ಬೆಂಗಳೂರು : ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಕರಣವನ್ನು ಕೈಬಿಡುವಂತೆ ಕೋರಿ ಪ್ರಜ್ವಲ್ ರೇವಣ್ಣ ಅರ್ಜಿ ಸಲ್ಲಿಸಿದ್ದರು. ಈ ಒಂದು ಅರ್ಜಿಗೆ ಸಿಐಡಿ ಎಸ್ ಪಿ ಪಿ ಬಿ ಎನ್ ಜಗದೀಶ್ ಆಕ್ಷೇಪಣೆ ವ್ಯಕ್ತಪಡಿಸಿದ್ದಾರೆ. ಹಾಗಾಗಿ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ವಿಚಾರಣೆಯನ್ನು ಫೆಬ್ರವರಿ 28ಕ್ಕೆ ಮುಂದೂಡಿ ಆದೇಶಿಸಿತು.
ಕ್ರೈಂ ನಂಬರ್ 20/2024 ಕ್ಕೆ ಸಂಬಂಧಿಸಿದ ಪೆನ್ ಡ್ರೈವ್ ಸಲ್ಲಿಕೆ ಮಾಡಲಾಗಿದೆ. ಗುರುತರವಾದ ಆರೋಪ ಇರುವುದರಿಂದ ಕೇಸ್ ನಿಂದ ಕೈ ಬಿಡದಂತೆ ಜಗದೀಶ್ ಮನವಿ ಮಾಡಿದ್ದಾರೆ. ಪ್ರಜ್ವಲ್ ರೇವಣ್ಣ ಪರ ವಕೀಲರು ವಾದ ಮಂಡಿಸಲು ಸದ್ಯ ವಿಚಾರಣೆ ಮುಂದೂಡಿಕೆ ಮಾಡಲಾಯಿತು. ಫೆಬ್ರವರಿ 28ಕ್ಕೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿಚಾರಣೆ ನಿಗದಿಪಡಿಸಿದೆ.