ಬೆಂಗಳೂರು : ನಟ ಡಾಲಿ ಧನಂಜಯ್ ನಾಯಕರಾಗಿ ನಟಿಸುತ್ತಿರುವ ನಾಡಪ್ರಭು ಕೆಂಪೇಗೌಡ ಚಿತ್ರದ ಟೈಟಲ್ ಕುರಿತು ವಿವಾದ ಶುರುವಾಗಿದ್ದು, ಇದೀಗ ಸಿನಿಮಾ ನಿರ್ದೇಶಕ ಟಿ.ಎಸ್. ನಾಗಾಭರಣ ವಿರುದ್ಧ ದೂರು ದಾಖಲಾಗಿದೆ.
ನಿರ್ಮಾಪಕ ಕಿರಣ್ ತೋಟಂಬೈಲೆ ಅವರು ನಾಗಾಭರಣ ವಿರುದ್ಧ ದೂರು ನೀಡಿದ್ದಾರೆ. ಕಿರಣ್ ಅವರು ಧರ್ಮಭೀರು ನಾಡಪ್ರಭು ಕೆಂಪೇಗೌಡ ಹೆಸರಿನ ಸಿನಿಮಾ ಘೋಷಣೆ ಮಾಡಿದ್ದಾರೆ. ಆದರೆ ಟಿ.ಎಸ್. ನಾಗಾಭರಣ ಅವರು ನಾಡಪ್ರಭು ಕೆಂಪೇಗೌಡ ಟೈಟಲ್ ರಿಜಿಸ್ಟರ್ ಮಾಡಿಸಿ, ಸಿನಿಮಾ ಘೋಷಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಟಿ.ಎಸ್. ನಾಗಾಭರಣ ವಿರುದ್ಧ ದೂರು ದಾಖಲಿಸಿದ್ದಾರೆ.