ಪೊನ್ನಂಪೇಟೆ : ನಾಗರಹೊಳೆ ಅರಣ್ಯಕ್ಕೆ ಅಕ್ರಮ ಪ್ರವೇಶ ಆರೋಪದಡಿ ನಟ ಚೇತನ್ ಅಹಿಂಸಾ ಸೇರಿ ಐವರ ವಿರುದ್ಧ ಪ್ರಕರಣ ದಾಖಲಾಗಿದೆ.
ಪೊನ್ನಂಪೇಟೆ ತಾಲೂಕಿನ ಕೆ.ಬಾಡಗ ಗ್ರಾಮ ಪಂಚಾಯಿತಿಗೆ ಒಳಪಡುವ ಕರಡಿಕಲ್ಲು ಅತ್ತೂರು ಕೊಲ್ಲಿ ಹಾಡಿಯಲ್ಲಿ ಆ.8 ರಂದು ಅರಣ್ಯ ಹಕ್ಕು ಕಾಯ್ದೆಯಡಿ ವೈಯಕ್ತಿಕ ಹಕ್ಕು ಮತ್ತು ಸಮುದಾಯದ ಹಕ್ಕಿಗಾಗಿ ಒತ್ತಾಯಿಸಿ ಪ್ರತಿಭಟನೆಗೆ ಬೆಂಬಲ ನೀಡಿದ ನಟ ಚೇತನ್ ಅಹಿಂಸಾ ಸೇರಿ ಐವರ ವಿರುದ್ಧ ಪ್ರಕರಣ ದಾಖಲಾಗಿದೆ.
ಚೇತನ್ ಅಹಿಂಸಾ, ನ್ಯಾಷನಲ್ ಆದಿವಾಸಿ ಸಂಘಟನೆ ಮುಖ್ಯಸ್ಥ ರಾಯ್ ಡೇವಿಡ್, ರಾಜಾರಾಮ್, ಪತ್ರಕರ್ತೆ ನಿಕಿತಾ ಜೈನ್, ಸರ್ತ ಜಾಲಿ ವಿರುದ್ಧ ನಾಗರಹೊಳೆ ಅರಣ್ಯಕ್ಕೆ ಅಕ್ರಮ ಪ್ರದೇಶ ಆರೋಪದಡಿ ನಾಗರಹೊಳೆ ವನ್ಯಜೀವಿ ಉಪ ವಿಭಾಗದ ಸಂರಕ್ಷಣಾಧಿಕಾರಿ ಜೆ.ಅನನ್ಯಕುಮಾರ್ ಪ್ರಕರಣ ದಾಖಲಿಸಿದ್ದಾರೆ.