ಚಾಮರಾಜನಗರ : ಬೆಂಗಳೂರಿನಲ್ಲಿ 7.11 ಕೋಟಿ ರೂ. ದರೋಡೆ ಕೇಸ್ ಗೆ ಸಂಬಂಧಿಸಿದಂತೆ ಆರೋಪಿಗಳ ಸುಳಿವು ಸಿಕ್ಕಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೊಲೀಸರಿಗೆ ದರೋಡೆಕೋರರ ಸುಳಿವು ಸಿಕ್ಕಿದೆ. ದರೋಡೆಕೋರರು ಕೃತ್ಯಕ್ಕೆ ಬಳಸಿದ್ದ ಕಾರು ಪತ್ತೆಯಾಗಿದೆ. ಪೊಲೀಸರು ತನಿಖೆ ಮುಂದುವರೆಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಹೌದು ಇನ್ನೋವಾ ಆಂಧ್ರಪ್ರದೇಶದಾ ಚಿತ್ತೂರು ಬಳಿ ಕೃತ್ಯಕ್ಕೆ ಬಳಸಿದ್ದ ಇನ್ನೋವಾ ಕಾರನ್ನು ಬೆಂಗಳೂರು ಪೊಲೀಸರು ಸದ್ಯ ವಶಕ್ಕೆ ಪಡೆದಿದ್ದಾರೆ. ತಿರುಪತಿ ಕಾರು ಬಿಟ್ಟು ಆರೋಪಿಗಳು ಪರಾರಿ ಆಗಿದ್ದಾರೆ ದರೋಡೆಕೋರರಿಗಾಗಿ ಪೊಲೀಸರು ತೀವ್ರ ಹುಡುಕಾಟ ನಡೆಸುತ್ತಿದ್ದಾರೆ.
ದರೋಡೆಕೋರರ ಗ್ಯಾಂಗ್ ತಿರುಪತಿಯಲ್ಲಿರುವ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ತಿರುಪತಿ ಪೊಲೀಸರ ಜೊತೆ ಬೆಂಗಳೂರಿನ ದಕ್ಷಿಣ ವಿಭಾಗದ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ. ತಿರುಪತಿಯ ಪ್ರತಿಯೊಂದು ಹೋಟೆಲ್, ಲಾಡ್ಜ್ ಗಳಲ್ಲಿ ಪೊಲೀಸರು ತಪಾಸಣೆ ನಡೆಸುತ್ತಿದ್ದಾರೆ.








