Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಗಾಳಿ ಆಂಜನೇಯಸ್ವಾಮಿ ದೇಗುಲ ಮುಜರಾಯಿ ಇಲಾಖೆಯ ಸುಪರ್ದಿಗೆ ನೀಡಿದ್ದನ್ನು ಪ್ರಶ್ನಿಸಿ, ಹೈಕೋರ್ಟ್‌ಗೆ ಅರ್ಜಿ

14/07/2025 1:21 PM

BREAKING : 500 ನೇ ಕೋಟಿ ಟಿಕೆಟ್ ಪಡೆದ ಮಹಿಳೆಗೆ ಶಾಲು ಹೊದಿಸಿ CM ಸಿದ್ದರಾಮಯ್ಯ ಸನ್ಮಾನ.!

14/07/2025 1:17 PM

ಚೀನಾದ ಉಪಾಧ್ಯಕ್ಷ ಹಾನ್ ಜೆಂಗ್ ಜೊತೆ ಮಾತುಕತೆ ನಡೆಸಿದ ಸಚಿವ ಜೈಶಂಕರ್

14/07/2025 1:16 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : 500 ನೇ ಕೋಟಿ ಟಿಕೆಟ್ ಪಡೆದ ಮಹಿಳೆಗೆ ಶಾಲು ಹೊದಿಸಿ CM ಸಿದ್ದರಾಮಯ್ಯ ಸನ್ಮಾನ.!
KARNATAKA

BREAKING : 500 ನೇ ಕೋಟಿ ಟಿಕೆಟ್ ಪಡೆದ ಮಹಿಳೆಗೆ ಶಾಲು ಹೊದಿಸಿ CM ಸಿದ್ದರಾಮಯ್ಯ ಸನ್ಮಾನ.!

By kannadanewsnow5714/07/2025 1:17 PM

ಬೆಂಗಳೂರು : 500 ನೇ ಕೋಟಿ ಶಕ್ತಿ ಟಿಕೇಟ್ ಪಡೆದ ಮಹಿಳೆಗೆ ಸಿಎಂ ಸಿದ್ದರಾಮಯ್ಯ ಶಾಲು ಹೊದಿಸಿ, ಹಾರ ಹಾಕಿ ,ನೆನಪಿನ ಕಾಣಿಕೆ ನೀಡಿ ಸನ್ಮಾನಿಸಿದರು.

ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆ ಶಕ್ತಿ ಯೋಜನೆಯು ದಿನಾಂಕ 11-06-2023 ರಿಂದ ಜಾರಿಗೆ ಬಂದಿದ್ದು, ಜುಲೈ 14 ನೇ 2025 ಕ್ಕೆ 500 ಕೋಟಿ ಮಹಿಳಾ ಪ್ರಯಾಣಿಕರ ಟ್ರಿಪ್ ಅನ್ನು ತಲುಪುವ ಮುಖಾಂತರ ದೇಶದಲ್ಲೇ ಹೊಸ ಮೈಲಿಗಲ್ಲನ್ನು ತಲುಪಲಿದೆ.

ಮುಂದುವರೆದು, ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ನೀಡಲಾಗುತ್ತಿರುವುದಿಂದ ಮಹಿಳೆಯರ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ, ಔದ್ಯೋಗಿಕ, ಆರೋಗ್ಯ ಅಭಿವೃದ್ಧಿ ಹೊಂದಲು ಸಹಕಾರಿಯಾಗಿದೆ.  ಶಕ್ತಿ ಯೋಜನೆಯು ಅಭೂತಪೂರ್ವ ಯಶಸ್ಸನ್ನು ಕಂಡು ಮಹಿಳಾ ಸಬಲೀಕರಣದೆಡೆಗಿನ ದಿಟ್ಟ ಯೋಜನೆಯಾಗಿ ಮುಂದುವರೆಯುತ್ತಿರುವುದಕ್ಕೆ  ಸಾಕ್ಷಿಯಾಗಿದೆ. ಬಸ್ಸಿನಲ್ಲಿ ಪ್ರಯಾಣಿಸುವ ಮಹಿಳಾ ಪ್ರಯಾಣಿಕರಿಗೆ 500 ನೇ ಕೋಟಿ  ಟಿಕೇಟ್ ಅನ್ನು ಸಾಂಕೇತಿಕವಾಗಿ ಇಂದು ವಿತರಿಸಿದ್ದು, ಶಕ್ತಿ ಯೋಜನೆಯಲ್ಲಿ ಇಲ್ಲಿಯವರೆಗೂ ರೂ.12669 ಕೋಟಿ ಮಹಿಳಾ ಟಿಕೇಟ್ ಮೌಲ್ಯ. ನಗರ, ಸಾಮಾನ್ಯ, ವೇಗದೂತ ಬಸ್ಸುಗಳಲ್ಲಿ ರಾಜ್ಯದ್ಯಾಂತ ರಾಜ್ಯದ ನಿವಾಸಿಗಳಾ ಎಲ್ಲಾ ಮಹಿಳೆಯರು, ವಿದ್ಯಾರ್ಥಿನಿಯರು, ಲಿಂಗತ್ವ ಅಲ್ಪಸಂಖ್ಯಾತರು ಉಚಿತವಾಗಿ ಪ್ರಯಾಣಿಸಬಹುದಾಗಿದೆ.

ಶಕ್ತಿ ಯೋಜನೆಗೆ ಮುನ್ನ ಸಾರಿಗೆ ಬಸ್ಸುಗಳಲ್ಲಿ ಪ್ರತಿ ದಿನ 85.84 ಲಕ್ಷ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು, ಈಗ 1.17  ಕೋಟಿ ಜನರು ಪ್ರತಿ ದಿನ ಪ್ರಯಾಣಿಸುತ್ತಿದ್ದಾರೆ. ಸಾರಿಗೆ ನಿಗಮಗಳನ್ನು ಸದೃಡಗೊಳಿಸಲು,

ಹೊಸ ಬಸ್ಸುಗಳ ಸೇರ್ಪಡೆ ಮತ್ತು ನೇಮಕಾತಿಗೆ ಚಾಲನೆ ನೀಡಲಾಗಿದೆ.

ಹೊಸ ಬಸ್ಸುಗಳ ಸೇರ್ಪಡೆ ಮತ್ತು ನೇಮಕಾತಿಯು ಸಂಪೂರ್ಣ ಸ್ಥಗಿತಗೊಂಡಿತ್ತು.ಕಳೆದ ಎರಡು ವರುಷದಲ್ಲಿ 5800 ಹೊಸ ಬಸ್ಸುಗಳ ಸೇರ್ಪಡೆಗೆ ಅನುಮೋದನೆ ನೀಡಿತು. ಈಗಾಗಲೇ ನಾಲ್ಕು ನಿಗಮಗಳಲ್ಲಿ 5049 ಹೊಸ ಬಸ್ಸುಗಳ ಸೇರ್ಪಡೆಯಾಗಿದೆ.

ಅದೇ ರೀತಿ 9000 ಹುದ್ದೆಗಳ ನೇಮಕಾತಿಗೆ ಅನುಮತಿ ನೀಡಲಾಗಿದೆ. ಈಗಾಗಲೇ 6700 ಹೊಸ ನೇಮಕಾತಿ ಮತ್ತು 1000 ಅನುಕಂಪದ ನೇಮಕಾತಿ ಪೂರ್ಣಗೊಳಿಸಲಾಗಿದೆ. ಒಟ್ಟು 10000 ನೇಮಕಾತಿ ಸಾರಿಗೆ ನಿಗಮದಲ್ಲಿ ಕಳೆದ ಎರಡು ವರ್ಷದ ಅವಧಿಯಲ್ಲಿ ಚಾಲನೆ ದೊರಕಿದೆ.

ಶಕ್ತಿ ಫೂರ್ವ 21164 ಅನುಸೂಚಿಗಳಿದ್ದು, ,ಶಕ್ತಿ ನಂತರ 23635 ಕ್ಕೆ ಹೆಚ್ಚಳವಾಗಿದೆ. 

ಅದೇ ರೀತಿ ಶಕ್ತಿ ಪೂರ್ವ ಒಟ್ಟು ಬಸ್ಸುಗಳು 23948 ಇದ್ದದ್ದು ನಂತರ 26130 ಕ್ಕೆ ಏರಿಕೆಯಾಗಿದೆ. ಹಳೆಯ 2828 ವಾಹನಗಳನ್ನು ಬದಲಿಸಲಾಗಿದೆ.

ಕಳೆದ ಎರಡು ವರ್ಷದಲ್ಲಿ ನಾಲ್ಕೂ ಸಾರಿಗೆ ನಿಗಮಗಳಿಗೆ 185 ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಪ್ರಶಸ್ತಿಗಳು ಸಾರಿಗೆ ನಿಗಮಗಳಿಗೆ ಲಭಿಸಿರುತ್ತದೆ.

ವಿಶೇಷ ಬಸ್ ಪೂಜಾ ಕಾರ್ಯಕ್ರಮ 

ನಗರದ ಪ್ರಮುಖ ಬಸ್ ನಿಲ್ದಾಣಗಳಲ್ಲಿ, ತಾಲ್ಲೂಕು ಮತ್ತು ಜಿಲ್ಲೆಯ ಬಸ್ ನಿಲ್ದಾಣಗಳಲ್ಲಿ ಬಸ್ ಪೂಜೆ ನೆರವೇರಿಸಿ ಸಿಹಿ ಹಂಚಿ ಸಾಂಕೇತಿಕವಾಗಿ ಅಚರಣೆ ಮಾಡಿ, ಮಹಿಳಾ ಪ್ರಯಾಣಿಕರಿಗೆ ಬಸ್ನಲ್ಲಿ ಸ್ವಾಗತದ ರೂಪದಲ್ಲಿ ಗುಲಾಬಿ ಹೂಗಳ ವಿತರಣೆ.

ಒಡಲ ಧ್ವನಿ ಸ್ತ್ರೀ ಸಂಘ ವಿಜಯಪುರವರು ಶಕ್ತಿ ಯೋಜನೆಯಿಂದ ಸಾವಯವ ರೊಟ್ಟಿ, ,ಹೋಳಿಗೆ ತಯಾರಿಸಿ ಬೆಂಗಳೂರಿಗೆ ಮಾರಾಟ ಮಾಡಿ ಲಕ್ಷಾಂತರ ರೂ ವಹಿವಾಟು ನಡೆಸಲಾಗಿದ್ದು ,ಅವರಿಂದ ಸನ್ಮಾನ್ಯ ಮುಖ್ಯಮಂತ್ರಿ ರವರಿಗೆ ಮತ್ತು ಮಾನ್ಯ ಉಪಮುಖ್ಯ ಮಂತ್ರಿರವರಿಗೆ,ಮಾನ್ಯ ಸಾರಿಗೆ ಹಾಗೂ ಮುಜರಾಯಿಗೆ ರೊಟ್ಟಿ ನೀಡಿ ಗೌರವ ಸಲ್ಲಿಸಿದರು.

ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಸಾರಿಗೆ ಹಾಗೂ ಮುಜರಾಯಿರವರಿಂದ  ಶಕ್ತಿ 500ನೇ ಕೋಟಿ ಪಿಂಕ್ ಟಿಕೆಟ್ ವಿತರಣೆ ಮತ್ತು ಬಸ್ಸಿನಲ್ಲಿದ್ದ ಮಹಿಳೆಯರು, ವಿದ್ಯಾರ್ಥಿನಿಯರು, ಹಿರಿಯ ನಾಗರಿಕರು ಹಾಗೂ ಲಿಂಗತ್ವ ಅಲ್ಪಸಂಖ್ಯಾತರು 30 ಮಹಿಳಾ ಪ್ರಯಾಣಿಕರಿಗೆ  ಇಳಕಲ್ ಸೀರೆ ನೀಡಿ ಗೌರವಿಸಿದರು.

BREAKING: CM Siddaramaiah felicitates woman who got 500 crore ticket with shawl!
Share. Facebook Twitter LinkedIn WhatsApp Email

Related Posts

BIG NEWS : ಗಾಳಿ ಆಂಜನೇಯಸ್ವಾಮಿ ದೇಗುಲ ಮುಜರಾಯಿ ಇಲಾಖೆಯ ಸುಪರ್ದಿಗೆ ನೀಡಿದ್ದನ್ನು ಪ್ರಶ್ನಿಸಿ, ಹೈಕೋರ್ಟ್‌ಗೆ ಅರ್ಜಿ

14/07/2025 1:21 PM1 Min Read

BREAKING : ನಾಳೆ ಸ್ವಗ್ರಾಮ ದಶವಾರದಲ್ಲಿ ಹಿರಿಯ ನಟಿ ಬಿ.ಸರೋಜಾದೇವಿ ಅಂತ್ಯಕ್ರಿಯೆ

14/07/2025 1:02 PM1 Min Read

BREAKING : ನಾಳೆ ಬೆಳಗ್ಗೆ 11 ಗಂಟೆಗೆ ಹುಟ್ಟೂರು ದಶವಾರ ಗ್ರಾಮದಲ್ಲಿ ನಟಿ `ಬಿ. ಸರೋಜಾದೇವಿ’ ಅಂತ್ಯಕ್ರಿಯೆ

14/07/2025 12:56 PM1 Min Read
Recent News

BIG NEWS : ಗಾಳಿ ಆಂಜನೇಯಸ್ವಾಮಿ ದೇಗುಲ ಮುಜರಾಯಿ ಇಲಾಖೆಯ ಸುಪರ್ದಿಗೆ ನೀಡಿದ್ದನ್ನು ಪ್ರಶ್ನಿಸಿ, ಹೈಕೋರ್ಟ್‌ಗೆ ಅರ್ಜಿ

14/07/2025 1:21 PM

BREAKING : 500 ನೇ ಕೋಟಿ ಟಿಕೆಟ್ ಪಡೆದ ಮಹಿಳೆಗೆ ಶಾಲು ಹೊದಿಸಿ CM ಸಿದ್ದರಾಮಯ್ಯ ಸನ್ಮಾನ.!

14/07/2025 1:17 PM

ಚೀನಾದ ಉಪಾಧ್ಯಕ್ಷ ಹಾನ್ ಜೆಂಗ್ ಜೊತೆ ಮಾತುಕತೆ ನಡೆಸಿದ ಸಚಿವ ಜೈಶಂಕರ್

14/07/2025 1:16 PM

BREAKING : ವೈವಾಹಿಕ ಪ್ರಕರಣಗಳಲ್ಲಿ ಸಂಗಾತಿಯ `ರಹಸ್ಯ ಕಾಲ್ ರೆಕಾರ್ಡ್’ ಸಾಕ್ಷ್ಯವಾಗಿ ಬಳಸಬಹುದು : ಸುಪ್ರೀಂಕೋರ್ಟ್ ಮಹತ್ವದ ತೀರ್ಪು

14/07/2025 1:10 PM
State News
KARNATAKA

BIG NEWS : ಗಾಳಿ ಆಂಜನೇಯಸ್ವಾಮಿ ದೇಗುಲ ಮುಜರಾಯಿ ಇಲಾಖೆಯ ಸುಪರ್ದಿಗೆ ನೀಡಿದ್ದನ್ನು ಪ್ರಶ್ನಿಸಿ, ಹೈಕೋರ್ಟ್‌ಗೆ ಅರ್ಜಿ

By kannadanewsnow0514/07/2025 1:21 PM KARNATAKA 1 Min Read

ಬೆಂಗಳೂರು : ಬೆಂಗಳೂರು ಮೈಸೂರು ರಸ್ತೆಯಲ್ಲಿರುವ ಇತಿಹಾಸ ಪ್ರಸಿದ್ಧ ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನವನ್ನು ಸರ್ಕಾರ ಮುಜರಾಯಿ ಇಲಾಖೆಗೆ ತೆಗೆದುಕೊಂಡಿದ್ದು,…

BREAKING : 500 ನೇ ಕೋಟಿ ಟಿಕೆಟ್ ಪಡೆದ ಮಹಿಳೆಗೆ ಶಾಲು ಹೊದಿಸಿ CM ಸಿದ್ದರಾಮಯ್ಯ ಸನ್ಮಾನ.!

14/07/2025 1:17 PM

BREAKING : ನಾಳೆ ಸ್ವಗ್ರಾಮ ದಶವಾರದಲ್ಲಿ ಹಿರಿಯ ನಟಿ ಬಿ.ಸರೋಜಾದೇವಿ ಅಂತ್ಯಕ್ರಿಯೆ

14/07/2025 1:02 PM

BREAKING : ನಾಳೆ ಬೆಳಗ್ಗೆ 11 ಗಂಟೆಗೆ ಹುಟ್ಟೂರು ದಶವಾರ ಗ್ರಾಮದಲ್ಲಿ ನಟಿ `ಬಿ. ಸರೋಜಾದೇವಿ’ ಅಂತ್ಯಕ್ರಿಯೆ

14/07/2025 12:56 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.