ಶಿವಮೊಗ್ಗ : ಶಿವಮೊಗ್ಗದಲ್ಲಿ ಹಿಂದೂ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣಕ್ಕೆ ಸಂಬಂಧಿಸಿಂತೆ ಸಾಕ್ಷಿಗೆ ಯುವಕನೊಬ್ಬ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಇದೀಗ ಬೆದರಿಕೆ ಹಾಕಿದ ಯುವಕನ ವಿರುದ್ಧ ಕೇಸ್ ದಾಖಲಾಗಿದೆ.
ಕೋರ್ಟಿಗೆ ತೆರಳಿ ಸಾಕ್ಷಿ ಹೇಳದಂತೆ ಸಾಕ್ಷಿದಾರನಿಗೆ ಬೆದರಿಕೆ ಹಾಕಲಾಗಿದೆ. ಈ ಸಂಬಂಧ ಪೊಲೀಸರು ಇದೀಗ ಪ್ರಕರಣ ದಾಖಲಿಸಿದ್ದಾರೆ. ಶಿವಮೊಗ್ಗದ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ಹರ್ಷ ಹತ್ಯೆ ಪ್ರಕರಣದಲ್ಲಿ ಪೆಟ್ರೋಲ್ ಬಂಕ್ ಸಿಬ್ಬಂದಿ ಸಾಕ್ಷಿಯಾಗಿದ್ದ. ಡಿಸೆಂಬರ್ 12ರಂದು ಎನ್ಐಎ ನ್ಯಾಯಾಲಯದಲ್ಲಿ ಸಾಕ್ಷಿ ಹೇಳಿದ್ದ ಯುವಕ ಅನಂತರ ಸಾಕ್ಷಿ ಹೇಳದಂತೆ ಅಪರಿಚಿತ ವ್ಯಕ್ತಿಯಿಂದ ಬೆದರಿಕೆ ಹಾಕಲಾಗಿತ್ತು. ಮರುದಿನ ಕೋರ್ಟ್ ಸೂಚನೆಯ ಮೇರೆಗೆ ಪ್ರಕರಣ ದಾಖಲಾಗಿದೆ.
ಶಿವಮೊಗ್ಗದ ಸೀಗೆಹಟ್ಟಿ ಬಳಿ ಎರಡು ವರ್ಷದ ಹಿಂದೆ ಹರ್ಷ ಹತ್ಯೆ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೆಟ್ರೋಲ್ ಬಂಕ್ ಉದ್ಯೋಗಿಯೊಬ್ಬನನ್ನು NIA ಸಾಕ್ಷಿಯಾಗಿ ಪರಿಗಣಿಸಿತ್ತು.ಈಗ ಆತನಿಗೆ ಅಪರಿಚಿತನೊಬ್ಬ ಬೆದರಿಕೆ ಒಡ್ಡಿರುವ ಆರೋಪ ಕೇಳಿ ಬಂದಿದೆ. ಹಿಂದೂ ಹರ್ಷ ಹತ್ಯೆಯಾದ ದಿನ ಆರೋಪಿಗಳು ಶಿವಮೊಗ್ಗದ ಪೆಟ್ರೋಲ್ ಬಂಕ್ನಲ್ಲಿ ತಮ್ಮ ಕಾರಿಗೆ ಇಂಧನ ಭರ್ತಿ ಮಾಡಿಸಿಕೊಂಡಿದ್ದರು. ಪೆಟ್ರೋಲ್ ಬಂಕ್ನಲ್ಲಿ ಕೆಲಸ ಮಾಡುತ್ತಿದ್ದ ಯುವಕನೊಬ್ಬ ಪೆಟ್ರೋಲ್ ಭರ್ತಿ ಮಾಡಿದ್ದ. ಈ ಕಾರಣಕ್ಕೆ ಆತನನ್ನು ಸಾಕ್ಷಿಯಾಗಿ ಪರಿಗಣಿಸಲಾಗಿತ್ತು.