ಬೆಂಗಳೂರು : ಬೆಂಗಳೂರಿನ ವಿಧಾನಸೌಧದಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ, ಹಲವು ಜನರಿಂದ ಕೋಟ್ಯಾಂತರ ರೂಪಾಯಿ ಹಣ ಪಡೆದು ದುಬೈಗೆ ಹಾರಿದ್ದ ಪಿಡಿಒ ಅಧಿಕಾರಿಯನ್ನು ಇಂದು ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಅರೆಸ್ಟ್ ಮಾಡಿರುವ ಘಟನೆ ವರದಿಯಾಗಿದೆ.
ಹೌದು ವಿಧಾನಸೌಧದಲ್ಲಿ ಸ್ಪೀಕರ್ ಕಚೇರಿಯಲ್ಲಿ ಕೆಲಸ ಕೊಡಿಸುವುದಾಗಿ ಪಿಡಿಒ ಅಧಿಕಾರಿ ಯೋಗೇಂದ್ರ ಹಲವರ ಬಳಿ ಹಣ ಪಡೆದುಕೊಂಡಿದ್ದ.ಮತ್ತೊಬ್ಬರಿಗೆ ಗೋಲ್ಡ್ ಬ್ಯುಸಿನೆಸ್ ಹೆಸರಲ್ಲಿ ವಂಚನೆಗೈಯ್ಯಲಾಗಿತ್ತು. ಇನ್ನೊಬ್ಬರಿಗೆ ಕ್ರಿಪ್ಟೋ ಕರೆನ್ಸಿ, ಟೆಂಬರ್ ಬ್ಯುಸಿನೆಸ್ ಹೆಸರಲ್ಲಿ ಟೋಪಿ ಹಾಕಲಾಗಿತ್ತು. ಇದೀಗ ವಂಚಕ ಪಿಡಿಓ ಯೋಗೇಂದ್ರ ಬಂಧನವಾಗಿದೆ.
ಒಬ್ಬೊಬ್ಬರಿಗೆ ಕೋಟಿಗಟ್ಟಲೇ ಟೋಪಿ ಹಾಕಿರೋ ವಂಚಕ ಯೋಗೇಂದ್ರ, ದುಬೈಗೆ ಪರಾರಿಯಾಗಿದ್ದನು. ಬೆಂಗಳೂರಿಗೆ ವಾಪಸ್ ಆದ ವೇಳೆ ಏರ್ಪೋರ್ಟ್ ನಲ್ಲಿಯೇ ಪೊಲೀಸರ ಬಲೆಗೆ ಬಿದ್ದಿದ್ದಾನೆ.ದುಬೈನಲ್ಲಿ ತಲೆಮರೆಸಿಕೊಂಡಿದ್ದ ಯೋಗೇಂದ್ರ ಬೆಂಗಳೂರಿಗೆ ವಾಪಸ್ ಆದ ತಕ್ಷಣ ಲಾಕ್ ಆಗಿದ್ದಾನೆ.
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ಪಿಡಿಓ ಯೋಗೇಂದ್ರ ವಿರುದ್ಧ ಚೆನ್ನಮ್ಮನಕೆರೆ, ಯಲಹಂಕ ನ್ಯೂಟೌನ್ ,ವಿವಿ ಪುರಂ,ಹಿರಿಯೂರು,ಚಿತ್ರದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿವೆ.ಚನ್ನಮ್ಮನಕೆರೆ ಅಚ್ಚುಕಟ್ಟು ಠಾಣೆ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸಿದ್ದಾರೆ.