ಬೆಂಗಳುರು : ಬೆಂಗಳೂರಿನಲ್ಲಿ ಕಾಂಗ್ರೆಸ್ ಮುಖಂಡ, ಕೇಂದ್ರ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ನಿಯೋಗ ದೂರು ನೀಡಿದೆ.
ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಛಲವಾಧಿ ನಾರಾಯಣಸ್ವಾಮಿ ನೇತೃತ್ವದ ಬಿಜೆಪಿ ನಿಯೋಗ ಇಂದು ರಾಹುಲ್ ಗಾಂಧಿ ವಿರುದ್ಧ ದೂರು ನೀಡಿದೆ.
ಇತ್ತೀಚೆಗೆ ಅಮೆರಿಕಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮೀಸಲಾತಿ ಕುರಿತು ಹೇಳಿಕೆ ನೀಡಿದ ಆರೋಪದ ಮೇಲೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.