ಬೆಂಗಳೂರು : ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಬಹಳ ಸುದ್ದಿ ಮಾಡುತ್ತಿದ್ದ ಧರ್ಮಸ್ಥಳ ಭಾಗದಲ್ಲಿ ನೂರಾರು ಶವಗಳನ್ನು ಹೂತಿರುವ ಹಾಗೂ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಇದೀಗ ತನಿಖಾ ತಂಡವನ್ನ ರಚನೆ ಮಾಡಿದ್ದು, ಈ ಬಗ್ಗೆ ಸಿಎಂ ಮಾಹಿತಿ ನೀಡಿದ್ದಾರೆ.
ಧರ್ಮಸ್ಥಳ ಭಾಗದಲ್ಲಿ ನೂರಾರು ಶವಗಳನ್ನು ಹೂತಿರುವುದಾಗಿ ವ್ಯಕ್ತಿಯೊಬ್ಬರು ನ್ಯಾಯಾಲಯದಲ್ಲಿ ಹೇಳಿಕೆಯನ್ನು ದಾಖಲಿಸಿದ್ದಾರೆ, ಸ್ಥಳೀಯ ಹಾಗೂ ರಾಷ್ಟ್ರೀಯ ಮಾಧ್ಯಮಗಳು ಮನುಷ್ಯನ ತಲೆಬರುಡೆ ದೊರಕಿದ ಸ್ಥಳ ಹಾಗೂ ನಾಪತ್ತೆಯಾದ ವೈದ್ಯಕೀಯ ವಿದ್ಯಾರ್ಥಿನಿಯ ಕುಟುಂಬದವರ ಹೇಳಿಕೆಯನ್ನು ಪ್ರಸಾರ ಮಾಡಿವೆ. ಈ ಪ್ರದೇಶದಲ್ಲಿ ಅಸಹಜ ಸಾವುಗಳು, ಕೊಲೆ, ಅತ್ಯಾಚಾರ ಹೀಗೆ ಗಂಭೀರ ಸ್ವರೂಪದ ಅಪರಾಧ ಪ್ರಕರಣಗಳು ನಡೆದಿರಬಹುದಾಗಿದ್ದು, ಈ ಎಲ್ಲಾ ಸಾಧ್ಯತೆಗಳನ್ನು ಪರಿಗಣಿಸಿ ಪ್ರಕರಣದ ಸಮಗ್ರ ಮತ್ತು ನಿಷ್ಪಕ್ಷಪಾತ ತನಿಖೆ ನಡೆಸುವಂತೆ ರಾಜ್ಯ ಮಹಿಳಾ ಆಯೋಗವು ರಾಜ್ಯ ಸರ್ಕಾರಕ್ಕೆ ಕೋರಿದ್ದು, ಅವರ ಕೋರಿಕೆಯ ಮೇರೆಗೆ ನಾಲ್ವರು ಐಪಿಎಸ್ ಅಧಿಕಾರಿಗಳನ್ನೊಳಗೊಂಡ ವಿಶೇಷ ತನಿಖಾ ತಂಡವನ್ನು ರಚಿಸಿ ಆದೇಶಿಸಲಾಗಿದೆ.
ವಿಶೇಷ ತನಿಖಾ ತಂಡವು ಧರ್ಮಸ್ಥಳ ಠಾಣೆಯಲ್ಲಿ ದಾಖಲಾಗಿರುವ ದೂರು ಸೇರಿದಂತೆ ಇದಕ್ಕೆ ಸಂಬಂಧಪಟ್ಟಂತೆ ರಾಜ್ಯದ ಇತರೆ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಹಾಗೂ ದಾಖಲಾಗುವ ಎಲ್ಲಾ ಕ್ರಿಮಿನಲ್ ಪ್ರಕರಣಗಳನ್ನು ಸಮಗ್ರ ತನಿಖೆ ನಡೆಸಿ, ವರದಿ ನೀಡಲಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಐಪಿಎಸ್ ಅಧಿಕಾರಿಗಳಿರುವ ವಿಶೇಷ ತನಿಖಾ ತಂಡವನ್ನು ರಚಿಸುವಂತೆ ಆದೇಶ ನೀಡಲಾಗಿದೆ. ಸದ್ಯದ ಮಾಹಿತಿ ಪ್ರಕಾರ ವಿಶೇಷ ತನಿಖಾ ತಂಡವು ಧರ್ಮಸ್ಥಳ ಠಾಣೆಯಲ್ಲಿ ದಾಖಲಾಗಿರುವ ದೂರು ಸೇರಿದಂತೆ ಇದಕ್ಕೆ ಸಂಬಂಧಪಟ್ಟಂತೆ ರಾಜ್ಯದ ಇತರೆ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಹಾಗೂ ದಾಖಲಾಗುವ ಎಲ್ಲಾ ಕ್ರಿಮಿನಲ್ ಪ್ರಕರಣಗಳನ್ನು ಸಮಗ್ರ ತನಿಖೆ ನಡೆಸಿ, ವರದಿ ನೀಡಲಿದೆ ಎಂದಿದ್ದಾರೆ.
ಧರ್ಮಸ್ಥಳ ಭಾಗದಲ್ಲಿ ನೂರಾರು ಶವಗಳನ್ನು ಹೂತಿರುವುದಾಗಿ ವ್ಯಕ್ತಿಯೊಬ್ಬರು ನ್ಯಾಯಾಲಯದಲ್ಲಿ ಹೇಳಿಕೆಯನ್ನು ದಾಖಲಿಸಿದ್ದಾರೆ, ಸ್ಥಳೀಯ ಹಾಗೂ ರಾಷ್ಟ್ರೀಯ ಮಾಧ್ಯಮಗಳು ಮನುಷ್ಯನ ತಲೆಬರುಡೆ ದೊರಕಿದ ಸ್ಥಳ ಹಾಗೂ ನಾಪತ್ತೆಯಾದ ವೈದ್ಯಕೀಯ ವಿದ್ಯಾರ್ಥಿನಿಯ ಕುಟುಂಬದವರ ಹೇಳಿಕೆಯನ್ನು ಪ್ರಸಾರ ಮಾಡಿವೆ. ಈ ಪ್ರದೇಶದಲ್ಲಿ ಅಸಹಜ ಸಾವುಗಳು, ಕೊಲೆ,… pic.twitter.com/IKnnStXzeZ
— Siddaramaiah (@siddaramaiah) July 20, 2025