ಯಾದಗಿರಿ : ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಟೋಕಾಪುರ ಗ್ರಾಮದಲ್ಲಿ ಕಲ್ಯಾಣ ಕರ್ನಾಟಕ ಸಾರಿಗೆ ಬಸ್ ಚಾಲಕ ಬಸ್ ನಿಲ್ಲಸದೇ ಹೋದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಶಾಲೆಗೆ ನಡೆದುಕೊಂಡೇ ಹೋಗಿರುವ ಘಟನೆ ನಡೆದಿದೆ.
ಬಸ್ ನಿಲ್ಲಿಸುವಂತೆ ಬಸ್ ಕಂಡಕ್ಟರ್ ವಿರುದ್ಧ ನಿಂದಿಸಿದ ಆರೋಪದ ಹಿನ್ನೆಲೆಯಲ್ಲಿ ಟೋಕಾಪುರ ಗ್ರಾಮದಲ್ಲಿ ಬಸ್ ನಿಲ್ಲಿಸದೇ ಹೋದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ನಡೆದುಕೊಂಡೇ ಶಾಲೆಗೆ ಹೋಗಿದ್ದಾರೆ. ಟೋಕಾಪುರದಿಂದ ಕನ್ಯಾಕೋಳೋರಿನ ಶಾಲೆಗೆ ವಿದ್ಯಾರ್ಥಿಗಳು ಹೋಗಬೇಕಿತ್ತು ಆದರೆ ಬಸ್ ನಿಲ್ಲಿಸದ ಹಿನ್ನೆಲೆಯಲ್ಲಿ ಮಕ್ಕಳು ನಡೆದುಕೊಂಡೇ ಶಾಲೆಗೆ ಹೋಗಿದ್ದಾರೆ.
ಬಸ್ ನಿಲ್ಲಿಸದ ಚಾಲಕ, ನಿರ್ವಾಹನಕ ವಿರುದ್ಧ ವಿದ್ಯಾರ್ಥಿಗಳು, ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು, ಗ್ರಾಮದಲ್ಲಿ ಬಸ್ ನಿಲ್ಲಿಸುವಂತೆ ಗ್ರಾಮಸ್ಥರು ಅಧಿಕಾರಿಗಳಿಗೆ ಆಗ್ರಹಿಸಿದ್ದಾರೆ.