ದಕ್ಷಿಣಕನ್ನಡ : ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೊನೆಗೂ ಏಳೆಂಟು ಮೂಳೆಗಳು ಸಿಕ್ಕ ಬೆನ್ನಲ್ಲೇ 6ನೇ ಪಾಯಿಂಟ್ ನಲ್ಲಿ ಶೋಧ ಕಾರ್ಯ ಮುಕ್ತಾಯವಾಗಿದೆ.
ಇಂದು ಅಧಿಕಾರಿಗಳು ದೂರುದಾರ ತೋರಿಸಿದ ಜಾಗದಲ್ಲಿ 6ನೇ ಪಾಯಿಂಟ್ ನಲ್ಲಿ ತಲೆಬುರುಡೆ ಸೇರಿ ಏಳೆಂಟು ಮೂಳೆಗಳು ಸಿಕ್ಕಿವೆ ಎಂದು ಮಾಹಿತಿ ತಿಳಿದು ಬಂದಿದೆ.
ಹೌದು 6ನೇ ಪಾಯಿಂಟ್ ನಲ್ಲಿ ಅಸ್ತಿಪಂಜರದ ಮೂಳೆಗಳು ಪತ್ತೆಯಾಗಿವೆ. ಮೂಳೆಗಳು ಎಸ್ಐಟಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 6ನೇ ಪಾಯಿಂಟ್ ನಲ್ಲಿ ಪುರುಷನ ತಲೆಬುರುಡೆ ಸೇರಿದಂತೆ ಏಳೆಂಟು ಮೂಳೆಗಳು ಸಿಕ್ಕ ಮಾಹಿತಿಯನ್ನು ಎಸ್ಐಟಿ ಹಂಚಿಕೊಂಡಿದೆ. ಸಂಪೂರ್ಣವಾದ ಅಸ್ಥಿಪಂಜರ ಇನ್ನು ಸಿಕ್ಕಿಲ್ಲ ಆದರೆ ಪುರುಷನ ತಲೆಬುರುಡೆ ಸೇರಿದಂತೆ ಏಳೆಂಟು ಮೂಳೆಗಳು ಸಿಕ್ಕಿವೆ. ಇದೀಗ ಈ ಒಂದು ಪ್ರಕರಣ ಮತ್ತಷ್ಟು ಕುತೂಹಲಕ್ಕೆ ತೆಗೆದುಕೊಂಡು ಹೋಗುತ್ತದೆ.
ಮೂಳೆ ಸಿಕ್ಕ ಬಗ್ಗೆ ಅಧಿಕಾರಿಗಳು ಲ್ಯಾಪ್ಟಾಪ್ ನಲ್ಲಿ ದಾಖಲು ಮಾಡಿಕೊಂಡಿದ್ದಾರೆ ಮೂಳೆ ಸಿಕ್ಕ ಕುರಿತು ಅಧಿಕಾರಿಗಳು ಈ ಒಂದು ಮಾಹಿತಿಯನ್ನು ಲ್ಯಾಪ್ಟಾಪ್ ನಲ್ಲಿ ದಾಖಲು ಮಾಡಿಕೊಂಡಿದ್ದಾರೆ. ಜಿಪಿಎಸ್ ಆನ್ ಮಾಡಿಕೊಂಡು ರಿಪೋರ್ಟ್ ದಾಖಲು ಮಾಡಿದ್ದಾರೆ ಎಲ್ಲ ಮಾಹಿತಿಯನ್ನು ನಿಖರವಾಗಿ ಲ್ಯಾಪ್ಟಾಪ್ ನಲ್ಲಿ ಅಧಿಕಾರಿಗಳು ದಾಖಲಿಸಿದ್ದಾರೆ.