ಬೆಂಗಳೂರು : ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಇತ್ತೀಚಿಗೆ ಬಹುಭಾಷ ನಟ ಪ್ರಕಾಶ್ ರೈ ಅವರ AI ಫೋಟೋ ಎಲ್ಲೆಡೆ ಭಾರಿ ವೈರಲ್ ಆಗಿತ್ತು.ಇದೀಗ ಈ ರೀತಿ ಫೋಟೋ ವೈರಲ್ ಮಾಡಿದ ಪ್ರಶಾಂತ್ ಸಂಬರಗಿ ವಿರುದ್ಧ ಪ್ರಕಾಶ್ ರಾಜ್ ಕೇಸ್ ದಾಖಲು ಮಾಡಿದ್ದಾರೆ.
ಈ ಫೋಟೋ ನಿಜ ಎಂದು ನಂಬಿಸುವ ಕೆಲಸ ಕೆಲವರಿಂದ ಆಗಿದೆ. ಇಲ್ಲದ್ದನ್ನು ಇರುವ ರೀತಿಯಲ್ಲಿ ತೋರಿಸುತ್ತಿರುವ ಬಗ್ಗೆ ಪ್ರಕಾಶ್ ರೈಗೆ ಅಸಮಾಧಾನ ಇದೆ. ಹೀಗಾಗಿ, ಮೈಸೂರಿನ ಲಕ್ಷ್ಮೀಪುರಂ ಪೊಲೀಸ್ ಠಾಣೆಗೆ ಆಗಮಿಸಿ ದೂರು ಕೊಟ್ಟಿದ್ದಾರೆ. ‘ತಮ್ಮ ಪೋಟೋವನ್ನು ಎಐ ತಂತ್ರಜ್ಞಾನ ಬಳಸಿ ಅಪಪ್ರಚಾರ ಮಾಡುತ್ತಿದ್ದಾರೆ. ಇದಕ್ಕೆ ಕಡಿವಾಣ ಹಾಕಬೇಕು ಎಂದು ಪ್ರಕಾಶ್ ರೈ ದೂರಿನಲ್ಲಿ ಕೋರಿದ್ದಾರೆ.
ಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡುವುದರಲ್ಲಿ ತಪ್ಪಿಲ್ಲ. ಅದು ಅವರ ನಂಬಿಕೆ. ನನಗೆ ದೇವರ ಮೇಲೆ ನಂಬಿಕೆ ಇಲ್ಲ. ನನಗೆ ಮನ್ಯುಷ್ಯರ ಮೇಲೆ ನಂಬಿಕೆ. ದೇವರಿಲ್ಲದೆ ಬದುಕಬಹುದು ಆದರೆ, ಮನುಷ್ಯರಿಲ್ಲದೆ ಬದುಕಲು ಸಾಧ್ಯವಿಲ್ಲ. ಹಾಗಾಂತ ಅವರ ನಂಬಿಕೆಯನ್ನ ಪ್ರಶ್ನೆ ಮಾಡಲ್ಲ. ಅದನ್ನ ರಾಜಕಾರಣಕ್ಕೆ ಬಳಸಿಕೊಳ್ಳುವುದು ತಪ್ಪು ಎಂದಿದ್ದಾರೆ.
ಹಬ್ಬಿಸಿದ ಸುಳ್ಳು ಸುದ್ದಿಯನ್ನು ಮಹಾವೀರ ಸಂಬರ್ಗಿ ತಮ್ಮ ಖಾತೆಯಿಂದ ಈಗ ಹೆದರಿ ತೆಗೆದಾಯ್ತು .. ಆದರೆ ಮಾಡಿದ ಕಿಡಿಗೇಡಿತನದಿಂದ ತಪ್ಪಿಸಿಕೊಳ್ಳಲಾಗದು ಎಂದು ಯಾರಾದರು ಉಗಿದು ಹೇಳಿ #justasking
— Prakash Raj (@prakashraaj) January 29, 2025