ನವದೆಹಲಿ:ದೆಹಲಿ ಸಚಿವೆ ಮತ್ತು ಎಎಪಿ ನಾಯಕಿ ಅತಿಶಿ ವಿರುದ್ಧ ಶನಿವಾರ ಮಾನನಷ್ಟ ಮೊಕದ್ದಮೆ ದಾಖಲಿಸಲಾಗಿದೆ ಎಂದು ಎಎನ್ಐ ವರದಿ ಮಾಡಿದೆ.
ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯವು ಈ ವಿಷಯವನ್ನು ಜುಲೈ ೨೩ ರಂದು ವಿಚಾರಣೆಗೆ ಪಟ್ಟಿ ಮಾಡಿದೆ. ವಿಳಾಸ ತಪ್ಪಾಗಿದ್ದರಿಂದ ಸಮನ್ಸ್ ನೀಡಲಾಗಿಲ್ಲ ಎಂದು ನ್ಯಾಯಾಲಯ ಗಮನಿಸಿದೆ.
ಆದಾಗ್ಯೂ, ಅತಿಶಿ ತನ್ನ ವಕೀಲರೊಂದಿಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಹಾಜರಾದರು. ದೂರಿನ ಪ್ರತಿಯನ್ನು ನ್ಯಾಯಾಲಯದಲ್ಲಿ ಹಾಜರಿದ್ದ ಆಕೆಯ ವಕೀಲರಿಗೆ ನೀಡಲಾಯಿತು.