ಚಿಕ್ಕಮಗಳೂರು : ಸ್ಕೂಟಿ ಹಾಗೂ ಬೋಲೇರೋ ವಾಹನದ ಮಧ್ಯ ಭೀಕರವಾಗಿ ರಸ್ತೆ ಅಪಘಾತ ಸಂಭವಿಸಿ ದಂಪತಿಗಳು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನ ಹಿರೇಕಾನವಂಗಲ ಗ್ರಾಮದಲ್ಲಿ ನಡೆದಿದೆ.

BIG NEWS : ಏ.4ರಂದು ಮಂಡ್ಯ ಜೆಡಿಎಸ್ ಅಭ್ಯರ್ಥಿ HD ಕುಮಾರಸ್ವಾಮಿ ‘ನಾಮಪತ್ರ’ ಸಲ್ಲಿಕೆ

ಮೃತ ದಂಪತಿಗಳನ್ನು ಅರ್ಜುನ್ ಹಾಗೂ ಶ್ವೇತಾ ಎಂದು ಹೇಳಲಾಗುತ್ತಿದ್ದು, ಮೃತರು ಸಿದ್ಧಾಪುರ ಗ್ರಾಮದವರು ಎಂದು ತಿಳಿದು ಬಂದಿದೆ.ಸ್ಕೂಟಿಯಲ್ಲಿ ಊರಿನಿಂದ ಅಜ್ಜಂಪುರದ ಸಂಬಂಧಿಕರ ಮನೆಗೆ ತೆರಳುತ್ತಿದ್ದರು. ಈ ವೇಳೆ, ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದಿದ್ದಾರೆ. ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಡಿಕ್ಕಿ ರಭಸಕ್ಕೆ ಸ್ಕೂಟಿ ಸಂಪೂರ್ಣವಾಗಿ ಜಖಂ ಆಗಿದೆ. ಸ್ಥಳಕ್ಕೆ ಅಜ್ಜಂಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕರ್ನಾಟಕವು ಅತ್ಯಂತ ದುರ್ದೈವದ ಪರಿಸ್ಥಿತಿಯಲ್ಲಿದೆ- ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಮಾಳವಿಕ ಅವಿನಾಶ್

ಬೊಲೆರೋ ಚಾಲಕನ ಅತಿಯಾದ ವೇಗ ಹಾಗೂ ಅಜಾಗರೂಕತೆಯೇ ಈ ಅಪಘಾತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. ಸ್ಕೂಟಿ ಸವಾರ ಅರ್ಜುನ್ ಹೆಲ್ಮೆಟ್ ಧರಿಸದಿರುವುದು ಕೂಡ ಪ್ರತ್ಯಕ್ಷದರ್ಶಿಗಳು ಗಮನಿಸಿದ್ದಾರೆ. ಬೊಲೆರೋ ಚಾಲಕ ದಾವಣಗೆರೆ ಮೂಲದವರು ಎನ್ನಲಾಗುತ್ತಿದ್ದು, ಅವರನ್ನು ಬಂಧಿಸಿರುವ ಅಜ್ಜಂಪುರ ಪೊಲೀಸರು, ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.ಸದ್ಯ ಅಜ್ಜಂಪುರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಎಫ್ಐಆರ್ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

ಕೋಲಾರ ಕಾಂಗ್ರೆಸ್​ ಶಾಸಕರ ಸಂಧಾನ ಸಭೆ ಯಶಸ್ವಿ:ಅಭ್ಯರ್ಥಿ ಯಾರೆಂದು ಕುತೂಹಲ ಮೂಡಿಸಿದ ಸಿಎಂ ನಡೆ

Share.
Exit mobile version