ಬೆಂಗಳೂರು : ಕೋಲ್ಕತ್ತಾ ವೈದ್ಯೆಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಖಂಡಿಸಿ ಇಂದು ದೇಶಾದ್ಯಂತ ವೈದ್ಯರು ಮುಷ್ಕರಕ್ಕೆ ಕರೆ ನೀಡಿದ್ದಾರೆ.
ರಾಜ್ಯದಲ್ಲೂ ವೈದ್ಯರು ಪ್ರತಿಭಟನೆಗೆ ಕರೆ ನೀಡಿದ್ದು, ಬೆಂಗಳೂರಿನಲ್ಲಿ ರೋಗಿಗಳಿಗೆ ಪ್ರತಿಭಟನೆಯ ಬಿಸಿ ತಟ್ಟಿದ್ದು, ಚಿಕಿತ್ಸೆ ಸಿಗದೇ ರೋಗಿಗಳು ಬೇಸರ ಹೊರಹಾಕಿದ್ದಾರೆ.
ಬೆಂಗಳೂರಿನ ಹಲವು ಖಾಸಗಿ ಆಸ್ಪತ್ರೆಗಳಲ್ಲಿ ಇಂದು ಒಪಿಡಿ ಸೇವೆ ಬಂದ್ ಮಾಡಲಾಗಿದ್ದು, ಇದನ್ನು ತಿಳಿಯದೇ ರೋಗಿಗಳು ಆಸ್ಪತ್ರೆಗೆ ಬಂದಿದ್ದಾರೆ. ಆಸ್ಪತ್ರೆಯಲ್ಲಿ ವೈದ್ಯರಿಲ್ಲದ ಕಾರಣ ಡಯಾಲಿಸಿಸ್ ಸೇರಿದಂತೆ ಹಲವು ಚಿಕಿತ್ಸೆಗೆ ಬಂದಿದ್ದ ರೋಗಿಗಳು ಮನೆಗೆ ವಾಪಸ್ ಆಗಿದ್ದಾರೆ.