ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಳೆದ ಶುಕ್ರವಾರದಂದು ಹೈಕೋರ್ಟ್ ಕೊಲೆ ಆರೋಪಿಗಳಾದಂತಹ ನಟ ದರ್ಶನ್ ಪವಿತ್ರ ಗೌಡ ಸೇರಿದಂತೆ ಉಳಿದ ಎಲ್ಲಾ 7 ಆರೋಪಿಗಳಿಗೂ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿತು. ಈ ಹಿನ್ನೆಲೆಯಲ್ಲಿ ಇಂದು ಪರಪ್ಪನ ಅಗ್ರಹಾರ ಜೈಲಿನಿಂದ ಕೊಲೆ ಆರೋಪಿ A1 ಪವಿತ್ರ ಗೌಡ ರಿಲೀಸ್ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ. ಇನ್ನು ತುಮಕೂರು ಹಾಗೂ ಕಲ್ಬುರ್ಗಿ ಕೇಂದ್ರ ಕಾರಾ ಗ್ರಹಗಳಲ್ಲಿರುವ ಇತರೆ ಆರೋಪಿಗಳು ಕೂಡ ಬಿಡುಗಡೆಯಾಗುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.
ಇದರ ಬೆನ್ನಲ್ಲೆ ಬಿಜಿಎಸ್ ಆಸ್ಪತ್ರೆಯಿಂದ ಇಂದು ಮಧ್ಯಾಹ್ನದ ಬಳಿಕ ದರ್ಶನ್ ಡಿಸ್ಚಾರ್ಜ್ ಆಗುವ ಸಾಧ್ಯತೆ ಇದೆ. ಕಳೆದ ಒಂದುವರೆ ತಿಂಗಳಿನಿಂದ ನಟ ದರ್ಶನ್ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಸರ್ಜರಿ ಮಾಡಿಸಿಕೊಳ್ಳದೆ ಆಸ್ಪತ್ರೆಯಿಂದ ದರ್ಶನ್ ಡಿಸ್ಚಾರ್ಜ್ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ. ಮಧ್ಯಂತರ ಜಾಮಿನು ಪಡೆದುಕೊಂಡು ನಟ ದರ್ಶನ್ ಆಸ್ಪತ್ರೆಯಲ್ಲಿ ಟ್ರೀಟ್ಮೆಂಟ್ ಪಡೆದುಕೊಂಡಿದ್ದಾರೆ.
ಫಿಜಿಯೋಥೆರಫಿ ಮಾಡಿಸಿ ಬೇಲ್ ಸಿಗುತ್ತಿದ್ದಂತೆ ಇದೀಗ ದರ್ಶನ್ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಸಾಧ್ಯತೆ ಇದೆ.ಯಾವಾಗ ಬೇಕಾದರೂ ಸರ್ಜರಿ ಮಾಡಿಸಿಕೊಳ್ಳಬಹುದು ಎಂಬ ಅಭಿಪ್ರಾಯ ವ್ಯಕ್ತವಾದ ಹಿನ್ನೆಲೆಯಲ್ಲಿ, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಇಂದು ಮನೆಗೆ ತೆರಳುವ ಸಾಧ್ಯತೆ ಇದೆ ಎನ್ನಲಾಗಿದೆ. ವೈದ್ಯರ ಸಲಹೆ ಮೇರೆಗೆ ಮಧ್ಯಾಹ್ನದ ಬಳಿಕ ದರ್ಶನ ಡಿಸ್ಚಾರ್ಜ್ ಸಾಧ್ಯತೆ ಎನ್ನಲಾಗಿದೆ.