Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಶಿವಮೊಗ್ಗದಲ್ಲಿ ‘KSRTC’ ಬಸ್-ಕ್ಯಾಂಟರ್ ನಡುವೆ ಭೀಕರ ಅಪಘಾತ : 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ!

24/07/2025 9:26 AM

ವಿಮಾನದಲ್ಲಿ ಹೋಗೋವಾಗ ಮೊಬೈಲ್ ‘ಫ್ಲೈಟ್ ಮೋಡ್​’ ನಲ್ಲಿ ಇರಿಸದಿದ್ದರೆ ಏನಾಗುತ್ತೆ?

24/07/2025 9:24 AM

ಇಡೀ ದೇಶದಲ್ಲೇ ಒಬಿಸಿಯಲ್ಲಿ ‘CM’ ಆಗಿರೋದು ಸಿದ್ದರಾಮಯ್ಯರೊಬ್ಬರೇ : MLC ಬಿಕೆ ಹರಿಪ್ರಸಾದ್ ಗುಣಗಾನ

24/07/2025 9:22 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಸಿ.ಟಿ.ರವಿ 7 ಬಾರಿ ಅವಾಚ್ಯ ಪದ ಬಳಸಿದ್ದು ಸರ್ಕಾರದ TV ಯಲ್ಲೇ ದಾಖಲು : ‘CID’ ಗೆ ವಿಡಿಯೋ ಲಭ್ಯ!
KARNATAKA

BREAKING : ಸಿ.ಟಿ.ರವಿ 7 ಬಾರಿ ಅವಾಚ್ಯ ಪದ ಬಳಸಿದ್ದು ಸರ್ಕಾರದ TV ಯಲ್ಲೇ ದಾಖಲು : ‘CID’ ಗೆ ವಿಡಿಯೋ ಲಭ್ಯ!

By kannadanewsnow0517/01/2025 5:47 AM

ಬೆಂಗಳೂರು : ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಬಗ್ಗೆ ಅಶ್ಲೀಲ ಪದ ಬಳಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಬಿಜೆಪಿ ಎಂಎಲ್ಸಿ ಸಿಟಿ ರವಿ ಅವರು ಅಶ್ಲೀಲ ಪದ ಬಳಸಿದ್ದ ವಿಡಿಯೋ ಒಂದು ಇದೀಗ ಸಿಐಡಿ ಅಧಿಕಾರಿಗಳಿಗೆ ಲಭ್ಯವಾಗಿದೆ. ಈ ವಿಡಿಯೋದಲ್ಲಿ ಸಿ.ಟಿ.ರವಿ ಅವರು 7 ಬಾರಿ ಹೆಬ್ಬಾಳ್ವ‌ರ್ ಅವರಿಗೆ ನಿಂದಿಸಿರುವುದು ಕೇಳಿಬರುತ್ತದೆ ಎಂದು ಸಿಐಡಿ ಮೂಲಗಳು ತಿಳಿಸಿವೆ.

ಸಿಟಿ ರವಿ ನಿಂದನೆ ಕುರಿತು ಖಾಸಗಿ ವಾಹಿನಿಗಳಲ್ಲಿ ವಿಡಿಯೋ ದಾಖಲಾಗಿದೆ ಎಂದು ಕಾಂಗ್ರೆಸ್ ನಾಯಕರು ಹೇಳಿದ್ದರು. ಆದರೆ ಅದನ್ನು ಸಾಕ್ಷ್ಯವಾಗಿ ಪರಿಗಣಿಸಲು ಸಾಧ್ಯ ವಿಲ್ಲ ಎಂದು ಸಭಾಪತಿ ಹೇಳುತ್ತಿದ್ದರು. ಆದರೆ ಸದನದಲ್ಲಿನ ಸರ್ಕಾರಿ ಟೀವಿಯಲ್ಲಿನ ವಿಡಿಯೋವೇ ಇದೀಗ ಸಿಕ್ಕಿದೆ. ಈ ವಿಡಿಯೋ ಸಿ.ಟಿ.ರವಿ ಅವರಿಗೆ ಕಂಟಕವಾಗಬಹುದಾದ ಸಾಧ್ಯತೆಯಿದೆ.

ಇದೇ ಕಾರಣಕ್ಕೆ ಅವರು ಧ್ವನಿ ಪರೀಕ್ಷೆಗೊಳ ಪಡಲು ಹಿಂದೇಟು ಹಾಕುತ್ತಿದ್ದಾರೆ ಎಂದು ಹೇಳಲಾಗಿದೆ. ಈವರೆಗೆ ತಾನು ಸಚಿವೆಯನ್ನು ಉದ್ದೇಶಿಸಿ ‘ಪ್ರಸ್ಟೇಟ್’ ಎಂದು ಹೇಳಿದ್ದೇನೆ ಯೇ ಹೊರತು ನಿಂದಿಸಿಲ್ಲ ಎಂದು ವಾದಿಸಿದ್ದ ರವಿ ಅವರು, ತಾನು ನಿಂದಿಸಿದ್ದಕ್ಕೆ ಅಸಲಿ ವಿಡಿಯೋವೇ ಇಲ್ಲ ಎಂದು ಹೇಳಿದರು. ಇನ್ನೊಂದೆಡೆ ರವಿ ಅವರು ನಿಂದಿಸಿದ ಕುರಿತು ಯಾವುದೇ ಆಡಿಯೋ-ವಿಡಿಯೋ ಇಲ್ಲವೆಂದು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಕೂಡ ತಿಳಿಸಿದ್ದರು. ಈಗ ಅಸಲಿ ವಿಡಿಯೋ ಸಿಐಡಿಗೆ ಲಭ್ಯವಾಗಿರುವುದು ಭಾರೀ ಕುತೂಹಲ ಕೆರಳಿಸಿದೆ.

ಬೆಳಗಾವಿ ಅಧಿವೇಶನದ ವೇಳೆ ಮೇಲ್ಮನೆ ಯಲ್ಲಿ ನಡೆದಿದ್ದ ಘಟನಾವಳಿಗಳ ಕುರಿತು ವಿಡಿಯೋ-ಆಡಿಯೋ ದಾಖಲೆನೀಡುವಂತೆ ರಾಜ್ಯ ಆಡಳಿತ ಮತ್ತು ಸಿಬ್ಬಂದಿ ಸುಧಾರಣೆ ಇಲಾಖೆಗೆ (DAPR) ಸಿಐಡಿ ಮನವಿ ಮಾಡಿತ್ತು.ಈ ಕೋರಿಕೆಗೆ ಸಮ್ಮತಿಸಿದ ಡಿಎಪಿಆರ್, ಸಿಐಡಿಗೆ ಸದನದಲ್ಲಿ ನಿಂದನೆ ಕೃತ್ಯ ನಡೆದ ವೇಳೆ ಚಿತ್ರೀಕರಿಸಿದ್ದ 4 ಗಂಟೆ ವಿಡಿಯೋ ಸಲ್ಲಿಸಿದೆ. ಇದನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಸಿಐಡಿ `ರವಾನಿಸಿದ್ದು, ಆ ವಿಡಿಯೋದಲ್ಲಿ ಕೇಳಿ ಬರುವ ದನಿ ರವಿ ಅವರದ್ದೇ, ಅಲ್ಲವೇ ಎಂದು ಖಚಿತಪಡಿಸಿ ಕೊಳ್ಳಲು ನಿರ್ಧರಿಸಿದೆ. ಇದಕ್ಕಾಗಿ ಸಿಐಡಿ ಅಧಿಕಾರಿಗಳು ಧ್ವನಿ ಪರೀಕ್ಷೆ ನಡೆಸಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.

7 ಬಾರಿ ನಿಂದಿಸಿದ್ದ ಸಿ.ಟಿ. ರವಿ

ಬೆಳಗಾವಿ ಅಧಿವೇಶನದ ವೇಳೆ ಡಿ.19 ರಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಯ‌ರ್ ಅವರಿಗೆ ಅಸಂಸದೀಯ ಪದ ಬಳಸಿ ರವಿ ನಿಂದಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಈ ಬಗ್ಗೆ ಹಿರೇ ಬಾಗೇವಾಡಿ ಠಾಣೆಯಲ್ಲಿ ಎಫ್‌ಐಆರ್ ಕೂಡ ದಾಖಲಾಗಿತ್ತು. ಬಳಿಕ ಪ್ರಕರಣದ ತನಿಖೆ ಕೈಗೆತ್ತಿಕೊಂಡ ಸಿಐಡಿ, ಆ ದಿನ ನಡೆ ದಿದ್ದ ಘಟನಾವಳಿ ಕುರಿತ ವಿಡಿಯೋ ನೀಡು ವಂತೆ ಡಿಎಪಿಆರ್‌ಗೆ ಪತ್ರ ಬರೆದಿತ್ತು. ಈ ಕೋರಿಕೆ ಹಿನ್ನೆಲೆಯಲ್ಲಿ ಸಿಐಡಿಗೆ ಡಿಎಪಿಆ‌ರ್ ಇಲಾಖೆ ವಿಡಿಯೋ ಸಲ್ಲಿಸಿದೆ.

Share. Facebook Twitter LinkedIn WhatsApp Email

Related Posts

BREAKING : ಶಿವಮೊಗ್ಗದಲ್ಲಿ ‘KSRTC’ ಬಸ್-ಕ್ಯಾಂಟರ್ ನಡುವೆ ಭೀಕರ ಅಪಘಾತ : 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ!

24/07/2025 9:26 AM1 Min Read

ಇಡೀ ದೇಶದಲ್ಲೇ ಒಬಿಸಿಯಲ್ಲಿ ‘CM’ ಆಗಿರೋದು ಸಿದ್ದರಾಮಯ್ಯರೊಬ್ಬರೇ : MLC ಬಿಕೆ ಹರಿಪ್ರಸಾದ್ ಗುಣಗಾನ

24/07/2025 9:22 AM1 Min Read

ಜಯ ಮೃತ್ಯುಂಜಯ ಶ್ರೀಗಳಿಗೆ ವಿಷಪ್ರಾಶನ ಆರೋಪ : ಶಾಸಕ ಬೆಲ್ಲದ್ ನನಗೆ ಕರೆ ಮಾಡಿ ಕ್ಷಮೆ ಕೇಳಿದ್ದಾರೆ : ವಿಜಯಾನಂದ ಕಾಶಪ್ಪನವರ್

24/07/2025 8:52 AM1 Min Read
Recent News

BREAKING : ಶಿವಮೊಗ್ಗದಲ್ಲಿ ‘KSRTC’ ಬಸ್-ಕ್ಯಾಂಟರ್ ನಡುವೆ ಭೀಕರ ಅಪಘಾತ : 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ!

24/07/2025 9:26 AM

ವಿಮಾನದಲ್ಲಿ ಹೋಗೋವಾಗ ಮೊಬೈಲ್ ‘ಫ್ಲೈಟ್ ಮೋಡ್​’ ನಲ್ಲಿ ಇರಿಸದಿದ್ದರೆ ಏನಾಗುತ್ತೆ?

24/07/2025 9:24 AM

ಇಡೀ ದೇಶದಲ್ಲೇ ಒಬಿಸಿಯಲ್ಲಿ ‘CM’ ಆಗಿರೋದು ಸಿದ್ದರಾಮಯ್ಯರೊಬ್ಬರೇ : MLC ಬಿಕೆ ಹರಿಪ್ರಸಾದ್ ಗುಣಗಾನ

24/07/2025 9:22 AM

ದತ್ತು ತಾಯಿಯನ್ನು ಕೊಂದ ವ್ಯಕ್ತಿಗೆ ಮರಣದಂಡನೆ ವಿಧಿಸಿದ ಹೈಕೋರ್ಟ್ !

24/07/2025 9:09 AM
State News
KARNATAKA

BREAKING : ಶಿವಮೊಗ್ಗದಲ್ಲಿ ‘KSRTC’ ಬಸ್-ಕ್ಯಾಂಟರ್ ನಡುವೆ ಭೀಕರ ಅಪಘಾತ : 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ!

By kannadanewsnow0524/07/2025 9:26 AM KARNATAKA 1 Min Read

ಶಿವಮೊಗ್ಗ : ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ ಭೀಕರವಾದ ಅಪಘಾತ ಸಂಭವಿಸಿದ್ದು, ಕೆಎಸ್ಆರ್ಟಿಸಿ ಬಸ್ ಕ್ಯಾಂಟರ್ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ…

ಇಡೀ ದೇಶದಲ್ಲೇ ಒಬಿಸಿಯಲ್ಲಿ ‘CM’ ಆಗಿರೋದು ಸಿದ್ದರಾಮಯ್ಯರೊಬ್ಬರೇ : MLC ಬಿಕೆ ಹರಿಪ್ರಸಾದ್ ಗುಣಗಾನ

24/07/2025 9:22 AM

ಜಯ ಮೃತ್ಯುಂಜಯ ಶ್ರೀಗಳಿಗೆ ವಿಷಪ್ರಾಶನ ಆರೋಪ : ಶಾಸಕ ಬೆಲ್ಲದ್ ನನಗೆ ಕರೆ ಮಾಡಿ ಕ್ಷಮೆ ಕೇಳಿದ್ದಾರೆ : ವಿಜಯಾನಂದ ಕಾಶಪ್ಪನವರ್

24/07/2025 8:52 AM

ಇಂದು ಭೀಮನ ಅಮಾವಾಸ್ಯೆ : ಮಹಿಳೆಯರೇ ಯಾಕೆ ಆಚರಣೆ ಮಾಡುತ್ತಾರೆ? ಏನಿದರ ಮಹತ್ವ? ಇಲ್ಲಿದೆ ಮಾಹಿತಿ

24/07/2025 8:46 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.