Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIGG NEWS: ಎಲ್ಲಾ ಸರ್ಕಾರಿ ಶಾಲೆ ಶಿಕ್ಷಕರು, ಕಾಲೇಜು ಉಪನ್ಯಾಸಕರಿಗೆ ‘KAAMS ಮೊಬೈಲ್ ಹಾಜರಾತಿ’ ಕಡ್ಡಾಯ: ರಾಜ್ಯ ಸರ್ಕಾರ ಆದೇಶ

17/02/2026 5:41 AM

GOOD NEWS: ರಾಜ್ಯದ 108 ಆಂಬುಲೆನ್ಸ್ ಸಿಬ್ಬಂದಿಗಳಿಗೆ ಭರ್ಜರಿ ಸಿಹಿಸುದ್ದಿ: ಬೋನಸ್, ಪ್ರೋತ್ಸಾಹಧನಕ್ಕೆ ಸರ್ಕಾರ ಗ್ರೀನ್ ಸಿಗ್ನಲ್

17/02/2026 5:27 AM

ALERT : ನೀವು ಖರೀದಿಸುವ `ಚಿನ್ನ’ ಅಸಲಿಯೋ? ನಕಲಿಯೋ? ಮೊಬೈಲ್ ನಲ್ಲೇ ಜಸ್ಟ್ ಹೀಗೆ ಪರಿಶೀಲಿಸಿ !

17/02/2026 5:25 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ‘ಕೋವಿಡ್’ ವೇಳೆ ಕೋಟ್ಯಾಂತರ ರೂ. ಅವ್ಯವಹಾರ ಆರೋಪ : ಪ್ರಕರಣದ ಮೊದಲ ‘FIR’ ದಾಖಲು!
KARNATAKA

BREAKING : ‘ಕೋವಿಡ್’ ವೇಳೆ ಕೋಟ್ಯಾಂತರ ರೂ. ಅವ್ಯವಹಾರ ಆರೋಪ : ಪ್ರಕರಣದ ಮೊದಲ ‘FIR’ ದಾಖಲು!

By kannadanewsnow0514/12/2024 10:34 AM

ಬೆಂಗಳೂರು : ಕೋವಿಡ್-19 ಸಂದರ್ಭದಲ್ಲಿ ಮಾಸ್ಕ್, ಪಿಪಿಇ ಕಿಟ್ ಹಾಗೂ ಇತರೆ ಸಲಕರಣೆಗಳ ಖರೀದಿಯಲ್ಲಿ ಸುಮಾರು 167 ಕೋಟಿ ರು. ಅವ್ಯವಹಾರ ನಡೆದಿರುವ ಆರೋಪ ಸಂಬಂಧ ವಿಧಾನಸೌಧ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಇದು ಈ ಅಕ್ರಮ ಸಂಬಂಧ ದಾಖಲಾದ ಮೊದಲ ಎಫ್‌ಐಆರ್ ಆಗಿದೆ ಎನ್ನಲಾಗಿದೆ.

ಹೌದು ಸದ್ಯ ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನ ಮಂಡಲದ ಅಧಿವೇಶನದಲ್ಲಿ ವಕ್ಫ್‌, ಪಂಚಮಸಾಲಿ ಮೀಸಲಾತಿ ವಿಚಾರಗಳು ಆಡಳಿತ-ವಿರೋಧ ಪಕ್ಷಗಳ ನಡುವೆ ಗದ್ದಲ ಗಲಾಟೆ ಕೋಲಾಹಲದ ನಡುವೆ ಕೋವಿಡ್ ಸಂದರ್ಭದಲ್ಲಿ ನಡೆದಂತಹ ಕೋಟ್ಯಾಂತರ ರೂಪಾಯಿ ಅವ್ಯವಹಾರ ಇದೀಗ ಮುನ್ನೆಲೆಗೆ ಬಂದಿದೆ. ಈ ನೆಲೆಯಲ್ಲಿ ಬೆಂಗಳೂರಿನ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣದ ಮೊದಲ fir ದಾಖಲಾಗಿದೆ.

ಕೋವಿಡ್-19 ಸಂದರ್ಭದಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆ ಮುಖಾಂತರ ಕೋವಿಡ್ ನಿವಾರಣೆಗಾಗಿ ಅತ್ಯವಶ್ಯವಿದ್ದ ಎನ್ 95 ಮಾಸ್ಕ್, ಪಿಪಿಇ ಕಿಟ್ ಹಾಗೂ ಇತರೆ ಸಾಮಗ್ರಿಗಳ ಖರೀದಿ ವೇಳೆ ಸರ್ಕಾರ ನೇಮಿಸಿದ್ದ ಅಧಿಕಾರಿಗಳು, ಖಾಸಗಿ ವ್ಯಕ್ತಿಗಳು ಹಾಗೂ ಇತರರು ಸೇರಿ ಕೊಂಡು ಕೆಟಿಟಿಪಿ ಕಾನೂನು ಮತ್ತು ಇತರೆ ಕಾನೂನುಗಳನ್ನು ಉಲ್ಲಂಘಿಸಿ ನೂರಾರು ಕೋಟಿ ರು. ಹಣ ದುರ್ಬಳಕೆ ಮಾಡಿದ್ದಾರೆ.

ರಾಜ್ಯದ 17 ಸರ್ಕಾರಿ ವೈದ್ಯಕೀಯ ಕಾಲೇಜುಗಳು ಮತ್ತು ಒಂದು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿ ಬಳಸಲು ರಾಜ್ಯ ಸರ್ಕಾರ 2020ರ ಆಗಸ್ 18ರಂದು 2.59 ಲಕ್ಷಎನ್ 95 ಮಾಸ್ಕ್‌ ಮತ್ತು 2.59 ಲಕ್ಷಪಿಪಿಇ ಕಿಟ್‌ಗಳನ್ನು ಒಟ್ಟು 41.35 ಕೋಟಿ ರು. ಮೌಲ್ಯದಲ್ಲಿ ಖರೀದಿಸಲು ಆಡಳಿತಾತ್ಮಕ ಅನುಮೋದನೆ ನೀಡಿತ್ತು. ಇವುಗಳ ಖರೀದಿ ವೇಳೆ ಕೆಟಿಟಿಪಿ ಕಾಯ್ದೆ ಪಾಲಿಸುವಂತೆ ಷರತ್ತು ವಿಧಿಸಿತ್ತು.

ನಂತರ ವೈದ್ಯಕೀಯ ಶಿಕ್ಷಣ ಇಲಾಖೆಯು ಟೆಂಡ‌ರ್ ಕರೆದಿದ್ದು, ಲಾಜ್ ಕೋರ್ಟ್ಸ್ ಸಂಸ್ಥೆಯು ಒಂದು ಪಿಪಿಇ ಕಿಟ್ ಸರಬರಾಜು ಮಾಡುವುದಾಗಿ ಬಿಡ್ ಪಡೆದುಕೊಂಡಿತ್ತು‌. ನಿಗದಿತ ಸಂಖ್ಯೆಯ ಪಿಪಿಇ ಕಿಟ್​​​ಗಳನ್ನು 15 ದಿನಗಳೊಳಗೆ ಸರಬರಾಜು ಮಾಡಲು ಆದೇಶಿಸಿದ್ದರೂ ಪಿಇಇ ಕಿಟ್‌ ಗಳನ್ನು 17 ಸರ್ಕಾರಿ ವೈದ್ಯಕೀಯ ಕಾಲೇಜುಗಳಿಗೆ ಒಂದು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ನೀಡಿರುವ ಬಗ್ಗೆ ಯಾವುದೇ ದಾಖಲೆಗಳಲ್ಲಿ ನಮೂದಿಸಿಲ್ಲ ಎಂದು ಎಫ್ಐಆರ್​​ನಲ್ಲಿ ಉಲ್ಲೇಖಿಸಲಾಗಿದೆ.

ಮುಂಬೈ ಮೂಲದ ಪೂಡೆಂಟ್ ಮ್ಯಾನೇಜೆಂಟ್ ಸಲೂಷನ್ಸ್ ಟೆಂಡರ್​​ನಲ್ಲಿ ಭಾಗವಹಿಸದೇ ಕಾನೂನುಬಾಹಿರವಾಗಿ ಬಿಡ್ ಪಡೆದು ಕೋಟ್ಯಂತರ ರೂ. ಅಕ್ರಮದಲ್ಲಿ ಭಾಗಿಯಾಗಿದೆ. ಮೇಲಿನ ಡಿಎಂಇ ಅಂದಿನ ನಿರ್ದೇಶಕರ ಡಾ.ಪಿ.ಜಿ.ಗಿರೀಶ್, ಜಂಟಿ ನಿಯಂತ್ರಕರು ರಾಜ್ಯ ಲೆಕ್ಕಪತ್ರ ಇಲಾಖೆಯ ರಘು ಜಿ.ಪಿ. ಮತ್ತು ಆರೋಗ್ಯ ಸಲಕರಣಾಧಿಕಾರಿ ಮುನಿರಾಜು ಮತ್ತು ದೊಡ್ಡ ಮಟ್ಟದಲ್ಲಿ ಹಿಂದಿನ ಸರ್ಕಾರ ರಾಜಕೀಯ ಪ್ರತಿನಿಧಿಗಳು ಅಧಿಕಾರಿಗಳು ಅವ್ಯವಹಾರದಲ್ಲಿ ಶಾಮೀಲಾಗಿದ್ದಾರೆ ಎಂದು ಆರೋಪಿಸಲಾಗಿದೆ.

ಭಾರೀ ಪ್ರಮಾಣದ ಕೋವಿಡ್ ಹಗ ರಣದ ತನಿಖೆಗೆ ರಾಜ್ಯ ಸರ್ಕಾರ ಎಸ್ ಐಟಿ ರಚಿಸುವ ಸಾಧ್ಯತೆಯಿದೆ. ಎಫ್ ಐಆರ್ ದಾಖಲಾದ ಬೆನ್ನಲ್ಲೇ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಇಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ಈ ಪ್ರಕರಣವನ್ನು ಎಸ್‌ಐಟಿಗೆ ವಹಿಸುವ ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳಿಗೆ ನೋಟಿಸ್ ನೀಡಿ ವಿಚಾರಣೆ ನಡೆಸಲಿದ್ದಾರೆ. ಮುಂದಿನ ದಿನಗಳಲ್ಲಿ ಸಂಬಂಧಪಟ್ಟ ರಾಜಕೀಯ ಪ್ರತಿನಿಧಿಗಳಿಗೂ ವಿಚಾರಣೆ ನಡೆಯುವುದು ನಿಶ್ವಿತವಾಗಿದ್ದು, ಸಮಗ್ರ ವಿಚಾರಣೆಗೆ ಸಿಐಡಿ ಅಥವಾ ಪ್ರತ್ಯೇಕ ಎಸ್ಐಟಿ ರಚಿಸುವ ಸಾಧ್ಯತೆಯಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

Share. Facebook Twitter LinkedIn WhatsApp Email

Related Posts

BIGG NEWS: ಎಲ್ಲಾ ಸರ್ಕಾರಿ ಶಾಲೆ ಶಿಕ್ಷಕರು, ಕಾಲೇಜು ಉಪನ್ಯಾಸಕರಿಗೆ ‘KAAMS ಮೊಬೈಲ್ ಹಾಜರಾತಿ’ ಕಡ್ಡಾಯ: ರಾಜ್ಯ ಸರ್ಕಾರ ಆದೇಶ

17/02/2026 5:41 AM6 Mins Read

GOOD NEWS: ರಾಜ್ಯದ 108 ಆಂಬುಲೆನ್ಸ್ ಸಿಬ್ಬಂದಿಗಳಿಗೆ ಭರ್ಜರಿ ಸಿಹಿಸುದ್ದಿ: ಬೋನಸ್, ಪ್ರೋತ್ಸಾಹಧನಕ್ಕೆ ಸರ್ಕಾರ ಗ್ರೀನ್ ಸಿಗ್ನಲ್

17/02/2026 5:27 AM4 Mins Read

ALERT : ನೀವು ಖರೀದಿಸುವ `ಚಿನ್ನ’ ಅಸಲಿಯೋ? ನಕಲಿಯೋ? ಮೊಬೈಲ್ ನಲ್ಲೇ ಜಸ್ಟ್ ಹೀಗೆ ಪರಿಶೀಲಿಸಿ !

17/02/2026 5:25 AM2 Mins Read
Recent News

BIGG NEWS: ಎಲ್ಲಾ ಸರ್ಕಾರಿ ಶಾಲೆ ಶಿಕ್ಷಕರು, ಕಾಲೇಜು ಉಪನ್ಯಾಸಕರಿಗೆ ‘KAAMS ಮೊಬೈಲ್ ಹಾಜರಾತಿ’ ಕಡ್ಡಾಯ: ರಾಜ್ಯ ಸರ್ಕಾರ ಆದೇಶ

17/02/2026 5:41 AM

GOOD NEWS: ರಾಜ್ಯದ 108 ಆಂಬುಲೆನ್ಸ್ ಸಿಬ್ಬಂದಿಗಳಿಗೆ ಭರ್ಜರಿ ಸಿಹಿಸುದ್ದಿ: ಬೋನಸ್, ಪ್ರೋತ್ಸಾಹಧನಕ್ಕೆ ಸರ್ಕಾರ ಗ್ರೀನ್ ಸಿಗ್ನಲ್

17/02/2026 5:27 AM

ALERT : ನೀವು ಖರೀದಿಸುವ `ಚಿನ್ನ’ ಅಸಲಿಯೋ? ನಕಲಿಯೋ? ಮೊಬೈಲ್ ನಲ್ಲೇ ಜಸ್ಟ್ ಹೀಗೆ ಪರಿಶೀಲಿಸಿ !

17/02/2026 5:25 AM

ರಾಜ್ಯ ಸರ್ಕಾರದಿಂದ ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ : `ಮೊಬೈಲ್ ಕ್ಯಾಂಟಿನ್’ ತೆರೆಯಲು 3 ಲಕ್ಷ ರೂ. ಸಹಾಯಧನಕ್ಕೆ ಅರ್ಜಿ ಆಹ್ವಾನ

17/02/2026 5:25 AM
State News
KARNATAKA

BIGG NEWS: ಎಲ್ಲಾ ಸರ್ಕಾರಿ ಶಾಲೆ ಶಿಕ್ಷಕರು, ಕಾಲೇಜು ಉಪನ್ಯಾಸಕರಿಗೆ ‘KAAMS ಮೊಬೈಲ್ ಹಾಜರಾತಿ’ ಕಡ್ಡಾಯ: ರಾಜ್ಯ ಸರ್ಕಾರ ಆದೇಶ

By kannadanewsnow0917/02/2026 5:41 AM KARNATAKA 6 Mins Read

ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಶಾಲಾ ಶಿಕ್ಷಕರು, ಮುಖ್ಯ ಶಿಕ್ಷಕರು, ಉಪನ್ಯಾಸಕರು, ಪ್ರಾಂಶುಪಾಲರು, ಅಧಿಕಾರಿಗಳು ಬೋಧಕೇತರ ಸಿಬ್ಬಂದಿ, ಅಧಿಕಾರಿಗಳು ಕೆಎಎಎಂಎಸ್…

GOOD NEWS: ರಾಜ್ಯದ 108 ಆಂಬುಲೆನ್ಸ್ ಸಿಬ್ಬಂದಿಗಳಿಗೆ ಭರ್ಜರಿ ಸಿಹಿಸುದ್ದಿ: ಬೋನಸ್, ಪ್ರೋತ್ಸಾಹಧನಕ್ಕೆ ಸರ್ಕಾರ ಗ್ರೀನ್ ಸಿಗ್ನಲ್

17/02/2026 5:27 AM

ALERT : ನೀವು ಖರೀದಿಸುವ `ಚಿನ್ನ’ ಅಸಲಿಯೋ? ನಕಲಿಯೋ? ಮೊಬೈಲ್ ನಲ್ಲೇ ಜಸ್ಟ್ ಹೀಗೆ ಪರಿಶೀಲಿಸಿ !

17/02/2026 5:25 AM

ರಾಜ್ಯ ಸರ್ಕಾರದಿಂದ ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ : `ಮೊಬೈಲ್ ಕ್ಯಾಂಟಿನ್’ ತೆರೆಯಲು 3 ಲಕ್ಷ ರೂ. ಸಹಾಯಧನಕ್ಕೆ ಅರ್ಜಿ ಆಹ್ವಾನ

17/02/2026 5:25 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.