ಬಾಗಲಕೋಟೆ : ಕೆಲಸದಿಂದ ವಜಾಗೊಂಡಿದ್ದ ಅಮಾನತ್ತುಗೊಂಡಿದ್ದ ಕೆಎಸ್ ಆರ್ ಟಿಸಿ ಬಸ್ ಕಂಡಕ್ಟರ್ ನಾಪತ್ತೆಯಾಗಿರುವ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ.
ಬಾಗಲಕೋಟೆ ಜಿಲ್ಲೆಯ ಚಿಕ್ಕಪಡಸಲಗಿ ಸೇತುವೆ ಬಳಿ ಕೆಲಸದಿಂದ ವಜಾಗೊಂಡಿದ್ದ ಕೆಎಸ್ ಆರ್ ಟಿಸಿ ಬಸ್ ಕಂಡಕ್ಟರ್ ಚೇತನ್ ಕರ್ವೆ (30) ನಾಪತ್ತೆಯಾಗಿರುವ ಘಟನೆ ನಡೆದಿದೆ..
ಚಿಕ್ಕಪಡಸಲಗಿ ಗ್ರಾಮದ ಕೃಷ್ಣಾ ನದಿ ಸೇತುವೆ ಬಳಿಯಿಂದ ಚೇತನ್ ಕರ್ವೆ ನಾಪತ್ತೆಯಾಗಿದ್ದು, ಕೃಷ್ಣಾ ನದಿಯಲ್ಲಿ ಚೇತನ್ ಕರ್ವೆ ಮುಳಗಿರುವ ಶಂಕೆ ವ್ಯಕ್ತವಾಗಿದೆ. ಸಾವಳಗಿ ಪೊಳೀಸರು, ಜಮಖಂಡಿ ಅಗ್ನಿ ಶಾಮಕ ಸಿಬ್ಬಂದಿ ಶೋಧಾ ಕಾರ್ಯಾಚರಣೆ ನಡೆಸಿದ್ದಾರೆ.