ಧಾರವಾಡ : ಧಾರವಾಡದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು ಸಿಲಿಂಡರ್ ಸ್ಫೋಟಗೊಂಡು ಆರು ಜನರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ನಗರದ ಕೋಳಿಕೆರೆ ಬಡಾವಣೆಯಲ್ಲಿ ಈ ಒಂದು ಬೆಂಕಿ ಅವಘಡ ಸಂಭವಿಸಿದೆ.
ಇಸ್ಮಾಯಿಲ್ ಎಂಬುವವರ ಮನೆಯಲ್ಲಿ ಸಿಲಿಂಡರ್ ಸ್ಫೋಟಗೊಂಡಿದೆ. ನಾಲ್ವರು ಮಕ್ಕಳು ಸೇರಿ ಆರು ಜನರಿಗೆ ಗಂಭೀರವಾದ ಗಾಯಗಳಾಗಿದ್ದು ಗಾಯಾಳುಗಳನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ನೀಡಲಾಗುತ್ತಿದೆ. ವಿದ್ಯಾಗಿರಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.







