Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಗೋಲ್ಡ್ ಸ್ಮಗ್ಲಿಂಗ್ ಕೇಸ್ ನಲ್ಲಿ ನಟಿ ರನ್ಯಾ ರಾವ್ ಬಂಧನ ಪ್ರಕರಣ : ವಿಚಾರಣೆ ಆ.28ಕ್ಕೆ ಮುಂದೂಡಿದ ಹೈಕೋರ್ಟ್

23/07/2025 1:07 PM

BREAKING : ರಾಜ್ಯದ ಎಲ್ಲಾ ಶಾಲೆಗಳಲ್ಲಿ 1-10ನೇ ತರಗತಿ ವಿದ್ಯಾರ್ಥಿಗಳಿಗೆ `ಮೌಲ್ಯಾಂಕನ’ ನಡೆಸಲು ಶಿಕ್ಷಣ ಇಲಾಖೆ ಆದೇಶ.!

23/07/2025 1:05 PM

SHOCKING : ದೇಶದಲ್ಲಿ ನಿಲ್ಲದ ಕಾಮುಕರ ಅಟ್ಟಹಾಸ : ಅಪ್ರಾಪ್ತ ಬಾಲಕಿ ಮೇಲೆ ನಾಲ್ವರಿಂದ `ಗ್ಯಾಂಗ್ ರೇಪ್’ 

23/07/2025 12:55 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ರಾಜ್ಯದ ಎಲ್ಲಾ ಶಾಲೆಗಳಲ್ಲಿ 1-10ನೇ ತರಗತಿ ವಿದ್ಯಾರ್ಥಿಗಳಿಗೆ `ಮೌಲ್ಯಾಂಕನ’ ನಡೆಸಲು ಶಿಕ್ಷಣ ಇಲಾಖೆ ಆದೇಶ.!
KARNATAKA

BREAKING : ರಾಜ್ಯದ ಎಲ್ಲಾ ಶಾಲೆಗಳಲ್ಲಿ 1-10ನೇ ತರಗತಿ ವಿದ್ಯಾರ್ಥಿಗಳಿಗೆ `ಮೌಲ್ಯಾಂಕನ’ ನಡೆಸಲು ಶಿಕ್ಷಣ ಇಲಾಖೆ ಆದೇಶ.!

By kannadanewsnow5723/07/2025 1:05 PM

ಬೆಂಗಳೂರು : 2025-26 ನೇ ಶೈಕ್ಷಣಿಕ ಸಾಲಿನಲ್ಲಿ ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 1 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಮೌಲ್ಯಾಂಕನ ನಡೆಸುವ ಬಗ್ಗೆ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.

2025-26ನೇ ಶೈಕ್ಷಣಿಕ ಸಾಲಿನಲ್ಲಿ ಕರ್ನಾಟಕ ರಾಜ್ಯ ಪಠ್ಯಕ್ರಮವನ್ನು ಅನುಸರಿಸುತ್ತಿರುವ 1 ರಿಂದ 10ನೇ ತರಗತಿ ಶಾಲೆಗಳಿಗೆ 2025-26ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳ ವಾರ್ಷಿಕ ಕ್ರಿಯಾಯೋಜನೆ ಹಾಗೂ ಉಲ್ಲೇಖಗಳನ್ವಯ ಸದರಿ ಸುತ್ತೋಲೆಯನ್ನು ಹೊರಡಿಸಲಾಗಿದೆ. ಇದನ್ನು ಆಧರಿಸಿ ಶಾಲೆಗಳಲ್ಲಿ ಪಠ್ಯ ಬೋಧನೆ ಹಾಗೂ ಮೌಲ್ಯಾಂಕನ ಕುರಿತು ಈ ಕೆಳಕಂಡಂತೆ ಕ್ರಮವಹಿಸಲು ತಿಳಿಸಿದೆ.

1. ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ 1 ರಿಂದ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ದಿನಾಂಕ:29-05-2025 ರಿಂದ ಶೈಕ್ಷಣಿಕ ವರ್ಷವು ಪ್ರಾರಂಭವಾಗಿದೆ. ‘ಕಲಿಕಾ ಚೇತರಿಕೆ’ ಉಪಕ್ರಮ ಮತ್ತು ‘ಕಲಿಕಾ ಬಲವರ್ಧನೆ’ ಕಾರ್ಯಕ್ರಮದಡಿ ಕಲಿವಿನ ಫಲಾಧಾರಿತ ವಿದ್ಯಾರ್ಥಿಗಳ ಚಟುವಟಿಕೆ ಪುಸ್ತಕ ಹಾಗೂ ಶಿಕ್ಷಕರ ಚಟುವಟಿಕೆ ಕೋಶಗಳನ್ನು ಸಿದ್ಧಪಡಿಸಿ ಬೋಧನಾ ಕಲಿಕಾ ಪ್ರಕ್ರಿಯೆಯಲ್ಲಿ ಅಳವಡಿಸಿ ಕಲಿಕಾ ಅಂತರವನ್ನು ಬೆಸೆಯಲು ನಿರಂತರವಾಗಿ ಉಪಕ್ರಮಗಳನ್ನು ಅನುಷ್ಠಾನಿಸಲಾಗುತ್ತಿದೆ. ಅಲ್ಲದೇ ಮೌಲ್ಯಾಂಕನಕ್ಕೆ ಪೂರಕವಾಗಿ ಕಲಿಕಾ ಫಲ ಆಧಾರಿತ ಪ್ರಶ್ನೆಕೋಠಿಯನ್ನು ಸಿದ್ಧಪಡಿಸಿ ಅನುಷ್ಠಾನ ಸಂಬಂಧ ಮಾರ್ಗದರ್ಶನ ನೀಡಲಾಗಿದೆ.

2. ವಿದ್ಯಾರ್ಥಿಗಳನ್ನು ಮುಂದಿನ ತರಗತಿಗೆ ಸಜ್ಜುಗೊಳಿಸಲು ಶೈಕ್ಷಣಿಕ ವರ್ಷದ ಆರಂಭದಲ್ಲಿ ‘ಸೇತುಬಂಧ’ ಕಾರ್ಯಕ್ರಮವನ್ನು ಜೂನ್ ತಿಂಗಳಿನಲ್ಲಿ ನಡೆಸುವುದು. 1 ರಿಂದ 10ನೇ ತರಗತಿಗಳಿಗೆ ಸೇತುಬಂಧ ಸಾಹಿತ್ಯವನ್ನು ಸಿದ್ಧಪಡಿಸಿ DSERT website ನಲ್ಲಿ ಅಳವಡಿಸಲಾಗಿದೆ. ಕಾರ್ಯಕ್ರಮ ಅನುಷ್ಠಾನಿಸುವ ಕುರಿತು ಸೇತುಬಂಧ ಸುತ್ತೋಲೆಯ ಮೂಲಕ ಮಾರ್ಗದರ್ಶನ ನೀಡಲಾಗಿದೆ.

3. ಉಲ್ಲೇಖ 1 ಮತ್ತು 3 ರನ್ನು ಆಧರಿಸಿ, ವಾರ್ಷಿಕ ಪಾಠ ಹಂಚಿಕೆ ಮಾಡಿಕೊಂಡು, ಕಲಿಕೆಯನ್ನು ಅನುಕೂಲಿಸುವುದು.
4. 2025-26ನೇ ಸಾಲಿನಿಂದ ರಾಜ್ಯ ಪಠ್ಯಕ್ರಮದ ಶಾಲೆಗಳಲ್ಲಿ ತರಗತಿ ಪ್ರಕ್ರಿಯೆಯಲ್ಲಿ ನಿರಂತರವಾಗಿ ಅಳವಡಿಸಲು ಅನುಕೂಲವಾಗುವಂತೆ ಹಾಗೂ ಪಾಠ ಆಧಾರಿತ ಮೌಲ್ಯಾಂಕನ ಸಾಮಗ್ರಿಯನ್ನು ಸಿದ್ಧಪಡಿಸಿ DSERT Website ನಲ್ಲಿ ಅಳವಡಿಸಿದೆ.

5. ಪಾಠ ಆಧಾರಿತ ಮೌಲ್ಯಾಂಕನಕ್ಕೆ (LBA) ಸಂಬಂಧಿಸಿದಂತೆ, ಪ್ರತಿ ಪಾಠದ ನಂತರ ಮಗುವಿನ ಕಲಿಕೆಯನ್ನು ದೃಢೀಕರಿಸಿಕೊಳ್ಳಲು ಪಾಠ ಆಧಾರಿತ ಮೌಲ್ಯಾಂಕನವನ್ನು (Unit Test) ಮಾಡುವುದು.

6. ಕನ್ನಡ ಮಾಧ್ಯಮದ ಶಾಲೆಗಳಲ್ಲಿ ಪ್ರತಿ ಘಟಕದ ನಂತರ LBA ಪ್ರಶ್ನೆಕೋಠಿಯಿಂದ 20 ಅಂಕಗಳಿಗೆ ಹಾಗೂ ಮರುಸಿಂಚನದಿಂದ (6 ರಿಂದ 10ನೇ ತರಗತಿ) 05 ಅಂಕಗಳಿಗೆ ಪ್ರಶ್ನೆಪತ್ರಿಕೆ ಸಿದ್ಧಪಡಿಸಿ ಒಟ್ಟು 25 ಅಂಕಗಳಿಗೆ ಮೌಲ್ಯಾಂಕನ ಮಾಡುವುದು.

7. ಉಳಿದ ತರಗತಿಗಳು ಮತ್ತು ಮಾಧ್ಯಮಗಳಿಗೆ 25 ಅಂಕಗಳಿಗೆ ಪ್ರಶ್ನೆಕೋಠಿಯಲ್ಲಿರುವ ಪ್ರಶ್ನೆಗಳನ್ನಾಧರಿಸಿ ಪ್ರಶ್ನೆಪತ್ರಿಕೆ ಸಿದ್ಧಪಡಿಸಿ ಮೌಲ್ಯಾಂಕನ ಮಾಡಲು ಕ್ರಮವಹಿಸುವುದು. LBA

8. ಪಾಠ ಆಧಾರಿತ ಮೌಲ್ಯಾಂಕನ, ರೂಪಣಾತ್ಮಕ (FA) ಹಾಗೂ ಸಂಕಲನಾತ್ಮಕ (SA) ಮೌಲ್ಯಾಂಕನ ಕೈಗೊಂಡು, ಮಕ್ಕಳ ಕಲಿಕೆಯ ಪ್ರಗತಿಯನ್ನು SATS ನಲ್ಲಿ ಕಡ್ಡಾಯವಾಗಿ ದಾಖಲಿಸುವುದು

9. SATS ನ ಪ್ರತಿ ಮೌಲ್ಯಾಂಕನದ ವಿಶ್ಲೇಷಣಾ ವರದಿಯನ್ನು ಆಧರಿಸಿ ಮಗುವಿನ ಶೈಕ್ಷಣಿಕ ಅಭಿವೃದ್ಧಿಗೆ ಕ್ರಮವಹಿಸುವುದು.

10. 2025-26ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಸೇತುಬಂಧ ಕಾರ್ಯಕ್ರಮ, ಪಾಠ ಆಧಾರಿತ ಮೌಲ್ಯಾಂಕನ, ರೂಪಣಾತ್ಮಕ ಹಾಗೂ ಸಂಕಲನಾತ್ಮಕ ಮೌಲ್ಯಾಂಕನ ನಿರ್ವಹಿಸಲು ಅನುವಾಗುವಂತೆ ಸದರಿ ಸುತ್ತೋಲೆಯಲ್ಲಿ ಮಾಹಿತಿಯನ್ನು ನೀಡಲಾಗಿದೆ. ಅದರಂತೆ, ಮೇಲುಸ್ತುವಾರಿ ಅಧಿಕಾರಿಗಳು ಭೇಟಿ ಸಮಯದಲ್ಲಿ ನಿರಂತರವಾಗಿ ಶಾಲಾ ಹಂತದಲ್ಲಿ ಕ್ರಮವಹಿಸುತ್ತಿರುವ ಬಗ್ಗೆ ಖಾತ್ರಿಪಡಿಸಿಕೊಂಡು ಅನುಪಾಲನೆ ಮಾಡುವುದು.

ಸೇತುಬಂಧ ಶಿಕ್ಷಣ:

> ಶೈಕ್ಷಣಿಕ ವರ್ಷದ ಪ್ರಾರಂಭದಲ್ಲಿ ವಿದ್ಯಾರ್ಥಿಗಳು ಶಾಲಾ ವಾತಾವರಣಕ್ಕೆ ಹೊಂದಿಕೊಳ್ಳುವಂತೆ ‘ಮಳೆಬಿಲ್ಲು’ ಸಾಹಿತ್ಯದಲ್ಲಿನ ಚಟುವಟಿಕೆಗಳನ್ನು ನಿರ್ವಹಿಸುವುದು. ಸದರಿ ಸಾಹಿತ್ಯವು DSERT website ನಲ್ಲಿ ಲಭ್ಯವಿದೆ.

> ಆಯಾ ತರಗತಿಯ ಕಲಿಕಾ ಫಲಗಳ ಸಾಧನೆಗೆ ವಿದ್ಯಾರ್ಥಿಗಳು ಸಾಧಿಸಿರಲೇಬೇಕಾದ ಹಿಂದಿನ ತರಗತಿಯ ಕಲಿಕಾ ಫಲಗಳನ್ನು ಆಧರಿಸಿ ಸೇತುಬಂಧ ಚಟುವಟಿಕೆಗಳನ್ನು ನಿರ್ವಹಿಸುವುದು.

> 1ನೇ ತರಗತಿಗೆ 40 ದಿವಸಗಳ ವಿದ್ಯಾಪ್ರವೇಶ, 2 ರಿಂದ 10ನೇ ತರಗತಿಗಳಿಗೆ ಜೂನ್ ಮಾಹೆಯ ಪ್ರಾರಂಭದಲ್ಲಿ ಪೂರ್ವ / ನೈದಾನಿಕ ಪರೀಕ್ಷೆಯೊಂದಿಗೆ (Diagnostic Test) 15 ದಿವಸಗಳ ಸೇತುಬಂಧ ಕಾರ್ಯಕ್ರಮ ನಡೆಸಿ, ಸಾಫಲ್ಯ ಪರೀಕ್ಷೆಯ ಫಲಿತಗಳ ಆಧಾರದ ಮೇಲೆ ಶೈಕ್ಷಣಿಕ ಯೋಜನೆಯನ್ನು ರೂಪಿಸಿ (SAP), ಪ್ರತಿ ವಿದ್ಯಾರ್ಥಿಯ ವಿಷಯವಾರು ಕಲಿಕಾ ಫಲಗಳ ಹಾಗೂ FLN ಕಲಿಕಾ ಫಲಗಳ ಸಾಧನೆಗೆ ಕ್ರಮವಹಿಸುವುದು.

> ಸೇತುಬಂಧ ಕಾರ್ಯಕ್ರಮದ ಅನುಷ್ಠಾನ ಸಂಬಂಧ ಈ ಕಛೇರಿಯಿಂದ ಪ್ರತ್ಯೇಕ . (E-12745 DSERT/EVG/../2025-26 ໖: 21-05-2025) DSERT website ನಲ್ಲಿ ಪ್ರಕಟಿಸಲಾಗಿರುವ ಸುತ್ತೋಲೆ ಮತ್ತು ಸೇತುಬಂಧ ಸಾಹಿತ್ಯವನ್ನು ಬಳಸಿಕೊಳ್ಳುವುದು.

BREAKING: Education Department orders to conduct `Maulyankan` for students of classes 1-10 in all schools in the state!
Share. Facebook Twitter LinkedIn WhatsApp Email

Related Posts

ಗೋಲ್ಡ್ ಸ್ಮಗ್ಲಿಂಗ್ ಕೇಸ್ ನಲ್ಲಿ ನಟಿ ರನ್ಯಾ ರಾವ್ ಬಂಧನ ಪ್ರಕರಣ : ವಿಚಾರಣೆ ಆ.28ಕ್ಕೆ ಮುಂದೂಡಿದ ಹೈಕೋರ್ಟ್

23/07/2025 1:07 PM1 Min Read

BREAKING : ರಾಜ್ಯದಲ್ಲಿ ನಿಲ್ಲದ `ಹೃದಯಾಘಾತ’ದ ಸಾವಿನ ಸರಣಿ : ಹಾರ್ಟ್ ಅಟ್ಯಾಕ್ ಇಂದು ಮತ್ತೆ ಮೂವರು ಬಲಿ.!

23/07/2025 12:44 PM1 Min Read

ಗಮನಿಸಿ : ಮನೆಯಲ್ಲಿರುವ `ಫ್ರಿಡ್ಜ್’ ನಲ್ಲಿ ಕೆಟ್ಟ ವಾಸನೆ ಬರುತ್ತಿದ್ದರೆ ಜಸ್ಟ್ ಈ ಕೆಲಸ ಮಾಡಿ.!

23/07/2025 12:30 PM2 Mins Read
Recent News

ಗೋಲ್ಡ್ ಸ್ಮಗ್ಲಿಂಗ್ ಕೇಸ್ ನಲ್ಲಿ ನಟಿ ರನ್ಯಾ ರಾವ್ ಬಂಧನ ಪ್ರಕರಣ : ವಿಚಾರಣೆ ಆ.28ಕ್ಕೆ ಮುಂದೂಡಿದ ಹೈಕೋರ್ಟ್

23/07/2025 1:07 PM

BREAKING : ರಾಜ್ಯದ ಎಲ್ಲಾ ಶಾಲೆಗಳಲ್ಲಿ 1-10ನೇ ತರಗತಿ ವಿದ್ಯಾರ್ಥಿಗಳಿಗೆ `ಮೌಲ್ಯಾಂಕನ’ ನಡೆಸಲು ಶಿಕ್ಷಣ ಇಲಾಖೆ ಆದೇಶ.!

23/07/2025 1:05 PM

SHOCKING : ದೇಶದಲ್ಲಿ ನಿಲ್ಲದ ಕಾಮುಕರ ಅಟ್ಟಹಾಸ : ಅಪ್ರಾಪ್ತ ಬಾಲಕಿ ಮೇಲೆ ನಾಲ್ವರಿಂದ `ಗ್ಯಾಂಗ್ ರೇಪ್’ 

23/07/2025 12:55 PM

SHOCKING : ಲೈವ್ ರಿಪೋರ್ಟ್ ಮಾಡುವಾಗಲೇ ಕಾದಿತ್ತು ಶಾಕ್ : ಬಾಲಕಿ ಮೃತದೇಹದ ಮೇಲೆ ಕಾಲಿಟ್ಟ ಪತ್ರಕರ್ತ | Video Viral

23/07/2025 12:53 PM
State News
KARNATAKA

ಗೋಲ್ಡ್ ಸ್ಮಗ್ಲಿಂಗ್ ಕೇಸ್ ನಲ್ಲಿ ನಟಿ ರನ್ಯಾ ರಾವ್ ಬಂಧನ ಪ್ರಕರಣ : ವಿಚಾರಣೆ ಆ.28ಕ್ಕೆ ಮುಂದೂಡಿದ ಹೈಕೋರ್ಟ್

By kannadanewsnow0523/07/2025 1:07 PM KARNATAKA 1 Min Read

ಬೆಂಗಳೂರು : ಅಕ್ರಮ ಚಿನ್ನ ಸಾಗಾಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಾಫಿಪೊಸ ಅಡಿ ನಟಿ ರನ್ಯಾ ರಾವ್ ಬಂಧನ ಪ್ರಶ್ನಿಸಿ ಹೆಬಿಎಸ್…

BREAKING : ರಾಜ್ಯದ ಎಲ್ಲಾ ಶಾಲೆಗಳಲ್ಲಿ 1-10ನೇ ತರಗತಿ ವಿದ್ಯಾರ್ಥಿಗಳಿಗೆ `ಮೌಲ್ಯಾಂಕನ’ ನಡೆಸಲು ಶಿಕ್ಷಣ ಇಲಾಖೆ ಆದೇಶ.!

23/07/2025 1:05 PM

BREAKING : ರಾಜ್ಯದಲ್ಲಿ ನಿಲ್ಲದ `ಹೃದಯಾಘಾತ’ದ ಸಾವಿನ ಸರಣಿ : ಹಾರ್ಟ್ ಅಟ್ಯಾಕ್ ಇಂದು ಮತ್ತೆ ಮೂವರು ಬಲಿ.!

23/07/2025 12:44 PM

ಗಮನಿಸಿ : ಮನೆಯಲ್ಲಿರುವ `ಫ್ರಿಡ್ಜ್’ ನಲ್ಲಿ ಕೆಟ್ಟ ವಾಸನೆ ಬರುತ್ತಿದ್ದರೆ ಜಸ್ಟ್ ಈ ಕೆಲಸ ಮಾಡಿ.!

23/07/2025 12:30 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.