ಮೈಸೂರು : ಪಾಕಿಸ್ತಾನದ ವಿರುದ್ಧದ ಯುದ್ಧದ ಕ್ರೆಡಿಟ್ ಭಾರತೀಯ ಸೇನೆಗೆ ಮಾತ್ರ ಸಲ್ಲಬೇಕು, ಯಾವ ಪಕ್ಷವೂ ಕ್ಲೈಂ ಮಾಡಬಾರದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಯುದ್ಧದ ಕ್ರೆಡಿಟ್ ಭಾರತೀಯ ಸೇನೆಗೆ ಮಾತ್ರ ಸಲ್ಲಬೇಕು, ಈ ಬಗ್ಗೆ ಯಾವ ಪಕ್ಷವೂ ಕ್ಲೈಂ ಮಾಡಬಾರದು ಎಂದು ಹೇಳಿದ್ದಾರೆ.
1971 ರ ಯುದ್ದಕ್ಕೂ ಇಂದಿನ ಯುದ್ದಕ್ಕೂ ಹೋಲಿಸಿ ಮಾತನಾಡಬಾರದು. ಅವತ್ತಿನ ಯುದ್ಧದ ಪರಿಸ್ಥಿತಿಯೇ ಬೇರೆ, ಇಂದಿನ ಪರಿಸ್ಥಿತಿಯೇ ಬೇರೆ. ಭಾರತ-ಪಾಕ್ ಕದನ ವಿರಾಮ ಉಲ್ಲಂಘನೆ ಬಗ್ಗೆ ಯಾರೂ ಮಾತನಾಡಬಾರದು ಎಂದು ತಿಳಿಸಿದ್ದಾರೆ.