ಮುಂಬೈ : ಮಹಾರಾಷ್ಟ್ರದಲ್ಲಿ ಸಂಭವಿಸಿದ ವಿಮಾನ ಅಪಘಾತದಲ್ಲಿ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಮೃತಪಟ್ಟಿದ್ದು, ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಜಿತ್ ಪವಾರ್ ಜೀ ಅವರು ಜನ ನಾಯಕರಾಗಿದ್ದರು, ಬೇರು ಮಟ್ಟದ ಸಂಪರ್ಕ ಹೊಂದಿದ್ದರು. ಮಹಾರಾಷ್ಟ್ರದ ಜನರಿಗೆ ಸೇವೆ ಸಲ್ಲಿಸುವಲ್ಲಿ ಮುಂಚೂಣಿಯಲ್ಲಿದ್ದ ಕಠಿಣ ಪರಿಶ್ರಮಿ ವ್ಯಕ್ತಿತ್ವ ಎಂದು ಅವರು ವ್ಯಾಪಕವಾಗಿ ಗೌರವಿಸಲ್ಪಟ್ಟಿದ್ದರು. ಆಡಳಿತಾತ್ಮಕ ವಿಷಯಗಳ ಬಗ್ಗೆ ಅವರ ತಿಳುವಳಿಕೆ ಮತ್ತು ಬಡವರು ಮತ್ತು ದೀನದಲಿತರ ಸಬಲೀಕರಣದ ಬಗ್ಗೆ ಅವರ ಉತ್ಸಾಹ ಕೂಡ ಗಮನಾರ್ಹವಾಗಿತ್ತು. ಅವರ ಅಕಾಲಿಕ ನಿಧನವು ತುಂಬಾ ಆಘಾತಕಾರಿ ಮತ್ತು ದುಃಖಕರವಾಗಿದೆ. ಅವರ ಕುಟುಂಬ ಮತ್ತು ಅಸಂಖ್ಯಾತ ಅಭಿಮಾನಿಗಳಿಗೆ ಸಂತಾಪ ಸೂಚಿಸುತ್ತೇನೆ. ಓಂ ಶಾಂತಿ ಎಂದು ಪೋಸ್ಟ್ ಮಾಡಿದ್ದಾರೆ.
Shri Ajit Pawar Ji was a leader of the people, having a strong grassroots level connect. He was widely respected as a hardworking personality at the forefront of serving the people of Maharashtra. His understanding of administrative matters and passion for empowering the poor and… pic.twitter.com/mdgwwGzw4R
— Narendra Modi (@narendramodi) January 28, 2026
ಮಹಾರಾಷ್ಟ್ರದ ಬಾರಾಮತಿಯಲ್ಲಿ ಬುಧವಾರ ಬೆಳಿಗ್ಗೆ ವಿಮಾನ ಅಪಘಾತಕ್ಕೀಡಾಗಿದೆ.ಅಜಿತ್ ಪವಾರ್ ಭದ್ರತಾ ಅಧಿಕಾರಿ, ಓರ್ವ ಸಹಾಯಕ, ಇಬ್ಬರು ಪೈಲಟ್ ಗಳು, ಓರ್ವ ಕ್ಯಾಬಿನ್ ಕ್ರ್ಯೂ ಸಿಬ್ಬಂದಿಗಳು ಸಾವನ್ನಪ್ಪಿದ್ದಾರೆ.
ಅಪಘಾತದ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ. ವಿಮಾನದಲ್ಲಿರುವ ಎಲ್ಲಾ ಪ್ರಯಾಣಿಕರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಘಟನೆಯ ವಿಡಿಯೋ ವೈರಲ್ ಆಗಿದೆ.
ಅಜಿತ್ ಪವಾರ್ ಅವರು ಮುಂಬೈನಿಂದ ತಮ್ಮ ಸ್ವಕ್ಷೇತ್ರವಾದ ಬಾರಾಮತಿಗೆ ನಾಲ್ಕು ಸಾರ್ವಜನಿಕ ಸಭೆಗಳಲ್ಲಿ ಭಾಗವಹಿಸಲು ಪ್ರಯಾಣಿಸುತ್ತಿದ್ದರು. ವಿಮಾನವು ರನ್ವೇಯಲ್ಲಿ ಇಳಿಯುವ ಸಮಯದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ತುರ್ತು ಲ್ಯಾಂಡಿಂಗ್ಗೆ ಪ್ರಯತ್ನಿಸಿದಾಗ ನಿಯಂತ್ರಣ ತಪ್ಪಿ ಪಕ್ಕಕ್ಕೆ ಸರಿದು ಸ್ಫೋಟಗೊಂಡಿದೆ ಎಂದು ವರದಿಯಾಗಿದೆ.
ವಿಮಾನದಲ್ಲಿದ್ದ ಅಜಿತ್ ಪವಾರ್ ಸೇರಿದಂತೆ ಅವರ ಭದ್ರತಾ ಸಿಬ್ಬಂದಿ ಮತ್ತು ಪೈಲಟ್ಗಳು ಮೃತಪಟ್ಟಿದ್ದಾರೆ.ವಿಮಾನವು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.
#WATCH | Crash landing in Baramati | Five people onboard the Mumbai-Baramati charter plane, including Maharashtra Deputy CM Ajit Pawar, died as per initial information by the DGCA.
Visuals from the spot show the wreckage of the aircraft. pic.twitter.com/GMmwrZwR0M
— ANI (@ANI) January 28, 2026








