ದಕ್ಷಿಣಕನ್ನಡ : ದಕ್ಷಿಣಕನ್ನಡ ಜಿಲ್ಲೆಯ ವಿಟ್ಲ ಪೊಲೀಸ್ ಠಾಣೆ ವ್ಯಾಪ್ತಿಯ ವಿಟ್ಲ ಮುಡ್ನೂರು ಗ್ರಾಮದ ಕಂಬಳಬೆಟ್ಟು ಸಮೀಪದ ನೂಜಿಯಲ್ಲಿ ಶುಕ್ರವಾರ ಸಂಜೆ ದೊಡ್ಡ ಸದ್ದಿನೊಂದಿಗೆ ಸ್ಫೋಟ ಸಂಭವಿಸಿದೆ. ಈ ಹಿನ್ನೆಲೆಯಲ್ಲಿ ಸುಡುಮದ್ದು ತಯಾರಿಕಾ ಘಟಕದ ವ್ಯಕ್ತಿಯೊಬ್ಬನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.
ಸರ್ಕಾರಿ ಜಮೀನಿನಲ್ಲಿ ಸ್ಥಳೀಯ ನಿವಾಸಿಯಾದ ಆರೋಪಿ ಅಬ್ದುಲ್ ಗಫೂರ್ ಎಂಬಾತ ಅಕ್ರಮವಾಗಿ ಶೆಡ್ ನಿರ್ಮಿಸಿ, ಯಾವುದೇ ಪರವಾನಗಿ ಪಡೆಯದೇ ಸುಡುಮದ್ದುಗಳನ್ನು ತಯಾರಿಸಿ, ಅಕ್ರಮವಾಗಿ ಸಂಗ್ರಹಿಸಿದ್ದ. ಈ ಸುಡುಮದ್ದುಗಳು ಸ್ಪೋಟಗೊಂಡಿದೆ.
ಸ್ಫೋಟದ ಪರಿಣಾಮ ಸುತ್ತಮುತ್ತಲಿನ ಮರಗಳು ಸುಟ್ಟು ಹೋಗಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ಆರೋಪಿತ ಅಬ್ದುಲ್ ಗಫೂರ್ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.








