಿದ್ದಾರೆ.ಮಂಡ್ಯ ಗ್ರಾಮಾಂತರ ಪೊಲೀಸ್ ರಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.








