* ಅವಿನಾಶ್ ಆರ್ ಭೀಮಸಂದ್ರ
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಅಧಿಕೃತವಾಗಿ ಸಚಿವ ಸ್ಥಾನಕ್ಕೆ ಕೆ.ಎನ್ ರಾಜಣ್ಣ ಅವರು ರಾಜೀನಾಮೆಯನ್ನು ನೀಡಿದ್ದಾರೆ. ಇನ್ನೂ ಇದೇ ವೇಳೆ ಸಿಎಂ ಸಿದ್ದರಾಮಯ್ಯ ಅವರು ರಾಜಣ್ಣನವರ ಸಚಿವ ಸ್ಥಾನದ ರಾಜೀನಾಮೆಯನ್ನು ಅಂಗೀಕಾರ ಮಾಡಿದ್ದಾರೆ ಎನ್ನಲಾಗಿದೆ.
ಕೆಲವು ದಿನಗಳ ಹಿಂದೆ ತಮ್ಮನ್ನು ‘ಮಧುಬಲೆ’ಗೆ (ಹನಿಟ್ರ್ಯಾಪ್) ಕೆಡವಲು ಯತ್ನಿಸಿದ ಪ್ರಕರಣದ ಕುರಿತು ಉನ್ನತಮಟ್ಟದ ತನಿಖೆ ನಡೆಸುವಂತೆ ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರು ಗೃಹ ಸಚಿವ ಜಿ. ಪರಮೇಶ್ವರ ಅವರಿಗೆ ಮನವಿ ಸಲ್ಲಿಸಿದರು. ಆದರೆ ತನಿಖಾ ತಂಡ ಕೆ.ಎನ್. ರಾಜಣ್ಣ ಅವರ ಆರೋಪ ಸುಳ್ಳು ಅಂತ ತನಿಖಾ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿತ್ತು. ಕೆಎನ್ ರಾಜಣ್ಣ ಅವರು ಇತ್ತೀಚೆಗೆ ಪಕ್ಷ ಹಾಗೂ ರಾಹುಲ್ ಗಾಂಧಿ ವಿರುದ್ಧ ಮಾತನಾಡಿದ್ದರು. ಇನ್ನೂ ಲೋಕಸಭೆ ಚುನಾವಣೆಯಲ್ಲಿ ಮತ ಕಳವು ನಡೆದಿದೆ. ಆದರೆ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿ ಇದ್ದಾಗಲೇ ಮತದಾರರ ಪಟ್ಟಿ ಸಿದ್ಧಪಡಿಸಲಾಗಿದೆ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಹೇಳಿದನ್ನು ಸ್ಮರಿಸಿಕೊಳ್ಳಬಹುದಾಗಿದೆ. ಇದಲ್ಲದೇ ಬಹಿರಂಗವಾಗವಾಗಿಯೇ ಅವರು ಹೈಕಮಾಂಡ್ ವಿರುದ್ದ ಅಸಮಾಧನವನ್ನು ವ್ಯಕ್ತಪಡಿಸಿದ್ದರು.
ಇನ್ನೂ ಸದನದಲ್ಲಿ ಕೂಡ ಈ ಬಗ್ಗೆ ವಿಪಗಳು ಹಾಗು ಆಡಳಿತಪಗಳ ನಾಯಕರ ನಡುವೆ ಮಾತಿನ ಚಕಮಕಿ ನಡೆದ ಸನ್ನಿವೇಶ ನಿರ್ಮಾಣವಾಗಿತು. ವಿಧಾನಭೆಯಲ್ಲಿ ಬಿಜೆಪಿ ನಾಯಕರು ಸಿಎಂ ಸಿದ್ದರಾಮಯ್ಯ ಮತ್ತು ಕೆ.ಎನ್ ರಾಜಣ್ಣ ಅವರಿಂದ ಸರಿಯಾದ ಉತ್ತರ ಬರಬೇಕು ಅಂಥ ಸ್ಪೀಕರ್ ಅವರ ಬಳಿ ಮನವಿ ಮಾಡಿದರು. ಹಲವು ಮಂದಿ ಬಿಜೆಪಿ ನಾಯಕರು ರಾಜೀನಾಮೆ ಬಗ್ಗೆ ಸರಿಯಾದ ಮಾಹಿತಿಯನ್ನು ಸದನಕ್ಕೆ ನೀಡಬೇಕು ಅಂತ ಆಗ್ರಹಿಸಿದರು. ಇನ್ನೂ ಕೆ.ಎನ್ ರಾಜಣ್ಣನವರ ರಾಜೀನಾಮೆಯನ್ನು ಸಿಎಂ ಸಿದ್ದರಾಮಯ್ಯ ಅವರು ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ಸಿಎಂ ಕಚೇರಿಯಲ್ಲಿ ಸಿಎಂ ಬೇಟಯಾಗಿ ರಾಜಣ್ಣ ಅವರು ರಾಜೀನಾಮೆ ನೀಡಿದ್ದಾರೆ.
ಸಹಕಾರಿ ಕ್ಷೇತ್ರದಲ್ಲಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದ ರಾಜಣ್ಣ, ಈ ಹಿಂದೆ ಭಾರತದ ರಾಷ್ಟ್ರೀಯ ಕೃಷಿ ಸಹಕಾರಿ ಮಾರುಕಟ್ಟೆ ಒಕ್ಕೂಟದ ನಿರ್ದೇಶಕರಾಗಿ ಮತ್ತು ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ಲಿಮಿಟೆಡ್ನ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ರಾಜಣ್ಣ 1972 ರಿಂದ ಸಹಕಾರಿ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದರು. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ನ ಕ್ಯಾತಸಂದ್ರ ತಾಲ್ಲೂಕು ಘಟಕದ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ ಅದೇ ಅವಧಿಯಲ್ಲಿ ಅವರ ಸಾರ್ವಜನಿಕ ಜೀವನ ಪ್ರಾರಂಭವಾಯಿತು. 1976 ರಲ್ಲಿ, ಅವರು ಕ್ಯಾತಸಂದ್ರ ನಗರ ಪಂಚಾಯತ್ ಅಧ್ಯಕ್ಷರಾಗಿ ಆಯ್ಕೆಯಾದರು, 1980 ಮತ್ತು 1984 ರ ನಡುವೆ ತುಮಕೂರು ಜಿಲ್ಲಾ ಘಟಕದ ಐಎನ್ಸಿಯ ಯುವ ಕಾಂಗ್ರೆಸ್ ವಿಭಾಗದ ಮುಖ್ಯಸ್ಥರಾಗಿದ್ದರು.