Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ವಿಧಾನ ಸೌಧದಲ್ಲಿ ಲಿಫ್ಟ್ ಆಪರೇಟರ್ ಆಗಿದ್ದ ಕೃಷ್ಣಪ್ಪ ಇನ್ನಿಲ್ಲ

19/11/2025 4:47 PM

WhatsApp ಭದ್ರತಾ ದೋಷದಿಂದಾಗಿ 3.5 ಬಿಲಿಯನ್ ಫೋನ್ ಸಂಖ್ಯೆಗಳನ್ನು ಬಹಿರಂಗ | WhatsApp Breach

19/11/2025 4:36 PM

ವಾಟ್ಸಾಪ್ ಬಳಕೆದಾರರೇ ಎಚ್ಚರ ; ಭದ್ರತಾ ದೋಷದಿಂದಾಗಿ 3.5 ಬಿಲಿಯನ್ ‘ಫೋನ್ ನಂಬರ್’ಗಳು ಬಹಿರಂಗ!

19/11/2025 4:34 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ನಾನು ಜಾಲಪ್ಪ ಇಲ್ಲದೆ ಹೋಗಿದ್ದರೆ ದೇವೇಗೌಡರು ಮುಖ್ಯಮಂತ್ರಿ ಆಗುತ್ತಿರಲಿಲ್ಲ : ಸಿಎಂ ಸಿದ್ದರಾಮಯ್ಯ
KARNATAKA

BREAKING : ನಾನು ಜಾಲಪ್ಪ ಇಲ್ಲದೆ ಹೋಗಿದ್ದರೆ ದೇವೇಗೌಡರು ಮುಖ್ಯಮಂತ್ರಿ ಆಗುತ್ತಿರಲಿಲ್ಲ : ಸಿಎಂ ಸಿದ್ದರಾಮಯ್ಯ

By kannadanewsnow0505/12/2024 3:50 PM

ಹಾಸನ : ಎಚ್ ಡಿ ದೇವೇಗೌಡರು ಯಾರನ್ನು ಬೆಳೆಸಲು ಇಷ್ಟಪಡುವುದಿಲ್ಲ. ಬೇರೆಯವರನ್ನು ಇರಲಿ ಒಕ್ಕಲಿಗರನ್ನೇ ಎಚ್ ಡಿ ದೇವೇಗೌಡರು ಬೆಳೆಸಲಿಲ್ಲ. 1994 ರಲ್ಲಿ ನಾನು ಜಾಲಪ್ಪ ಇಲ್ಲದಿದ್ದರೆ ನೀವು ಸಿಎಂ ಆಗುತ್ತಿರಲಿಲ್ಲ. ಎಚ್ ಡಿ ದೇವೇಗೌಡರು ಯಾರನ್ನು ಬೆಳೆಸುವುದಕ್ಕೆ ಇಷ್ಟಪಡಲ್ಲ. ನಾನು ಜಾಲಪ್ಪನವರು ದೇವೇಗೌಡರ ಅವರ ಜೊತೆ ನಿಲ್ಲದೆ ಹೋಗಿದ್ದರೆ. ಎಚ್ ಡಿ ದೇವೇಗೌಡರು ಮುಖ್ಯಮಂತ್ರಿ ಆಗುತ್ತಿರಲಿಲ್ಲ. ಹಾಸನದಲ್ಲಿ ದೇವೇಗೌಡರು ಕಣ್ಣೀರು ಆಗಬೇಕಿತ್ತು ಅಲ್ವಾ? ರೈತರಿಗಾಗಿ ಇವರು ಒಂದು ದಿನವೂ ಕಣ್ಣೀರು ಹಾಕಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ HD ದೇವೇಗೌಡರ ವಿರುದ್ಧ ವಾಗ್ದಾಳಿ ನಡೆಸಿದರು.

ಇಂದು ಹಾಸನ ಜಿಲ್ಲೆಯ ಎಸ ಎಂ ಕೃಷ್ಣ ನಗರದಲ್ಲಿ ಕಾಂಗ್ರೆಸ್ ಜನಕಲ್ಯಾಣ ಬೃಹತ್ ಸಮಾವೇಶ ಆಯೋಜನೆ ಮಾಡಿದ್ದು, ಈ ಒಂದು ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ವಿರುದ್ಧ ಗುಡುಗಿದರು. ಇದೆ ವೇಳೆ ಮೇಕೆದಾಟು ಯೋಜನೆಗೆ ಕೇಂದ್ರ ಸಚಿವರಾಗಿರುವಂತಹ ಹೆಚ್ ಡಿ ಕುಮಾರಸ್ವಾಮಿ ಅವರು ಅನುಮತಿ ಕೊಡಿಸಲಿ ಎಂದು ಸಿಎಂ ಸಿದ್ದರಾಮಯ್ಯ ಎಚ್ ಡಿ ಕುಮಾರಸ್ವಾಮಿ ಅವರಿಗೆ ಸವಾಲು ಹಾಕಿದರು.

ರಾಜ್ಯದ ಮೂರು ಉಪಚುನಾವಣೆಗಳಲ್ಲಿ ನಾವೇ ಗೆದ್ದಿದ್ದೇವೆ. ಬಳ್ಳಾರಿ ಜಿಲ್ಲೆಯ ಸಂಡೂರು ಕ್ಷೇತ್ರದಲ್ಲಿ ಇ ತುಕಾರಾಂ ಶಾಸಕರಾಗಿದ್ದರು.ಚನ್ನಪಟ್ಟಣ ಶಿಗ್ಗಾವಿ ವಿಧಾನಸಭಾ ಕ್ಷೇತ್ರದಲ್ಲಿ ನಾವು ಗೆದ್ದಿರಲಿಲ್ಲ. ಆದರೆ ನಮ್ಮ ಮತದಾರರ ಆಶೀರ್ವಾದದಿಂದ ಮೂರು ಕ್ಷೇತ್ರಗಳಲ್ಲೂ ಗೆದ್ದೆವು. ಹೀಗಾಗಿ ಮತದಾರರ ಕೃತಜ್ಞತೆ ಸಲ್ಲಿಸಲು ಈ ಸಮಾವೇಶ ಆಯೋಜನೆ ಮಾಡಲಾಗಿದೆ. ಇದು ಅತ್ಯಂತ ಮಹತ್ವದ ಸಮಾವೇ.ಶ. ನನ್ನ ರಾಜಕೀಯ ಜೀವನದಲ್ಲಿ ಹಾಸನದಲ್ಲಿ ಇಷ್ಟು ದೊಡ್ಡ ಮಟ್ಟದಲ್ಲಿ ಸಮಾವೇಶ ಆಗಿಲ್ಲ.

ಹಾಸನದಲ್ಲಿ ಏಕೆ ಈ ಸಮಾವೇಶ ಮಾಡುತ್ತಿದ್ದಾರೆ ಎಂದು ವ್ಯಾಖ್ಯಾನ ಮಾಡುತ್ತಿದ್ದರು.ಮೈಸೂರಲ್ಲಿ ಅನೇಕ ಸಮಾವೇಶಗಳು ಆಗಿವೆ. ಆದರೆ ಹಾಸನದಲ್ಲಿ ಸಮಾವೇಶ ಆಗಿಲ್ಲ. ಈ ಬಗ್ಗೆ ಸಚಿವ ಕೆ ಎನ್ ರಾಜಣ್ಣ ಶಾಸಕ ಶಿವಲಿಂಗೇಗೌಡ ಜೊತೆಗೆ ಚರ್ಚಿಸಿದೆ.ಮಹದೇವಪ್ಪ ಕೆ ವೆಂಕಟೇಶ್ ಕೂಡ ಹಾಸನದಲ್ಲಿ ಸಮಾವೇಶಕ್ಕೆ ನಿರ್ಧರಿಸಿದ್ದರು. ಕಾಂಗ್ರೆಸ್ ಮಾತ್ರವಲ್ಲ ಸ್ವಾಭಿಮಾನ ಒಕ್ಕೂಟ ಸಹಯೋಗದಲ್ಲಿ ಸಮಾವೇಶ ಮಾಡಲಾಗುತ್ತಿದೆ. ಕೃತಜ್ಞತಾ ಸಮಾವೇಶಕ್ಕೆ ಸ್ವಾಭಿಮಾನಿಗಳ ಒಕ್ಕೂಟ ತೀರ್ಮಾನಿಸಿತ್ತು ಎಂದರು.

ಬಡವರ ಹೊಟ್ಟೆಯ ಮೇಲೆ ಹೊಡೆಯುತ್ತಿರುವುದು ಜೆಡಿಎಸ್ ಮತ್ತು ಬಿಜೆಪಿ. ಈಗ ಅಧಿಕಾರಕ್ಕೆ ಬಂದಾಗ 10 ಕೆಜಿ ಅಕ್ಕಿ ಕೊಡಲು ತೀರ್ಮಾನಿಸಿದ್ದು ಯಾರು? ಹೆಚ್ಚುವರಿ ಅಕ್ಕಿ ಕೊಡಿ ಎಂದಾಗ ಕೇಂದ್ರ ಸರ್ಕಾರ ಕೊಡಲಿಲ್ಲ. ಹೆಚ್ಚುವರಿ ಅಕ್ಕಿ ಕೊಡಲು ತೀರ್ಮಾನ ಮಾಡಿದ್ದೆ ಕಾಂಗ್ರೆಸ್. 56 ಸಾವಿರ ಕೋಟಿ ಬಳಸಿ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ ಐದು ಗ್ಯಾರಂಟಿಗಳನ್ನು ಜಾರಿ ಮಾಡಲು ಸಾಧ್ಯವಿಲ್ಲ ಎಂದು ಹೇಳಿದ್ದರು. ಗ್ಯಾರೆಂಟಿಗಳನ್ನು ಜಾರಿಗೊಳಿಸಿದರೆ ರಾಜ್ಯ ದಿವಾಳಿ ಆಗುತ್ತದೆ ಎಂದು ಹೇಳಿದ್ದರು. ಗ್ಯಾರೆಂಟಿಗಳನ್ನು ವಿರೋಧ ಮಾಡುವವರು ಬಡವರ ವಿರೋಧಿಗಳು.

ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ತೆರಿಗೆ ಪಾಲನ್ನು ಸರಿಯಾಗಿ ನೀಡುತ್ತಿಲ್ಲ. ಕೇಂದ್ರ ಸರ್ಕಾರ ನಮಗೆ ನ್ಯಾಯಯುತವಾಗಿ ತೆರಿಗೆ ಹಂಚಿಕೆ ಮಾಡುತ್ತಿಲ್ಲ. ರಾಜ್ಯದಿಂದ ನಾವು ಕೇಂದ್ರಕ್ಕೆ ಕಟ್ಟುವ ತೆರಿಗೆ ಪಾಲಿನಲ್ಲಿ ನಮಗೆ ಪುನಃ ಬರುವುದು ಕೇವಲ ಐವತ್ತು ಸಾವಿರ ಕೋಟಿ ಮಾತ್ರ ಯಾವತ್ತಾದರೂ ದೇವೇಗೌಡರು ಕುಮಾರಸ್ವಾಮಿ ಈ ಕುರಿತು ಕೇಳಿದ್ದಾರಾ? ಮೇಕೆದಾಟು ಯೋಜನೆಗೆ ಕುಮಾರಸ್ವಾಮಿ ಅನುಮತಿ ಕೊಡಿಸಲಿ. ಎಚ್ ಡಿ ದೇವೇಗೌಡರು ನನಗಿಂತ 15 ವರ್ಷ ದೊಡ್ಡವರು. ದೇವೇಗೌಡರು ಸಿದ್ದರಾಮಯ್ಯನ ಗರ್ವಭಂಗ ಮಾಡುತ್ತೇನೆ ಎಂದರು, ಸಿದ್ದರಾಮಯ್ಯನವರಿಗೆ ದುರಹಂಕಾರ ಬಂದಿದೆ ಅಂದ್ರು, ಸರ್ಕಾರವನ್ನು ಕಿತ್ತುಗೇರಿ ಅಂದರು ದೇವೇಗೌಡರು ವಯಸ್ಸಿಗೆ ತಕ್ಕಂತೆ ಮಾತನಾಡಬೇಕು ಅಲ್ವೇ? ಎಂದರು.

ಕಾಂಗ್ರೆಸ್ ಅಧಿಕಾರಕ್ಕೆ ಬಂದ ಆಗ್ಲಿಲ್ಲ ಸುಭದ್ರ ಸರ್ಕಾರವನ್ನು ನೀಡಿದೆ 2013ರಲ್ಲಿ ಅಧಿಕಾರಕ್ಕೆ ಬಂದಾಗ ನಾವು ನೂರಾರು ಜನರು ಭರವಸೆಗಳನ್ನು ನೀಡಿದ್ದೆವು. ಆಗ 165 ಭರವಸೆಗಳ ಪೈಕಿ 158 ಭರವಸೆಗಳನ್ನು ಈಡೇರಿಸಿದ್ದೆವು. ಕೊಟ್ಟ ಮಾತಿನಂತೆ ನಡೆದಿದ್ದು ನಮ್ಮ ಸರ್ಕಾರ. ಜೆಡಿಎಸ್ ಬಿಜೆಪಿಯವರು ಬಿಪಿಎಲ್ ಕಾರ್ಡ್ ಬಗ್ಗೆ ಬಹಳ ಮಾತನಾಡುತ್ತಾರೆ. ಉಚಿತವಾಗಿ ಐದು ಕೆಜಿ ಅಕ್ಕಿ ಕೊಟ್ಟವರು ಯಾರು? ಯಾರು ಹಸಿವಿನಿಂದ ಮಲಗಬಾರದೆಂದು ಉಚಿತವಾಗಿ ಅಕ್ಕಿ ಕೊಡುತ್ತಿದ್ದೇವೆ ಎಂದು ತಿಳಿಸಿದರು.

Share. Facebook Twitter LinkedIn WhatsApp Email

Related Posts

ವಿಧಾನ ಸೌಧದಲ್ಲಿ ಲಿಫ್ಟ್ ಆಪರೇಟರ್ ಆಗಿದ್ದ ಕೃಷ್ಣಪ್ಪ ಇನ್ನಿಲ್ಲ

19/11/2025 4:47 PM1 Min Read

ಚಿಕ್ಕಮಗಳೂರಲ್ಲಿ ನೂತನ KSRTC ಬಸ್ ನಿಲ್ದಾಣ ನಿರ್ಮಾಣಕ್ಕೆ ಸಚಿವ ರಾಮಲಿಂಗಾರೆಡ್ಡಿ ಶಂಕುಸ್ಥಾಪನೆ

19/11/2025 4:04 PM2 Mins Read

BREAKING: ಬೆಂಗಳೂರಲ್ಲಿ ‘RBI ಅಧಿಕಾರಿ’ಗಳ ಸೋಗಿನಲ್ಲಿ ‘ATM ವಾಹನ’ ಅಡ್ಡಗಟ್ಟಿ 7.11 ಕೋಟಿ ದರೋಡೆ

19/11/2025 3:57 PM1 Min Read
Recent News

ವಿಧಾನ ಸೌಧದಲ್ಲಿ ಲಿಫ್ಟ್ ಆಪರೇಟರ್ ಆಗಿದ್ದ ಕೃಷ್ಣಪ್ಪ ಇನ್ನಿಲ್ಲ

19/11/2025 4:47 PM

WhatsApp ಭದ್ರತಾ ದೋಷದಿಂದಾಗಿ 3.5 ಬಿಲಿಯನ್ ಫೋನ್ ಸಂಖ್ಯೆಗಳನ್ನು ಬಹಿರಂಗ | WhatsApp Breach

19/11/2025 4:36 PM

ವಾಟ್ಸಾಪ್ ಬಳಕೆದಾರರೇ ಎಚ್ಚರ ; ಭದ್ರತಾ ದೋಷದಿಂದಾಗಿ 3.5 ಬಿಲಿಯನ್ ‘ಫೋನ್ ನಂಬರ್’ಗಳು ಬಹಿರಂಗ!

19/11/2025 4:34 PM
nitish kumar

BREAKING : ‘NDA’ ನಾಯಕರಾಗಿ ‘ನಿತೀಶ್ ಕುಮಾರ್’ ಆಯ್ಕೆ, 10ನೇ ಬಾರಿಗೆ ಸಿಎಂ ಗದ್ದುಗೆ ಏರಲು ಸಜ್ಜು

19/11/2025 4:10 PM
State News
KARNATAKA

ವಿಧಾನ ಸೌಧದಲ್ಲಿ ಲಿಫ್ಟ್ ಆಪರೇಟರ್ ಆಗಿದ್ದ ಕೃಷ್ಣಪ್ಪ ಇನ್ನಿಲ್ಲ

By kannadanewsnow0919/11/2025 4:47 PM KARNATAKA 1 Min Read

ಬೆಂಗಳೂರು: ಮುಖ್ಯಮಂತ್ರಿ ಹಾಗೂ ಗಣ್ಯಾತಿಗಣ್ಯರು ರಾಜ್ಯದ ಶಕ್ತಿ ಕೇಂದ್ರ ವಿಧಾನ ಸೌಧದ ತಮ್ಮ ಕಚೇರಿಗೆ ತೆರಳಲು ಹಾಗೂ ದೈನಂದಿನ ಕಾರ್ಯ ಚಟುವಟಿಕೆಗಳನ್ನು…

ಚಿಕ್ಕಮಗಳೂರಲ್ಲಿ ನೂತನ KSRTC ಬಸ್ ನಿಲ್ದಾಣ ನಿರ್ಮಾಣಕ್ಕೆ ಸಚಿವ ರಾಮಲಿಂಗಾರೆಡ್ಡಿ ಶಂಕುಸ್ಥಾಪನೆ

19/11/2025 4:04 PM

BREAKING: ಬೆಂಗಳೂರಲ್ಲಿ ‘RBI ಅಧಿಕಾರಿ’ಗಳ ಸೋಗಿನಲ್ಲಿ ‘ATM ವಾಹನ’ ಅಡ್ಡಗಟ್ಟಿ 7.11 ಕೋಟಿ ದರೋಡೆ

19/11/2025 3:57 PM

BIG NEWS: ಸಾಗರ ತಾಲ್ಲೂಕಲ್ಲಿ ’50 ಕೋಟಿ’ಯಲ್ಲಿ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು ‘ಆರ್ಥಿಕ ಇಲಾಖೆ’ ಅನುಮತಿಸಿ ಆದೇಶ

19/11/2025 3:19 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.