ದಾವಣಗೆರೆ : ಹಲವು ಬೆಳವಣಿಗೆ ಬಳಿಕ ಇದೀಗ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನಲ್ಲಿರುವ ಪಂಚಮಸಾಲಿ ಗುರುಪೀಠದಿಂದ ವಚನಾನಂದ ಸ್ವಾಮೀಜಿಯನ್ನು ಉಚ್ಚಾಟನೆ ಮಾಡಲಾಗಿದೆ. ಹೌದು ಪಂಚಮಸಾಲಿ ಗುರುಪೀಠದಿಂದ ವಚನಾನಂದ ಸ್ವಾಮೀಜಿಯನ್ನು ಉಚ್ಚಾಟನೆ ಮಾಡಲಾಗಿದೆ.
ಈ ಕುರಿತು ಧರ್ಮದರ್ಶಿ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಗಿದೆ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಹಣಗವಾಡಿ ಬಳಿ ಇರುವ ಪಂಚಮಸಾಲಿ ಪೀಠ ದಿಂದ ಇದೀಗ ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಾಡಿ ಧರ್ಮದರ್ಶಿ ಸಮಿತಿ ಸದಸ್ಯ ಬಸವರಾಜ ದಿಂಡೂರು ಮಾಹಿತಿ ನೀಡಿದ್ದಾರೆ. ಒಟ್ಟು 15 ಜನರ ಧರ್ಮದರ್ಶಿ ಸಮಿತಿ ಸಭೆಯಲ್ಲಿ 12 ದಿನ ನಡೆದ ಧರ್ಮದರ್ಶಿ ಸಭೆಯಲ್ಲಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಕೋಟ್ಯಾಂತರ ರೂಪಾಯಿ ಅಕ್ರಮ ನಡೆದಿದೆ ಎನ್ನುವ ಆರೋಪದ ಹಿನ್ನೆಲೆಯಲ್ಲಿ ಲೆಕ್ಕ ಕೊಡಿ ಅಭಿಯಾನ ಕಳೆದ ಅನೇಕ ತಿಂಗಳುಗಳಿಂದ ನಡೆಸಲಾಗುತ್ತಿತ್ತು. ಆದರೆ ಇದೀಗ ಈ ಒಂದು ಅಭಿಯಾನ ತೀವ್ರ ಸ್ವರೂಪ ಪಡೆದುಕೊಂಡ ಹಿನ್ನೆಲೆಯಲ್ಲಿ ಮಠದ ಆಡಳಿತ ಮಂಡಳಿ ಹಾಗೂ ಭಕ್ತಾದಿಗಳು ಕೂಡ ಇಂದು ಮಠದ ಗೇಟ್ ಬಳಿ ಮಠದಲ್ಲಿ ನುಗ್ಗುಲು ಯತ್ನಿಸಿದ್ದರು. ಇದೀಗ ಪಂಚಮಸಾಲಿ ಪೀಠದಿಂದ ವಚನಾನಂದ ಶ್ರೀಗಳನ್ನು ಉಚ್ಚಾಟನೆ ಗೊಳಿಸಲಾಗಿದೆ ಎಂದು ತಿಳಿದುಬಂದಿದೆ.








