Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕ್ಷೇತ್ರದ ಮತದಾರರಿಗೆ ಕೊಟ್ಟ ಮಾತಿಗೆ ಬದ್ದನಾಗಿದ್ದೇನೆ: ಮದ್ದೂರು ಶಾಸಕ ಕೆ.ಎಂ.ಉದಯ್

22/11/2025 7:13 PM

BREAKING: ಮುಂಬೈನಲ್ಲಿ ರಾಸಾಯನಿಕ ಸೋರಿಕೆಯಾಗಿ ಓರ್ವ ಸಾವು, ಮೂವರು ಅಸ್ವಸ್ಥ

22/11/2025 7:11 PM

ವಿಶೇಷ ಚೇತನ ಮಕ್ಕಳೆಂದು ಪೋಷಕರು ಕೀಳರಿಮೆ ತೋರಬೇಡಿ: ಮದ್ದೂರು ಶಾಸಕ ಕೆ.ಎಂ.ಉದಯ್

22/11/2025 7:06 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ರಾಜ್ಯದಲ್ಲಿ `ಡ್ರಗ್ಸ್ ಹಾವಳಿ ನಿಯಂತ್ರಣ’ಕ್ಕೆ ಕಾನೂನು ಜಾರಿ : CM ಸಿದ್ದರಾಮಯ್ಯ ಘೋಷಣೆ
KARNATAKA

BREAKING : ರಾಜ್ಯದಲ್ಲಿ `ಡ್ರಗ್ಸ್ ಹಾವಳಿ ನಿಯಂತ್ರಣ’ಕ್ಕೆ ಕಾನೂನು ಜಾರಿ : CM ಸಿದ್ದರಾಮಯ್ಯ ಘೋಷಣೆ

By kannadanewsnow5718/09/2024 3:48 PM

ಬೆಂಗಳೂರು : ರಾಜ್ಯದಲ್ಲಿ ಡ್ರಗ್ಸ್ ಹಾವಳಿ ನಿಯಂತ್ರಣ ಸಂಬಂಧ ಹೊಸ ಕಾನೂನು ಜಾರಿ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ರಾಜ್ಯದಲ್ಲಿ ಡ್ರಗ್ಸ್ ಹಾವಳಿ ನಿಯಂತ್ರಣ ಸಂಬಂಧ ಇಂದು ವಿವಿಧ ಇಲಾಖೆಗಳ ಸಚಿವರು ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಿ, ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯದಲ್ಲಿ ಡ್ರಗ್ಸ್ ಜಾಲದ ಬೇರುಗಳನ್ನೇ ಕತ್ತರಿಸಲು ತೀರ್ಮಾನ ಮಾಡಿದ್ದೇವೆ. ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ, ಇದಕ್ಕಾಗಿ ಇನ್ನಷ್ಟು ಕಠಿಣ, ನಿರ್ದಾಕ್ಷಿಣ್ಯವಾದ ಕ್ರಮಗಳನ್ನು ಕೈಗೊಳ್ಳಲು ಇಂದು ನಿರ್ಧರಿಸಲಾಗಿದೆ.ಗೃಹ ಸಚಿವರ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ರಚನೆ ಮಾಡಲಾಗಿದ್ದು, ಮೇಲಿಂದ ಮೇಲೆ ಸಭೆಗಳನ್ನು ನಡೆಸಿ, ಅಗತ್ಯ ಕಾರ್ಯತಂತ್ರ ರೂಪಿಸಲು ಸೂಚನೆ ನೀಡಲಾಗಿದೆ. ಟಾಸ್ಕ್ ಫೋರ್ಸ್ ನಲ್ಲಿ ಆರೋಗ್ಯ ಸಚಿವರು, ಶಿಕ್ಷಣ ಸಚಿವರು, ವೈದ್ಯಕೀಯ ಶಿಕ್ಷಣ ಸಚಿವರು ಇರುತ್ತಾರೆ. ಠಾಣಾಧಿಕಾರಿಗಳಿಗೆ ಗೊತ್ತಿಲ್ಲದೆ ಡ್ರಗ್ಸ್ ದಂಧೆ ನಡೆಯಲು ಸಾಧ್ಯವಿಲ್ಲ. ಹೀಗಾಗಿ ಠಾಣಾಧಿಕಾರಿ ಡಿವೈಎಸ್‌ಪಿ, ಎಸಿಪಿ ಮತ್ತು ಎಸ್.ಪಿ ಗಳನ್ನು ಹೊಣೆ ಮಾಡಲು ತೀರ್ಮಾನಿಸಿದ್ದೇವೆ. ಕರ್ತವ್ಯಲೋಪವಾದಲ್ಲಿ ಇವರ ವಿರುದ್ಧ ಕ್ರಮ ಖಚಿತ ಎಂದು ತಿಳಿಸಿದ್ದಾರೆ.

ಪೆಡ್ಲರ್ ಗಳಿಗೆ ಜೀವಾವಧಿ ಶಿಕ್ಷೆಯವರೆಗೂ ಕಠಿಣ ಶಿಕ್ಷೆ ವಿಧಿಸಲು ಕಾನೂನು ತಿದ್ದುಪಡಿಗೆ ಕ್ರಮ ವಹಿಸಲಾಗುವುದು. ಈಗ ಜಾರಿ ಇರುವ ಕಾನೂನನ್ನು ಇನ್ನಷ್ಟು ಪರಿಣಾಮಕಾರಿಯಾಗಿಸುವ ನಿಟ್ಟಿನಲ್ಲಿ ಮೊದಲು ಪ್ರಯತ್ನ ಮಾಡುತ್ತೇವೆ. ಇದರ ಬಳಿಕವೂ ಅಗತ್ಯಬಿದ್ದರೆ ಹೊಸ ಕಾನೂನು ಮಾಡುತ್ತೇವೆ ಎಂದು ಹೇಳಿದ್ದಾರೆ.

ಎನ್.ಸಿ.ಸಿ, ಎನ್.ಜಿ.ಒ ಗಳನ್ನು ಬಲಗೊಳಿಸುವುದನ್ನು ಗುರಿಯಾಗಿಸಿಕೊಂಡಿದ್ದೇವೆ. ಪುನರ್ವಸತಿ ಕೇಂದ್ರಗಳನ್ನು ಹೆಚ್ಚಿಸಲು, ಸಮರ್ಪಕಗೊಳಿಸಲು ಕ್ರಮ ತೆಗೆದುಕೊಳ್ಳುತ್ತೇವೆ. ಡ್ರಗ್ಸ್ ಹಾವಳಿ ತೊಡೆದು ಹಾಕಲು ಕ್ಷಿಪ್ರ ಮತ್ತು ತೀಕ್ಷ್ಣ ಕ್ರಮ ಕೈಗೊಳ್ಳುತ್ತೇವೆ. ವಿದ್ಯಾರ್ಥಿ, ಯುವ ಜನರ ಮೇಲೆ, ಕುಟುಂಬಗಳ ಮೇಲೆ ಕೆಟ್ಟ ಪರಿಣಾಮ ಬೀರುತ್ತಿರುವುದನ್ನು ತಡೆಯಲು ಕ್ರಮ ವಹಿಸಲಾಗುವುದು. ಡ್ರಗ್ಸ್ ಸೇವಿಸಿ ಅಪರಾಧ ಕೃತ್ಯಗಳಲ್ಲಿ ತೊಡಗಿಸಿಕೊಳ್ಳುವ ಪ್ರಕರಣಗಳಿಗೆ ಬ್ರೇಕ್ ಹಾಕುತ್ತೇವೆ. ಪೊಲೀಸರಿಗೆ ಪೂರ್ಣ ಸ್ವಾತಂತ್ರ್ಯ ಕೊಡುವ ಜೊತೆಗೆ ಅವರನ್ನೇ ಹೊಣೆ ಮಾಡಿ ಕ್ರಮ ಕೂಡ ತೆಗೆದುಕೊಳ್ಳುತ್ತೇವೆ ಎಂದರು.

ಗೃಹ ಇಲಾಖೆ, ಆರೋಗ್ಯ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ, ಗ್ರಾಮೀಣಾಭಿವೃದ್ಧಿ, ಸಮಾಜ‌ ಕಲ್ಯಾಣ ಇಲಾಖೆ ಸೇರಿ ಹಲವು ಇಲಾಖೆಗಳ ಸಚಿವರು, ಅಧಿಕಾರಿಗಳ ಜೊತೆ ಉನ್ನತ ಮಟ್ಟದ ಸಭೆ ನಡೆಸಿ ಹಲವು ಕ್ಷಿಪ್ರ ತೀರ್ಮಾನಗಳನ್ನು ಕೈಗೊಂಡಿದ್ದೇವೆ. ವಿದ್ಯಾರ್ಥಿ-ಯುವ ಜನರ, ಪೋಷಕರ ಸಹಭಾಗಿತ್ವದಲ್ಲಿ ಮಾಹಿತಿ ಸಂಗ್ರಹಿಸಿ ಡ್ರಗ್ಸ್ ಹಾವಳಿಗೆ ಬ್ರೇಕ್ ಹಾಕುವ ಬಗ್ಗೆ ಗಂಭೀರ ಚರ್ಚೆ ನಡೆಸಿದ್ದೇವೆ. ಈಗಾಗಲೇ ಇರುವ ರಾಜ್ಯ ಮಟ್ಟದ ಸಮಿತಿಯಿಂದ ಮಾಹಿತಿ, ಅಭಿಪ್ರಾಯ ಸಂಗ್ರಹಿಸಿದ್ದೇವೆ ಎಂದು ತಿಳಿಸಿದ್ದಾರೆ.

ಬೆಂಗಳೂರು EAST ವಿಭಾಗದಲ್ಲಿ ಡ್ರಗ್ಸ್ ಹಾವಳಿ ತೀವ್ರವಾಗಿದೆ ಎನ್ನುವ ಮಾಹಿತಿ ಸಿಕ್ಕಿದೆ. ಇದಕ್ಕೆ ಬಲಿ‌ ಹಾಕಲು ನಿರ್ಣಯ ಮಾಡಿದ್ದೇವೆ. ಒರಿಸ್ಸಾ, ಆಂಧ್ರ, ಉತ್ತರ ಪ್ರದೇಶ ಸೇರಿ ಹಲವು ರಾಜ್ಯಗಳಿಂದ ಮಾದಕ ವಸ್ತು ರಾಜ್ಯಕ್ಕೆ ಪೂರೈಕೆ ಆಗುತ್ತಿದೆ. ಇದನ್ನು ತಡೆಯಲು ಹೊಸ ಕಾರ್ಯತಂತ್ರ ರೂಪಿಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ಜಾಗೃತಿ ಮತ್ತು ಕಾರ್ಯಾಚರಣೆಯನ್ನು ಇನ್ನಷ್ಟು ತೀವ್ರವಾಗಿ ನಡೆಸಲು ಸ್ಪಷ್ಟ ಸೂಚನೆ ನೀಡಲಾಗಿದೆ.

BREAKING : ರಾಜ್ಯದಲ್ಲಿ `ಡ್ರಗ್ಸ್ ಹಾವಳಿ ನಿಯಂತ್ರಣ'ಕ್ಕೆ ಕಾನೂನು ಜಾರಿ : CM ಸಿದ್ದರಾಮಯ್ಯ ಘೋಷಣೆ BREAKING: CM Siddaramaiah announces law to curb drug menace in the state
Share. Facebook Twitter LinkedIn WhatsApp Email

Related Posts

ಕ್ಷೇತ್ರದ ಮತದಾರರಿಗೆ ಕೊಟ್ಟ ಮಾತಿಗೆ ಬದ್ದನಾಗಿದ್ದೇನೆ: ಮದ್ದೂರು ಶಾಸಕ ಕೆ.ಎಂ.ಉದಯ್

22/11/2025 7:13 PM1 Min Read

BREAKING: ಮುಂಬೈನಲ್ಲಿ ರಾಸಾಯನಿಕ ಸೋರಿಕೆಯಾಗಿ ಓರ್ವ ಸಾವು, ಮೂವರು ಅಸ್ವಸ್ಥ

22/11/2025 7:11 PM1 Min Read

ವಿಶೇಷ ಚೇತನ ಮಕ್ಕಳೆಂದು ಪೋಷಕರು ಕೀಳರಿಮೆ ತೋರಬೇಡಿ: ಮದ್ದೂರು ಶಾಸಕ ಕೆ.ಎಂ.ಉದಯ್

22/11/2025 7:06 PM2 Mins Read
Recent News

ಕ್ಷೇತ್ರದ ಮತದಾರರಿಗೆ ಕೊಟ್ಟ ಮಾತಿಗೆ ಬದ್ದನಾಗಿದ್ದೇನೆ: ಮದ್ದೂರು ಶಾಸಕ ಕೆ.ಎಂ.ಉದಯ್

22/11/2025 7:13 PM

BREAKING: ಮುಂಬೈನಲ್ಲಿ ರಾಸಾಯನಿಕ ಸೋರಿಕೆಯಾಗಿ ಓರ್ವ ಸಾವು, ಮೂವರು ಅಸ್ವಸ್ಥ

22/11/2025 7:11 PM

ವಿಶೇಷ ಚೇತನ ಮಕ್ಕಳೆಂದು ಪೋಷಕರು ಕೀಳರಿಮೆ ತೋರಬೇಡಿ: ಮದ್ದೂರು ಶಾಸಕ ಕೆ.ಎಂ.ಉದಯ್

22/11/2025 7:06 PM

“ಇಲ್ಲಿನ ಪ್ರಾಣಿಗಳು ನನಗಿಂತ ಉತ್ತಮ ಜೀವನ ನಡೆಸ್ತಿವೆ” : ‘ವಂತಾರ’ದ ಅಭಿಮಾನಿಯಾದ ಜೂ. ಟ್ರಂಪ್

22/11/2025 7:01 PM
State News
KARNATAKA

ಕ್ಷೇತ್ರದ ಮತದಾರರಿಗೆ ಕೊಟ್ಟ ಮಾತಿಗೆ ಬದ್ದನಾಗಿದ್ದೇನೆ: ಮದ್ದೂರು ಶಾಸಕ ಕೆ.ಎಂ.ಉದಯ್

By kannadanewsnow0922/11/2025 7:13 PM KARNATAKA 1 Min Read

ಮಂಡ್ಯ : ಕ್ಷೇತ್ರದ ಮತದಾರರಿಗೆ ಕೊಟ್ಟ ಮಾತಿನಂತೆ ಅರಿವಿಟ್ಟುಕೊಂಡು ಪ್ರತಿ ಗ್ರಾಮಗಳಲ್ಲಿಯೂ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡುತ್ತಿದ್ದೇನೆ ಎಂದು ಶಾಸಕ…

BREAKING: ಮುಂಬೈನಲ್ಲಿ ರಾಸಾಯನಿಕ ಸೋರಿಕೆಯಾಗಿ ಓರ್ವ ಸಾವು, ಮೂವರು ಅಸ್ವಸ್ಥ

22/11/2025 7:11 PM

ವಿಶೇಷ ಚೇತನ ಮಕ್ಕಳೆಂದು ಪೋಷಕರು ಕೀಳರಿಮೆ ತೋರಬೇಡಿ: ಮದ್ದೂರು ಶಾಸಕ ಕೆ.ಎಂ.ಉದಯ್

22/11/2025 7:06 PM

ಕೆಲ ದಿನದಲ್ಲೇ ರಾಜ್ಯ ರಾಜಕಾರಣದಲ್ಲಿ ಸ್ಪೋಟಕ ಬೆಳವಣಿಗೆ; ಸುಳಿವು ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

22/11/2025 6:47 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.