ಶಿವಮೊಗ್ಗ : ಶಿವಮೊಗ್ಗದಲ್ಲಿ ಅಮಾನವೀಯ ಘಟನೆ ಒಂದು ನಡೆದಿದ್ದು ಕಸದ ವಿಚಾರವಾಗಿ ಗಲಾಟೆ ನಡೆದಿದೆ. ಬಳಿಕ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಹಲ್ಲೆ ಮಾಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಈ ಒಂದು ಅಮಾನವೀಯ ಘಟನೆ ನಡೆದಿದೆ.
ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಕಸ ಹಾಕುವ ವಿಚಾರಕ್ಕೆ ವೃದ್ಧೆಯ ಜೊತೆಗೆ ಕೆಲವರು ಗಲಾಟೆ ಮಾಡಿದ್ದಾರೆ. ಈ ವೇಳೆ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಪಕ್ಕದ ಮನೆಯವರು ಥಳಿಸಿದ್ದಾರೆ. ಸಾಗರದ ಅನಂತಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದೆ. ಬಳಿಕ ವೃದ್ಧೆ ಮೇಲೆ ಹಲ್ಲೆ ಮಾಡಿದ ಪ್ರೇಮಾ, ದರ್ಶನ್ ಮತ್ತು ಮಂಜುನಾಥ ವಿರುದ್ಧ ಸಾಗರ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.