ಬೆಂಗಳೂರು : ರಾಜ್ಯಾದ್ಯಂತ ಶುಕ್ರವಾರದ ವೇಳೆಗೆ ಶೇ.95.20 ಕುಟುಂಬಗಳ ಸಮೀಕ್ಷೆ ಪೂರ್ಣಗೊಂಡಿದೆ. ಆದರೆ, ಶೇ.85.72 ರಷ್ಟು ಜನರ ಗಣತಿಯ ಅಂಕಿ-ಅಂಶ ಮಾತ್ರ ಲಭ್ಯವಾಗಿರುವ ಹಿನ್ನೆಲೆಯಲ್ಲಿ ಭಾನುವಾರವೂ ಸಮೀಕ್ಷೆ ಮುಂದುವರೆಸಲು ನಿರ್ಧರಿಸಲಾಗಿದೆ.
ಪೂರ್ವ ನಿಗದಿಯಂತೆ ಅ.18 ರ ಇಂದು ಸಮೀಕ್ಷೆ ಪೂರ್ಣಗೊಳ್ಳಬೇಕು. ಆದರೆ, ನಿರೀಕ್ಷಿತ ಪ್ರಮಾಣದಲ್ಲಿ ಜನಸಂಖ್ಯೆಯ ಗಣತಿ ಆಗಿಲ್ಲ. ಹೀಗಾಗಿ ಅ.19 ರಂದು ಭಾನುವಾರವೂ ಸಮೀಕ್ಷೆ ಮುಂದುವರೆಸಲು ತಿಳಿಸಿದ್ದು, ಭಾನುವಾರ ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಗತಿ ಪರಿಶೀಲನೆ ಸಭೆ ನಡೆಸಲಿದ್ದಾರೆ. ಈ ಸಭೆಯಲ್ಲಿ ಸಮೀಕ್ಷೆಯನ್ನು ಮುಂದುವರೆಸಬೇಕೇ ಅಥವಾ ಮುಕ್ತಾಯಗೊಳಿಸಬೇಕೇ ಎಂಬ ಕುರಿತು ನಿರ್ಧಾರವಾಗಲಿದೆ.
ರಾಜ್ಯಾದ್ಯಂತ ಒಟ್ಟು 1,48,14, 286 ಕುಟುಂಬಗಳ ಸಮೀಕ್ಷೆ ಗುರಿ ನೀಡಲಾಗಿತ್ತು. ಈ ಪೈಕಿ ಶುಕ್ರವಾರ 1.62 ಲಕ್ಷ ಕುಟುಂಬಗಳ ಸಮೀಕ್ಷೆ ಪೂರ್ಣ ಗೊಂಡಿದ್ದು, ಒಟ್ಟು 1.41 ಕೋಟಿ ಕುಟುಂಬಗಳ ಸಮೀಕ್ಷೆಪೂರ್ಣಗೊಂಡಿದೆ.
ರಾಜ್ಯದ ಜನತೆಯ ಸಾಮಾಜಿಕ ಮತ್ತು ಶೈಕ್ಷಣಿಕ ಹಾಗೂ ಆರ್ಥಿಕ ಪರಿಸ್ಥಿತಿ ಕುರಿತು ಮಾಹಿತಿ ಸಂಗ್ರಹಿಸಲಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯು ಅತ್ಯಂತ ಮಹತ್ವದ್ದಾಗಿದೆ. ಸಂಗ್ರಹವಾಗುವ ದತ್ತಾಂಶದಿಂದ ನೂತನ ಕಾರ್ಯಕ್ರಮಗಳನ್ನು, ಯೋಜನೆಗಳನ್ನು ರೂಪಿಸಲು ರಾಜ್ಯ ಸರ್ಕಾರಕ್ಕೆ ಅನುಕೂಲವಾಗಲಿದೆ.
ಹೀಗಾಗಿ ಮನೆಗೆ ಭೇಟಿ ನೀಡುವ ಸಮೀಕ್ಷಾದಾರರಿಗೆ ನಿಮ್ಮ ಕುಟುಂಬದ ಕುರಿತಾದ ನಿಖರ ಮಾಹಿತಿ ನೀಡಿ. ಮುಂದಿನ ಪೀಳಿಗೆಗೆ ಶಿಕ್ಷಣ ಮತ್ತು ಉದ್ಯೋಗದ ಭದ್ರ ಭವಿಷ್ಯಕ್ಕಾಗಿ ಸಹಕರಿಸಿ.
ಸಮೀಕ್ಷೆಯಲ್ಲಿ ನಿಮ್ಮ ಮನೆ ಬಿಟ್ಟು ಹೋಗಿದ್ದರೆ ಕೂಡಲೇ 8050770004ಕ್ಕೆ ಕರೆ ಮಾಡಿ. ಸಮೀಕ್ಷೆ ಯಶಸ್ವಿಯಾಗಿಸಿ ಎಂದು ರಾಜ್ಯ ಸರ್ಕಾರ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
“ಸಮೀಕ್ಷೆ ನಡೆಸಿದ ಬಳಿಕ ವಿವರಗಳನ್ನು ಆ್ಯಪ್ನಲ್ಲಿ ದಾಖಲಿಸಲು ಇರುವುದರಿಂದ, ಆರಂಭದಲ್ಲಿ ಕೆಲವೊಂದು ಪ್ರದೇಶಗಳಲ್ಲಿ ಇಂಟರ್ನೆಟ್ ಸಮಸ್ಯೆಯಾಗಿತ್ತು. ಹೀಗಾಗಿ ಸಮೀಕ್ಷೆ ಸ್ವಲ್ಪ ನಿಧಾನಗತಿಯಲ್ಲಿತ್ತು. ಬೆಂಗಳೂರು ವ್ಯಾಪ್ತಿಯಲ್ಲಿ ಶಿಕ್ಷಕರನ್ನು ಹೆಚ್ಚಾಗಿ ಬಳಸದೆ, ಸರ್ಕಾರಿ ನೌಕರರಿಗೆ ಸಮೀಕ್ಷೆಯ ಜವಾಬ್ದಾರಿಯನ್ನು ನೀಡಿದ್ದೆವು. ದೀಪಾವಳಿ ಸಂದರ್ಭದಲ್ಲಿ ಅವರಿಗೆ ರಜೆ ಇರುವ ಕಾರಣ ಸಮೀಕ್ಷೆ ಅವಧಿ ವಿಸ್ತರಣೆ ಮಾಡಲಾಗಿದೆ.
ರಾಜ್ಯದ ಜನತೆಯ ಸಾಮಾಜಿಕ ಮತ್ತು ಶೈಕ್ಷಣಿಕ ಹಾಗೂ ಆರ್ಥಿಕ ಪರಿಸ್ಥಿತಿ ಕುರಿತು ಮಾಹಿತಿ ಸಂಗ್ರಹಿಸಲಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯು ಅತ್ಯಂತ ಮಹತ್ವದ್ದಾಗಿದೆ. ಸಂಗ್ರಹವಾಗುವ ದತ್ತಾಂಶದಿಂದ ನೂತನ ಕಾರ್ಯಕ್ರಮಗಳನ್ನು, ಯೋಜನೆಗಳನ್ನು ರೂಪಿಸಲು ರಾಜ್ಯ ಸರ್ಕಾರಕ್ಕೆ ಅನುಕೂಲವಾಗಲಿದೆ.
ಹೀಗಾಗಿ ಮನೆಗೆ ಭೇಟಿ ನೀಡುವ ಸಮೀಕ್ಷಾದಾರರಿಗೆ… pic.twitter.com/mwQAjTcvKR
— DIPR Karnataka (@KarnatakaVarthe) October 17, 2025