ಬೆಂಗಳೂರು : ನಮ್ಮ ಮೆಟ್ರೋ ಪ್ರಯಾಣದ ಟಿಕೆಟ್ ದರ ಹೆಚ್ಚಿಸಿದ ಬೆನ್ನಲ್ಲೇ ಸಾರ್ವಜನಿಕ ಕಡೆಯಿಂದ ತೀವ್ರ ಆಕ್ರೋಶ ವ್ಯಕ್ತವಾಗಿದ್ದು ಇದರ ಬೆನ್ನಲ್ಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವೀಟ್ ಮೂಲಕ BMRCL ಅಧಿಕಾರಿಗಳಿಗೆ ಮೆಟ್ರೋ ಪ್ರಯಾಣದ ಟಿಕೆಟ್ ದರ ಕಡಿಮೆ ಮಾಡುವಂತೆ ಸೂಚಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್ಸಿಎಲ್) ಬೆಂಗಳೂರು ಮೆಟ್ರೋ ಪ್ರಯಾಣ ದರ ಪರಿಷ್ಕರಣೆಯನ್ನು ಜಾರಿಗೆ ತಂದ ರೀತಿ ಅಸಂಗತತೆಗೆ ಕಾರಣವಾಗಿದೆ, ಕೆಲವು ವಿಭಾಗಗಳಲ್ಲಿ ದರಗಳು ದ್ವಿಗುಣಗೊಂಡಿವೆ.
ಹಾಗಾಗಿ ಈ ಸಮಸ್ಯೆಗಳನ್ನು ತುರ್ತಾಗಿ ಪರಿಹರಿಸಲು ಮತ್ತು ಟಿಕೆಟ್ ದರಗಳನ್ನು ಕಡಿಮೆ ಮಾಡಲು ನಾನು ಬಿಎಂಆರ್ಸಿಎಲ್ ಎಂಡಿಗೆ ಕೇಳಿದ್ದೇನೆ. ಪ್ರಯಾಣಿಕರ ಹಿತಾಸಕ್ತಿಯನ್ನು ಕಾಪಾಡಬೇಕು ಎಂದು ಟ್ವೀಟ್ ಮಾಡಿದ್ದಾರೆ. ಟಿಕೆಟ್ ದರ ಹೆಚ್ಚಳವಾದ ಬೆನ್ನಲ್ಲೇ ನಮ್ಮ ಮೆಟ್ರೋ ರೈಲಿನಲ್ಲಿ 35 ರಿಂದ 40 ರಷ್ಟು ಪ್ರಯಾಣಿಕರ ಸಂಖ್ಯೆ ಇಳಿಕೆ ಕಂಡಿದೆ.
The way Bangalore Metro Rail Corporation Limited (BMRCL) has implemented the Bengaluru Metro fare revision has led to anomalies, with fares more than doubling in certain sections.
I have asked the MD of BMRCL to urgently address these issues and reduce fares where increases are…
— Siddaramaiah (@siddaramaiah) February 13, 2025