ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ಫಂಗಲ್ ಚಂಡಮಾರುತ ಅಪ್ಪಳಿಸಿದ್ದು, ಇದರ ಪರಿಣಾಮವಾಗಿ ಬೆಂಗಳೂರಿನ ಹಲವಡೆ ರಾತ್ರಿಯಿಂದಲೇ ತುಂತುರು ಮಳೆ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ಬಿಬಿಎಂಪಿ ಅಧಿಕಾರಿಗಳು, ಸಿಬ್ಬಂದಿಗಳ ರಜೆ ರದ್ದು ಮಾಡಲಾಗಿದೆ.
ಹೌದು ಬೆಂಗಳೂರಿನ ಹಲವಡೆ ರಾತ್ರಿಯಿಂದ ತುಂತುರು ಮಳೆಯಾತ್ತಿದೆ. ಕೊರೆಯುವ ಚಳಿ ಜೊತೆಗೆ ತುಂತುರು ಮಳೆಗೆ ಬೆಂಗಳೂರಿನ ಜನರು ಹೈರಾಣಾಗಿದ್ದಾರೆ. ಇಂದು ಬೆಂಗಳೂರಿನ ಹಲವಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಭಾನುವಾರವಾದ್ರೂ ಬಿಬಿಎಂಪಿ ಅಧಿಕಾರಿಗಳು, ಸಿಬ್ಬಂದಿ ರಜೆ ರದ್ದು ಮಾಡಲಾಗಿದೆ.
ಇಂದು ಭಾನುವಾರವಾದರೂ ಬಿಬಿಎಂಪಿ ಅಧಿಕಾರಿಗಳಿಗೆ ರಜೆ ಇರುವುದಿಲ್ಲ. ಹವಾಮಾನ ಇಲಾಖೆಯಿಂದ ಮಳೆಯಾಗುವ ಮುನ್ಸೂಚನೆ ಹಿನ್ನೆಲೆಯಲ್ಲಿ ಬಿಬಿಎಂಪಿ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಭಾನುವಾರದ ರಜೆ ರದ್ದು ಮಾಡಲಾಗಿದ್ದು, ಎಂದಿನಂತೆ ಕಾರ್ಯನಿರ್ವಹಿಸಲು ಬಿಬಿಎಂಪಿ ಕಮಿಷನರ್ ಸೂಚನೆ ನೀಡಿದ್ದಾರೆ.
ಫೆಂಗಲ್ ಚಂಡಮಾರುತದ ಪರಿಣಾಮ ತಮಿಳುನಾಡು, ಪುದುಚೇರಿಯಲ್ಲಿ ಭಾರಿ ಮಳೆ ಆಗುತ್ತಿದ್ದು, ಇದೀಗ ಕರ್ನಾಟಕದ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರ್ನಾಲ್ಕು ದಿನ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಇಂದಿನಿಂದ ರಾಜ್ಯದಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆ ಇದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಮೈಸೂರು, ಮಂಡ್ಯ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ನೀಡಲಾಗಿದೆ. ಡಿಸೆಂಬರ್ 3ರಂದು ರಾಮನಗರ, ಮಂಡ್ಯ, ಚಾಮರಾಜನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ್ದು, ಕೊಡಗು, ಮೈಸೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.