ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟಿ ರಮ್ಯಾ ಇತ್ತೀಚೆಗೆ ಹೇಳಿಕೆ ನೀಡಿದ್ದು ಅವರ ವಿರುದ್ಧ, ಅಭಿಮಾನಿಗಳು ಅಶ್ಲೀಲವಾಗಿ ಸಂದೇಶ ರವಾನಿಸಿದ್ದರು. ಈಗಾಗಲೇ ಸೈಬರ್ ಠಾಣೆ ಪೋಲಿಸರು 5ಕ್ಕೂ ಹೆಚ್ಚು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ ಇದೀಗ ಈ ಒಂದು ಪ್ರಕರಣದಲ್ಲಿ ನಟ ದರ್ಶನ್ ಅವರಿಗೆ ಜಾಮೀನು ರದ್ದಾಗುತ್ತಿದ್ದಂತೆ ನಟಿ ರಮ್ಯಾ ಕಾನೂನಿನಲ್ಲಿ ಎಲ್ಲರೂ ಸಮಾನರು ಎಂದು ಟ್ವೀಟ್ ಮೂಲಕ ದರ್ಶನ್ ಅಭಿಮಾನಿಗಳಿಗೆ ಕೌಂಟರ್ ಕೊಟ್ಟಿದ್ದಾರೆ.
ಸಾಮಾಜಿಕ ಜಾಲತಾಣ ಟ್ವೀಟ್ ನಲ್ಲಿ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅವರ ಜಾಮೀನು ರದ್ದು ಮಾಡಿದೆ. ಹೈಕೋರ್ಟ್ನ ಲೋಪಗಳನ್ನು ಸುಪ್ರೀಂ ಕೋರ್ಟ್ ಛೀಮಾರಿ ಹಾಕಿದೆ, ಆರೋಪಿಗಳು ಎಷ್ಟೇ ಪ್ರಭಾವಿಗಳಾಗಿದ್ದರೂ ಅವರು ಕಾನೂನಿಗೆ ಮೀರಿಲ್ಲ ಎಂದು ಸ್ಪಷ್ಟಪಡಿಸಿದೆ.
ಆರೋಪಿಗಳಿಗೆ ಕಸ್ಟಡಿಯಲ್ಲಿ 5 ಸ್ಟಾರ್ ಟ್ರೀಟ್ಮೆಂಟ್ ನೀಡಲಾಗಿದೆ ಎಂದು ನ್ಯಾಯಾಲಯ ಗಮನಿಸಿದೆ ಮತ್ತು ಜೈಲು ಸೂಪರಿಂಟೆಂಡೆಂಟ್ ಅನ್ನು ಅಮಾನತುಗೊಳಿಸಬೇಕಿತ್ತು ಎಂದು ಹೇಳಿದೆ. ಇನ್ನು ಮುಂದೆ, ಅಂತಹ ಯಾವುದೇ ದುಷ್ಕೃತ್ಯವು ಕ್ರಮಕ್ಕೆ ಆಹ್ವಾನ ನೀಡುತ್ತದೆ ಎಂದು ನ್ಯಾಯಾಲಯ ಎಚ್ಚರಿಸಿದೆ.. ಅದು ಜೈಲಿನ ಒಳಗಿನಿಂದ ತೆಗೆದ ಛಾಯಾಚಿತ್ರವಾಗಲಿ ಅಥವಾ ಸಿಗರೇಟಿನೊಂದಿಗೆ ಹುಲ್ಲುಹಾಸಿನ ಮೇಲೆ ಮಲಗಿರುವ ಆರೋಪಿಯಾಗಲಿ ಎಂದು ಬರೆದುಕೊಂಡಿದ್ದಾರೆ.
Actor Darshan's bail cancelled in Renukaswamy murder case!
Supreme Court tore into the High Court's lapses, making it clear no matter how influential the accused, they are not above the law
Court noted that the accused were given 5-star treatment in custody, and said… pic.twitter.com/AdzpQot2X6
— Nabila Jamal (@nabilajamal_) August 14, 2025