ಬೆಂಗಳೂರು : ಚನ್ನಪಟ್ಟಣದ ಉಪಚುನಾವಣೆಗೆ ಎನ್.ಡಿ.ಎ ದಿಂದ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಸಿಪಿ ಯೋಗೇಶ್ವರ್ ಅವರು ಎಂಎಲ್ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದೀಗ ಸಿಪಿ ಯೋಗೆಶ್ವರ್ ಅವರು ಬಿಜೆಪಿಗೆ ಗುಡ್ ಬೈ ಹೇಳಿ ಪ್ರಾಥಮಿಕ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಹೌದು ಬಿಜೆಪಿ ನಾಯಕರ ನಡೆಗೆ ಸಹಜವಾಗಿ ಸಮಾಧಾನಗೊಂಡಿದ್ದ ಸಿಪಿ ಯೋಗೇಶ್ವರ್ ಅವರು ಇತ್ತೀಚಿಗೆ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಇದೀಗ ಬಿಜೆಪಿಯ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರಿಗೆ ವಾಟ್ಸಪ್ ಮುಖಾಂತರ ಬಿಜೆಪಿ ಪ್ರಾಥಮಿಕ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಕೆಲವೇ ಕ್ಷಣಗಳಲ್ಲಿ ಅವರು ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ಹೇಳಲಾಗುತ್ತಿದೆ.








