ಬೆಂಗಳೂರು : ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದಲ್ಲಿ 11 ಜನರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಇಂದು ಹೈಕೋರ್ಟ್ ನಲ್ಲಿ ಪಿಐಎಲ್ ವಿಚಾರಣೆ ನಡೆಯಿತು. ಇದೆ ವೇಳೆ ರಾಜ್ಯ ಸರ್ಕಾರ ಮುಚ್ಚಿದ ಲಕೋಟೆಯಲ್ಲಿ ಹೈಕೋರ್ಟಕ್ಕೆ ವರದಿಯನ್ನು ಸಲ್ಲಿಸಿತು. ವಿಚಾರಣೆಯ ಬಳಿಕ ಆರ್ಸಿಬಿ ಕೆ ಎಸ್ ಸಿ ಎ ಹಾಗೂ ಡಿಎನ್ಎ ಸಂಸ್ಥೆಗಳಿಗೆ ಹೈ ಕೋರ್ಟ್ ನೋಟಿಸ್ ನೀಡಿ ವಿಚಾರಣೆಯನ್ನು ಜೂನ್ 23ಕ್ಕೆ ನಿಗದಿಪಡಿಸಿತು
ವಿಚಾರಣೆಯ ಆರಂಭದ ವೇಳೆ ಮುಚ್ಚಿದ ಲಕೋಟೆಯಲ್ಲಿ ವರದಿ ಸಲ್ಲಿಕೆ ಏಕೆ ಎಂದು ಹೈಕೋರ್ಟ್ ಪ್ರಶ್ನಿಸಿತು. ಮೂರನೇ ವ್ಯಕ್ತಿಗಳ ವಿರುದ್ಧ ಅಭಿಪ್ರಾಯವೆಂದು ಭಾವಿಸಬಾರದು ಹಾಗಾಗಿ ಮುಚ್ಚಿದ ಲಕೋಟೆಯಲ್ಲಿ ವರದಿ ಸಲ್ಲಿಸಲಾಗಿದೆ ಎಂದು ಹೈಕೋರ್ಟಿಗೆ ಸರ್ಕಾರದ ಪರವಾಗಿ ಎಜಿ ಶಶಿಕಿರಣಶೆಟ್ಟಿ ಉತ್ತರಿಸಿದರು.
ದಾಖಲೆಗಳನ್ನು ಹಂಚಿಕೊಳ್ಳುವುದಕ್ಕೆ ಸರ್ಕಾರದ ಆಕ್ಷೇಪವಿಲ್ಲ. ಆದರೆ ನ್ಯಾಯಾಂಗ ತನಿಖೆ ಬಾಕಿ ಇರುವುದರಿಂದ ವರದಿ ಬಹಿರಂಗ ಅಗಿದು ಬೇಡ ಎಂದು ಎಜಿ ಶಶಿಕಿರಣ್ ಶೆಟ್ಟಿ ತಿಳಿಸಿದರು. ಈ ಪ್ರಕರಣದಲ್ಲಿ ಅಮೈಕಸ್ ಕ್ಯೂರಿ ಅಗತ್ಯವಿದೆ ಎಂದು ಇದೇ ವೇಳೆ ಹೈಕೋರ್ಟ್ ತಿಳಿಸಿತು.
ಸರ್ಕಾರದ ವರದಿ ಬಹಿರಂಗಗೊಳಿಸಲು ಕೆಲ ಅರ್ಜಿದಾರರಿಂದ ಮನವಿ ಸಲ್ಲಿಸಲಾಗಿದೆ. ಸರ್ಕಾರ ಪಾರದರ್ಶಕ ಮತ್ತು ಪ್ರಜಾಪ್ರತಾತ್ಮಕ ಪ್ರಕ್ರಿಯೆ ಅನುಸರಿಸಬೇಕು. ಮಾಹಿತಿ ಹಕ್ಕನ್ನು ಸರ್ಕಾರ ಗೌರವಿಸಬೇಕು ಸರ್ಕಾರ ಯಾವುದೇ ಮಾಹಿತಿಯನ್ನು ಮುಚ್ಚಿಡಬಾರದು. ಸರ್ಕಾರ ಸಂಪೂರ್ಣ ತಪ್ಪು ವರದಿ ನೀಡಿದರು ತಿಳಿಯುವುದಿಲ್ಲ ಎಂದು ವಾದಿಸಲಾಯಿತು.
ಘಟನೆ ಕುರಿತಂತೆ ಹೈಕೋರ್ಟ್ ನಲ್ಲಿ ಅನೇಕ ಅರ್ಜಿಗಳು ಸಲ್ಲಿಕೆಯಾಗಿದ್ದು, ಸರಿಯಾದ ತನಿಖೆ, ನಡೆಸಬೇಕು ಅಲ್ಲದೇ ಸರಿಯಾದ ಪರಿಹಾರ ಕೊಡಬೇಕೆಂದು ಹೊಸ ಹೊಸ ಅರ್ಜಿಗಳು ಸಲ್ಲಿಕೆಯಾಗಿವೆ. ಹಾಗಾಗಿ ಸಮಗ್ರವಾದ ವಿಚಾರಣೆ ನಡೆಸುವ ಸಲುವಾಗಿ ಪ್ರತಿವಾದಿಗಳನ್ನಾಗಿ ಆರ್ಸಿಬಿ ಕೆ ಎಸ್ ಸಿ ಎ ಹಾಗೂ ಡಿಎನ್ಎ ಮೂರು ಸಂಸ್ಥೆಗಳಿಗೆ ಹೈಕೋರ್ಟ್ ಸೂಚನೆ ನೀಡಿದೆ. ಈ ಪ್ರಕರಣದಲ್ಲಿ ಅವರ ವಾದವನ್ನು ಕೇಳಬೇಕಾಗಿರುವುದರಿಂದ ನೋಟಿಸ್ ನೀಡಬೇಕೆಂದು ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ.