ಬೆಂಗಳೂರು : ಕೇಂದ್ರ ಪುರಸ್ಕೃತ ಯೋಜನೆಗಳ ಪ್ರಗತಿ ಪರಿಶೀಲನೆಗೆ ಕಮಿಟಿ ರಚನೆ ಮಾಡಲಾಗಿದೆ. ಪ್ರಗತಿ ಪರಿಶೀಲನೆಗೆ ರಚಿಸಿರುವ ಕಮಿಟಿ ಅಧ್ಯಕ್ಷ ನಾನು ಆಗಿರುತ್ತೇನೆ ಎಂದು ವಿಧಾನಸೌಧದಲ್ಲಿ ದಿಶಾ ಸಮಿತಿ ಸಭೆಯ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಬೆಂಗಳೂರಿನಲ್ಲಿ ದಿಶಾ ಸಮಿತಿ ಸಭೆ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಕೇಂದ್ರ ಪುರಸ್ಕೃತ 67 ಯೋಜನೆಗಳಿವೆ. ಎಲ್ಲವನ್ನು ಪರಿಶೀಲಿಸಿದ್ದೇವೆ. ಈ ಕಾರ್ಯಕ್ರಮಗಳಿಗೆ ಕೇಂದ್ರ ಹಾಗೂ ರಾಜ್ಯದಿಂದ ಹಣ ಖರ್ಚಾಗುತ್ತದೆ. ಇದಕ್ಕಾಗಿ ಎರಡು ಸರ್ಕಾರಗಳು ಹಣ ಮೀಸಲಿಟ್ಟಿರುತ್ತವೆ. ಆಯಾ ಯೋಜನೆಗಳ ಮೇಲೆ ಹಣ ಡಿಸೈಡ್ ಆಗುತ್ತದೆ.
ಕೆಲವೊಂದು ಯೋಜನೆಗೆ ಕೇಂದ್ರ 50 % ರಾಜ್ಯ 50% ಹಣ ಕೊಟ್ಟರೆ, ಕೆಲವೊಂದು ಯೋಜನೆಗಳಲ್ಲಿ 30 ಮತ್ತು 70 ಪರ್ಸೆಂಟ್ ಶೇರಿಂಗ್ ಇರುತ್ತದೆ. ಕೇಂದ್ರ ಸರ್ಕಾರ ಪ್ರಾಯೋಗಿಕ ಯೋಜನೆಗಳಿಗೆ. ರಾಜ್ಯ ಸರ್ಕಾರ ಒಟ್ಟು 46,856 ಕೋಟಿ ಹಣ ಖರ್ಚು ಮಾಡುತ್ತಿದೆ. ಕೇಂದ್ರ ಸರ್ಕಾರ ಖರ್ಚು ಮಾಡುತ್ತಿರುವುದು 22,785 ಕೋಟಿ ರೂಪಾಯಿ ಹಣ ಎಂದು ವಿಧಾನಸೌಧದಲ್ಲಿ ದಿಶಾ ಸಭೆಯ ಬಳಿಕ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದರು.