ಉಡುಪಿ : ಪತ್ನಿ ಅತಿಯಾದ ಮೊಬೈಲ್ ಬಳಸ್ತಿಯ ಎಂದು ಪತಿಯೊಬ್ಬ ಪತ್ನಿಯ ಜೊತೆಗೆ ಗಲಾಟೆ ತೆಗೆದು ಕತ್ತಿಯಿಂದ ಕೊಚ್ಚಿ ಪತ್ನಿಯನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಹಿಲಿಯಾಣ ಗ್ರಾಮದ ಹೊಸಮಠ ಎಂಬಲ್ಲಿ ಈ ಒಂದು ಘಟನೆ ನಡೆದಿದೆ.ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಹಿಲಿಯಾಣ ಎಂಬ ಗ್ರಾಮದಲ್ಲಿ ನಡೆದಿದೆ.
ಹೌದು ಪತ್ನಿ ರೇಖಾ (28) ಎನ್ನುವ ಪತ್ನಿಯನ್ನು ಪತಿ ಗಣೇಶ್ ಭೀಕರವಾಗಿ ಕೊಲೆ ಮಾಡಿದ್ದಾನೆ. ಮದ್ಯ ವ್ಯಸನಿಯಾಗಿರುವ ಗಣೇಶ್ ಪೂಜಾರಿ ಇಂದ ಈ ಒಂದು ಕೃತ್ಯ ನಡೆದಿದೆ. ವಿಪರೀತ ಮೊಬೈಲ್ ಬಳಸುತ್ತೀಯಾ ಎಂದು ಪತ್ನಿಯ ಜೊತೆಗೆ ಗಣೇಶ್ ಜಗಳ ತೆಗೆದಿದ್ದಾನೆ. ಜಗಳ ವಿಕೋಪಕ್ಕೆ ತಿರುಗಿ ಕತ್ತಿಯಿಂದ ಕೊಚ್ಚಿ ಪತ್ನಿಯ ಭೀಕರ ಕೊಲೆ ಮಾಡಿದ್ದಾನೆ.ಸದ್ಯ ಪೊಲೀಸರು ಆರೋಪಿ ಗಣೇಶನನ್ನು ಅರೆಸ್ಟ್ ಮಾಡಿದ್ದಾರೆ. ಕೊಲೆ ಕುರಿತಂತೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.