ಬೆಂಗಳೂರು : ನಿನ್ನೆ ಬೆಂಗಳೂರಿನಲ್ಲಿ ತಡರಾತ್ರಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಪೊಲೀಸರ ಸಮಯ ಪ್ರಜ್ಞೆಯಿಂದ ಭಾರಿ ದುರಂತ ಒಂದು ತಪ್ಪಿದೆ. ದೇವರ ಚಿಕ್ಕನಹಳ್ಳಿಯ ಕೃಷ್ಣ ಲೇಔಟ್ ನಲ್ಲಿ ಈ ಒಂದು ಅಗ್ನಿ ಅನಾಹುತ ಸಂಭವಿಸಿದೆ. ಎಲೆಕ್ಟ್ರಿಕ್ ಶಾರ್ಟ್ ಸರ್ಕ್ಯೂಟ್ ನಿಂದ ಕಟ್ಟಡಕ್ಕೆ ಬೆಂಕಿ ಬಿದ್ದಿದೆ.
ಅಗ್ನಿ ಅವಘಡ ವಿಚಾರ ತಿಳಿದು ಸ್ಥಳಕ್ಕೆ ಹೊಯ್ಸಳ ಸಿಬ್ಬಂದಿ ತೆರಳಿದ್ದಾರೆ. ಈ ವೇಳೆ ಪೊಲೀಸರು ಕಟ್ಟಡದಲ್ಲಿ ಸಿಲುಕಿದ ಆರು ಜನರನ್ನು ರಕ್ಷಿಸಿದ್ದಾರೆ. ನೆಲ ಮಹಡಿಯಲ್ಲಿ ಸಿಲುಕಿದ್ದ ಶೀಲಾ, ಗೋಪಿ, ಅಭಿಷೇಕ್ ಹಾಗು ರಮ್ಯಾ ರಕ್ಷಣೆ ಮಾಡಿದ್ದಾರೆ. ಸಣ್ಣಪುಟ್ಟ ಗಾಯಗೊಂಡ ನಾಲ್ವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ ಮೂರನೇ ಮಹಡಿಯಲ್ಲಿ ಸಿಲುಕಿದ್ದ ಮತ್ತೆ ಇಬ್ಬರನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ ಅಗ್ನಿ ಅವಘಡದಲ್ಲಿ ಎರಡು ದ್ವಿಚಕ್ರ ವಾಹನಗಳು ಸುಟ್ಟು ಕರಕಲಾಗಿವೆ. ಮೀಟರ್ ಬೋರ್ಡ್ ಹತ್ತಿರ ನಿಲ್ಲಿಸಿದ್ದ 2 ಬೈಕ್ ಗಳು ಸುಟ್ಟು ಭಾಸ್ಮವಾಗಿವೆ.