Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ರಾಜ್ಯದ ಸರ್ಕಾರಿ ಶಾಲಾ-ಕಾಲೇಜು ಅತಿಥಿ ಶಿಕ್ಷಕ, ಉಪನ್ಯಾಸಕರಿಗೆ ಭರ್ಜರಿ ಸಿಹಿಸುದ್ದಿ: ಗೌರವಧನ ಹೆಚ್ಚಳ

15/05/2025 3:59 PM

BREAKING : ಸೋಫಿಯಾ ಬಗ್ಗೆ ಅವಹೇಳನಕಾರಿ ಹೇಳಿಕೆ : ವಿಜಯ್ ಶಾ ವಿರುದ್ಧ ಬೆಳಗಾವಿಯಲ್ಲೂ ‘FIR’ ದಾಖಲು

15/05/2025 3:42 PM

BIG NEWS: ಅವರು ನಮ್ಮ ತಲೆಗೆ ಹೊಡೆದ್ರೆ, ನಾವು ಎದೆ ಬಗೆಯುತ್ತೇವೆ: ಪಾಕ್‌ಗೆ ರಾಜನಾಥ್‌ ಸಿಂಗ್‌ ಖಡಕ್‌ ಸಂದೇಶ

15/05/2025 3:40 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಸೋಫಿಯಾ ಬಗ್ಗೆ ಅವಹೇಳನಕಾರಿ ಹೇಳಿಕೆ : ವಿಜಯ್ ಶಾ ವಿರುದ್ಧ ಬೆಳಗಾವಿಯಲ್ಲೂ ‘FIR’ ದಾಖಲು
KARNATAKA

BREAKING : ಸೋಫಿಯಾ ಬಗ್ಗೆ ಅವಹೇಳನಕಾರಿ ಹೇಳಿಕೆ : ವಿಜಯ್ ಶಾ ವಿರುದ್ಧ ಬೆಳಗಾವಿಯಲ್ಲೂ ‘FIR’ ದಾಖಲು

By kannadanewsnow0515/05/2025 3:42 PM

ಬೆಳಗಾವಿ : ಮಧ್ಯಪ್ರದೇಶದ ಕ್ಯಾಬಿನೆಟ್ ಸಚಿವ ಕುನ್ವರ್ ವಿಜಯ್ ಶಾ ಅವರು ಮಹಿಳಾ ಸೇನಾಧಿಕಾರಿ ಕರ್ನಲ್ ಸೋಫಿಯಾ ಖುರೇಷಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದು, ಅವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಇಂದು ಅವರು FIR ರದ್ದು ಕೋರಿ ಸುಪ್ರೀಂ ಕೋರ್ಟ್ ಗೆ ಮೊರೆ ಹೋಗಿದ್ದು, ಈ ವೇಳೆ ಸುಪ್ರೀಂ ಕೋರ್ಟ್ ಸಿಜೆ ಗವಾಯಿ ಅವರು ಸಚಿವರಿಗೆ ಛೀಮಾರಿ ಹಾಕಿದರು.

ಇದೀಗ ಸೋಫಿಯಾ ಖುರೇಶಿ ಅವರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಧ್ಯಪ್ರದೇಶದ ವಿಜಯ ಶಾ ವಿರುದ್ಧ ಬೆಳಗಾವಿಯ ಸೆನ್ ಠಾಣೆಯಲ್ಲಿ ಎಸ್.ಪಿ ಭೀಮಾಶಂಕರ್ ಗುಳೇದ ಅವರ ಸೂಚನೆಯ ಮೇರೆಗೆ ಇದೀಗ ವಿಜಯ ಶಾ ವಿರುದ್ಧ ಪ್ರಕರಣ ದಾಖಲಾಗಿದೆ ಬಿಎನ್ಎಸ್ ಕಾಯ್ದೆ 353, 192ರ ಅಡಿಯಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಾಗಿದೆ.

ಸುಪ್ರೀಂ ಛೀಮಾರಿ

ಹೌದು ಸೋಫಿಯಾ ಖುರೇಶಿ ಅವರ ಕುರಿತು ವಿಜಯ ಶಾ ಕಾರ್ಯಕ್ರಮ ಒಂದರಲ್ಲಿ ಅವಹೇಳನಕಾರಿಯಾಗಿ ಮಾತನಾಡಿದ್ದರು, ನಮ್ಮ ಹೆಣ್ಣುಮಕ್ಕಳ ಸಿಂಧೂರವನ್ನು ಅಳಿಸಿದವರಿಗೆ ತಕ್ಕ ಪಾಠ ಕಲಿಸಲು ನಾವು ಅವರ ಸಹೋದರಿಯನ್ನೇ ಕಳುಹಿಸಿದ್ದೆವು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಬಳಿಕ ಈ ಒಂದು ಹೇಳಿಕೆ ತೀವ್ರ ಸ್ವರೂಪ ಪಡೆಯುತ್ತಿದ್ದಂತೆ ಕ್ಷಮೆ ಕೂಡ ಯಾಚಿಸಿದರು.

ಆದರೆ ಇವರ ವಿರುದ್ಧ FIR ದಾಖಲಾಗಿತ್ತು. ಇದೀಗ ಎಫ್ ಐ ಆರ್ ರದ್ದು ಕೋರಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ. ಈ ವೇಳೆ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಸಿಜೆ ಗವಾಯಿ ಅವರು ಉನ್ನತ ಸ್ಥಾನದಲ್ಲಿರುವ ನಿಮ್ಮಿಂದ ಇಂತಹ ಹೇಳಿಕೆ ನಿರೀಕ್ಷಿಸಲಿಲ್ಲ. ಅಂತ ದೊಡ್ಡ ಕಾರ್ಯಕ್ರಮಗಳಲ್ಲಿ ಈ ಒಂದು ಹೇಳಿಕೆ ನೀಡುವ ಅವಶ್ಯಕತೆ ಇತ್ತಾ? ಎಂದು ಛೀ ಮಾರಿ ಹಾಕಿದೆ. ಬಳಿಕ ವಿಚಾರಣೆಯನ್ನು ನಾಳೆಗೆ ಮುಂದೂಡಲಾಯಿತು.

ಪ್ರಕರಣ ಹಿನ್ನೆಲೆ?

ವಿಜಯ್ ಶಾ ನೀಡಿದ್ದ ಹೇಳಿಕೆಯು ದೇಶದಾದ್ಯಂತ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ಕಳೆದ ಒಂದು ವಾರಕ್ಕೂ ಹೆಚ್ಚು ಅವಧಿಯಿಂದ ಕರ್ನಲ್‌ ಸೋಫಿಯಾ ಅವರ ಬಗ್ಗೆ ದೇಶದಾದ್ಯಂತ ಜನ ಹೆಮ್ಮೆಯಿಂದ ಮಾತನಾಡಿಕೊಳ್ಳುತ್ತಿದ್ದಾರೆ. ಆದರೆ, ಇದೇ ಸಂದರ್ಭದಲ್ಲಿ ಬಿಜೆಪಿಯ ಪ್ರಭಾವಿ ಸಚಿವರ ಹೇಳಿಕೆ ಭಾರೀ ವಿವಾದಕ್ಕೆ ಕಾರಣವಾಗಿತ್ತು. ಅಲ್ಲದೇ ಈ ಹೇಳಿಕೆಯಿಂದ ಬಿಜೆಪಿ ಸಹ ಮುಜುಗರಕ್ಕೆ ಒಳಗಾಗಿತ್ತು.

ಇದು ದೇಶದಾದ್ಯಂತ ಭಾರೀ ಮೆಚ್ಚುಗೆಗೆ ಕಾರಣವಾಗಿತ್ತು. ಆದರೆ, ಬಿಜೆಪಿಯ ಸಚಿವ ಕನ್ವರ್ ವಿಜಯ್‌ ಶಾ, “ನಮ್ಮ ಹೆಣ್ಣುಮಕ್ಕಳ ಸಿಂಧೂರವನ್ನು ಅಳಿಸಿದವರಿಗೆ ತಕ್ಕ ಪಾಠ ಕಲಿಸಲು ನಾವು ಅವರ ಸಹೋದರಿಯನ್ನೇ ಕಳುಹಿಸಿದ್ದೆವು” ಎಂದು ಸೋಫಿಯಾ ಖುರೇಷಿ ಅವರ ಬಗ್ಗೆ ತುಚ್ಛವಾಗಿ ಮಾತನಾಡಿದ್ದರು. ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಈ ಹೇಳಿಕೆ ಭಾರೀ ವಿವಾದಕ್ಕೆ ಕಾರಣವಾಗಿತ್ತು.

ಬಳಿಕ ತಮ್ಮ ಹೇಳಿಕೆ ವಿವಾದದ ಸ್ವರೂಪ ಪಡೆಯುತ್ತಲೇ ಈ ಬಗ್ಗೆ ಸ್ಪಷ್ಟನೆ ನೀಡಿರುವ ಮಧ್ಯ ಪ್ರದೇಶ ಸಚಿವ ವಿಜಯ್ ಶಾ, ಸಹೋದರಿ ಸೋಫಿಯಾ ಖುರೇಷಿ ಬಗ್ಗೆ ನಾನು ಕನಸಿನಲ್ಲೂ ಆ ರೀತಿ ಭಾವಿಸಲು ಸಾಧ್ಯವಿಲ್ಲ, ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗುತ್ತಿದೆ. ಸಿಸ್ಟರ್ ಸೋಫಿಯಾ ಜಾತಿ ಮತ್ತು ಧರ್ಮವನ್ನು ಮೀರಿ ಭಾರತಕ್ಕೆ ಕೀರ್ತಿ ತಂದಿದ್ದಾರೆ. ಅವರು ನಮ್ಮ ಸ್ವಂತ ಸಹೋದರಿಗಿಂತ ಹೆಚ್ಚು ಗೌರವಾನ್ವಿತರು.

ಅವರು ರಾಷ್ಟ್ರಕ್ಕೆ ಮಾಡಿದ ಸೇವೆಗೆ ನಾನು ಅವರಿಗೆ ನಮಸ್ಕರಿಸುತ್ತೇನೆ. ನಮ್ಮ ಕನಸಿನಲ್ಲಿಯೂ ಅವರನ್ನು ಅವಮಾನಿಸುವ ಬಗ್ಗೆ ನಾವು ಯೋಚಿಸಲು ಸಹ ಸಾಧ್ಯವಿಲ್ಲ. ಆದರೂ, ನನ್ನ ಮಾತುಗಳು ಸಮಾಜ ಮತ್ತು ಧರ್ಮಕ್ಕೆ ನೋವುಂಟು ಮಾಡಿದ್ದರೆ, ನಾನು ಒಂದಲ್ಲ ಹತ್ತು ಬಾರಿ ಕ್ಷಮೆಯಾಚಿಸಲು ಸಿದ್ಧನಿದ್ದೇನೆ ಎಂದು ಅವರು ಹೇಳಿದ್ದಾರೆ.

Share. Facebook Twitter LinkedIn WhatsApp Email

Related Posts

BREAKING: ರಾಜ್ಯದ ಸರ್ಕಾರಿ ಶಾಲಾ-ಕಾಲೇಜು ಅತಿಥಿ ಶಿಕ್ಷಕ, ಉಪನ್ಯಾಸಕರಿಗೆ ಭರ್ಜರಿ ಸಿಹಿಸುದ್ದಿ: ಗೌರವಧನ ಹೆಚ್ಚಳ

15/05/2025 3:59 PM2 Mins Read

ಕನ್ನಡಿಗರ ಬಗ್ಗೆ ಅವಹೇಳನಕಾರಿ ಹೇಳಿಕೆ ಕೇಸ್ : ಸೋನು ನಿಗಮ್ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಆದೇಶ

15/05/2025 3:32 PM1 Min Read

ಸಾಗರದ ಅತವಾಡಿಯಲ್ಲಿ ಮುಸ್ಲೀಂ ಕುಟುಂಬದ ಮೇಲಿನ ಮಾರಣಾಂತಿಕ ಹಲ್ಲೆಗೆ ಕಲಸೆ ಚಂದ್ರಪ್ಪ ಖಂಡನೆ, ಕ್ರಮಕ್ಕೆ ಒತ್ತಾಯ

15/05/2025 3:30 PM2 Mins Read
Recent News

BREAKING: ರಾಜ್ಯದ ಸರ್ಕಾರಿ ಶಾಲಾ-ಕಾಲೇಜು ಅತಿಥಿ ಶಿಕ್ಷಕ, ಉಪನ್ಯಾಸಕರಿಗೆ ಭರ್ಜರಿ ಸಿಹಿಸುದ್ದಿ: ಗೌರವಧನ ಹೆಚ್ಚಳ

15/05/2025 3:59 PM

BREAKING : ಸೋಫಿಯಾ ಬಗ್ಗೆ ಅವಹೇಳನಕಾರಿ ಹೇಳಿಕೆ : ವಿಜಯ್ ಶಾ ವಿರುದ್ಧ ಬೆಳಗಾವಿಯಲ್ಲೂ ‘FIR’ ದಾಖಲು

15/05/2025 3:42 PM

BIG NEWS: ಅವರು ನಮ್ಮ ತಲೆಗೆ ಹೊಡೆದ್ರೆ, ನಾವು ಎದೆ ಬಗೆಯುತ್ತೇವೆ: ಪಾಕ್‌ಗೆ ರಾಜನಾಥ್‌ ಸಿಂಗ್‌ ಖಡಕ್‌ ಸಂದೇಶ

15/05/2025 3:40 PM

ಕನ್ನಡಿಗರ ಬಗ್ಗೆ ಅವಹೇಳನಕಾರಿ ಹೇಳಿಕೆ ಕೇಸ್ : ಸೋನು ನಿಗಮ್ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಆದೇಶ

15/05/2025 3:32 PM
State News
KARNATAKA

BREAKING: ರಾಜ್ಯದ ಸರ್ಕಾರಿ ಶಾಲಾ-ಕಾಲೇಜು ಅತಿಥಿ ಶಿಕ್ಷಕ, ಉಪನ್ಯಾಸಕರಿಗೆ ಭರ್ಜರಿ ಸಿಹಿಸುದ್ದಿ: ಗೌರವಧನ ಹೆಚ್ಚಳ

By kannadanewsnow0915/05/2025 3:59 PM KARNATAKA 2 Mins Read

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲೆಯ ಅತಿಥಿ ಶಿಕ್ಷಕರಿಗೆ ಹಾಗೂ ಪದವಿ ಪೂರ್ವ ಕಾಲೇಜಿನ ಅತಿಥಿ ಉಪನ್ಯಾಸಕರಿಗೆ ಗೌರವ…

BREAKING : ಸೋಫಿಯಾ ಬಗ್ಗೆ ಅವಹೇಳನಕಾರಿ ಹೇಳಿಕೆ : ವಿಜಯ್ ಶಾ ವಿರುದ್ಧ ಬೆಳಗಾವಿಯಲ್ಲೂ ‘FIR’ ದಾಖಲು

15/05/2025 3:42 PM

ಕನ್ನಡಿಗರ ಬಗ್ಗೆ ಅವಹೇಳನಕಾರಿ ಹೇಳಿಕೆ ಕೇಸ್ : ಸೋನು ನಿಗಮ್ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಆದೇಶ

15/05/2025 3:32 PM

ಸಾಗರದ ಅತವಾಡಿಯಲ್ಲಿ ಮುಸ್ಲೀಂ ಕುಟುಂಬದ ಮೇಲಿನ ಮಾರಣಾಂತಿಕ ಹಲ್ಲೆಗೆ ಕಲಸೆ ಚಂದ್ರಪ್ಪ ಖಂಡನೆ, ಕ್ರಮಕ್ಕೆ ಒತ್ತಾಯ

15/05/2025 3:30 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.